ಪೂರ್ಣೇಶ್ ಮೋದಿ 
ದೇಶ

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದ ಬಿಜೆಪಿ ನಾಯಕನಿಗೆ ಒಲಿಯಿತು ಪ್ರಮುಖ ಹುದ್ದೆ!

ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ.

ನವದೆಹಲಿ: ಮೋದಿ ಉಪನಾಮಕ್ಕೆ ಸಂಬಂಧಿಸಿದಂತೆ ರಾಹುಲ್​​​ ಗಾಂಧಿ ವಿರುದ್ಧ ದೂರು ನೀಡಿದ್ದ ಬಿಜೆಪಿ ನಾಯಕ ಪೂರ್ಣೇಶ್ ಮೋದಿಗೆ ಪ್ರಮುಖ ಸ್ಥಾನ ನೀಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಪೂರ್ಣೇಶ್ ಮೋದಿಯನ್ನು ದಾದ್ರಾ ನಗರ ಹವೇಲಿ ಮತ್ತು ದಮನ್ ದಿಯು ಉಸ್ತುವಾರಿ ಹಾಗೂ ದುಶ್ಯಂತ್ ಪಟೇಲ್ ಅವರನ್ನು ಸಹ-ಪ್ರಭಾರಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

2019ರಲ್ಲಿ ಕೋಲಾರದಲ್ಲಿ ನಡೆದ ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ಪ್ರಸ್ತಾಪಿಸಿದ್ದ ರಾಹುಲ್​​​​ ಗಾಂಧಿ ವಿರುದ್ಧ ಸೂರತ್ ಪಶ್ಚಿಮದ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ ನ್ಯಾಯಾಲಯದಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರತ್​​​ ನ್ಯಾಯಾಲಯವು ಮಾರ್ಚ್‌ನಲ್ಲಿ ರಾಹುಲ್​​​ ಗಾಂಧಿ ಅವರು ದೋಷಿ ಎಂದು ಹೇಳಿ ಮೂರು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿತ್ತು.

ನಂತರ ವಯನಾಡ್ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ರಾಹುಲ್​​​ ಗಾಂಧಿ ಅವರನ್ನು ಅನರ್ಹಗೊಳಿಸಲಾಯಿತು. ಈ ವಿಚಾರವಾಗಿ ರಾಹುಲ್​​​ ಗಾಂಧಿ ಅವರು ಸುಪ್ರೀಂ ಕೋರ್ಟ್​ಗೆ ಆಗಸ್ಟ್​​ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ಅವರ ಶಿಕ್ಷೆಯನ್ನು ತಡೆಹಿಡಿಯಿತು. ನಂತರ ಮತ್ತೆ ಲೋಕಸಭಾ ಸದಸ್ಯತ್ವವನ್ನು ಅವರಿಗೆ ನೀಡಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT