ಪೂರ್ಣೇಶ್ ಮೋದಿ 
ದೇಶ

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಬಿಜೆಪಿ ನಾಯಕನಿಗೆ ಒಲಿಯಿತು ಪ್ರಮುಖ ಹುದ್ದೆ!

ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ.

ನವದೆಹಲಿ: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

2019ರಲ್ಲಿ ಕೋಲಾರದಲ್ಲಿ ನಡೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ಪ್ರಸ್ತಾಪಿಸಿದ್ದ ರಾಹುಲ್​​​​ ಗಾಂಧಿ ವಿರುದ್ಧ ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​​​ ನ್ಯಾಯಾಲಯವು ಮಾರ್ಚ್‌ನಲ್ಲಿ ರಾಹುಲ್​​​ ಗಾಂಧಿ ಅವರು ದೋಷಿ ಎಂದು ಹೇಳಿ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ನಂತರ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ರಾಹುಲ್​​​ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ಈ ವಿಚಾರವಾಗಿ ರಾಹುಲ್​​​ ಗಾಂಧಿ ಅವರು ಸುಪ್ರೀಂ ಕೋರ್ಟ್​ಗೆ ಆಗಸ್ಟ್​​ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ಅವರ ಶಿಕ್ಷೆಯನ್ನು ತಡೆಹಿಡಿಯಿತು. ನಂತರ ಮತ್ತೆ ಲೋಕಸಭಾ ಸದಸ್ಯತ್ವವನ್ನು ಅವರಿಗೆ ನೀಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT