ಸಂಗ್ರಹ ಚಿತ್ರ 
ದೇಶ

ವಾರ್ಷಿಕ ಶಬರಿಮಲೆ ಯಾತ್ರೆ ಪ್ರಾರಂಭ: ಭಕ್ತರಿಗೆ ಬಾಗಿಲು ತೆರೆದ ಅಯ್ಯಪ್ಪ ಸ್ವಾಮಿ ದೇಗುಲ

ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.

ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ.

ಎರಡು ತಿಂಗಳ ದೀರ್ಘ ವಾರ್ಷಿಕ ಯಾತ್ರಾ ಋತುವಿನ ಆರಂಭ ವಾರ್ಷಿಕ ಮಂಡಲಂ-ಮಕರವಿಳಕ್ಕು ಉತ್ಸವಕ್ಕಾಗಿ ಶಬರಿಮಲೆಯ ಅಯ್ಯಪ್ಪ ದೇವಾಲಯದ ಬಾಗಿಲನ್ನು ಗುರುವಾರ ತೆರೆಯಲಾಗಿದ್ದು. ಶುಕ್ರವಾರದಿಂದ 41 ದಿನಗಳ ತೀರ್ಥಯಾತ್ರೆ ಆರಂಭವಾಗಿದೆ.

ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಮಂದಿ ಅಯ್ಯಪ್ಪ ಭಕ್ತರು ಶಬರಿಮಲೆಗೆ ಯಾತ್ರೆ ಕೈಗೊಳ್ಳಲಿದ್ದಾರೆ.

ಗುರುವಾರ ದೇವಾಲಯದ ‘ತಂತ್ರಿ’ (ಮುಖ್ಯ ಅರ್ಚಕ) ಮಹೇಶ್ ಮೋಹನರು ಅವರ ನೇತೃತ್ವದಲ್ಲಿ ಅಯ್ಯಪ್ಪ ಸನ್ನಿಧಿಯ ಗರ್ಭಗುಡಿಯ ಬಾಗಿಲನ್ನು ತೆರೆಯಲಾಗಿದೆ. ಇದರ ಜೊತೆಗೆ ಮತ್ತೊಬ್ಬ ಮುಖ್ಯ ಅರ್ಚಕ ಕೆ ಜಯರಾಮನ್ ನಂಬೂತಿರಿ ಅವರ ಸಮ್ಮುಖದಲ್ಲಿ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆದಿದೆ.

ತೀರ್ಥಯಾತ್ರೆ ಮೂಲಕ ದೊಡ್ಡ ಸಂಖ್ಯೆಯಲ್ಲಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಆಗಮಿಸುವುದರಿಂದ ಸಾಲುಗಳನ್ನು ನಿಯಂತ್ರಿಸಲು ಸಿಬ್ಬಂದಿ ನೇಮಕ ಕೂಡ ಮಾಡಲಾಗಿದೆ.

ಈಗಾಗಲೇ ದೇವರ ದರ್ಶನ ಪಡೆಯಲು ಸಾವಿರಾರು ಭಕ್ತರು ಆಗಮಿಸಿದ್ದು, ಸರತಿ ಸಾಲಿನಲ್ಲಿ ನಿಂತು ಅಯ್ಯಪ್ಪ ಸ್ವಾಮಿಯ ದರ್ಶನ ಪಡೆಯುತ್ತಿದ್ದಾರೆ.

ಮಲಯಾಳಂ ಕ್ಯಾಲೆಂಡರ್​ ಪ್ರಕಾರ 41 ದಿನಗಳ ಕಾಲ ದೇಗುಲದಲ್ಲಿ ಮಂಡಲ ಪೂಜೆ ಹಾಗೂ ಮಕರವಿಳಕ್ಕು ಯಾತ್ರೆ ಆರಂಭವಾಗಲಿದೆ. ಜನವರಿ 15ರ ಮಕರ ಸಂಕ್ರಮಣ ದಿನದಂದು ಮಕರವಿಳಕ್ಕು ನೆರವೇರಲಿದ್ದು, ದೇಶದಾದ್ಯಂತ ಲಕ್ಷಾಂತರು ಭಕ್ತರು ಶಬರಿಮಲೆಗೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ.

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಆಗಮಿಸುವ ಭಕ್ತರಿಗಾಗಿ ಮೂಲ ಸೌಕರ್ಯಗಳನ್ನು ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ವ್ಯವಸ್ಥೆ, ಆಸ್ಪತ್ರೆ, ಶೌಚಾಲಯ ಸೇರಿದಂತೆ ಭಕ್ತರಿಗೆ ತಂಗುವ, ಪಾರ್ಕಿಂಗ್​ ವ್ಯವಸ್ಥೆಗಳನ್ನು ಮಾಡಲಾಗಿದೆ. ಅಲ್ಲದೇ ಕೇರಳ ಸರ್ಕಾರದಿಂದ ವಿಶೇಷ ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಜನಸಂದಣಿಯನ್ನು ನಿರ್ವಹಿಸಲು ಆರು ಹಂತಗಳಲ್ಲಿ 13,000 ಪೊಲೀಸ್ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗುವುದು ಮತ್ತು ಇಡೀ ಯಾತ್ರಾ ವಲಯವನ್ನು ಕಟ್ಟುನಿಟ್ಟಾದ ಕಣ್ಗಾವಲು ಜಾಲದ ಅಡಿಯಲ್ಲಿ ತರಲಾಗಿದೆ.

ಮೂರು ತಾತ್ಕಾಲಿಕ ಪೊಲೀಸ್ ಠಾಣೆಗಳನ್ನು – ಸನ್ನಿಧಾನಂ, ನಿಲಕಲ್ ಮತ್ತು ವಡಸ್ಸೆರಿಕ್ಕರಾದಲ್ಲಿ ತಲಾ ಒಂದು ತೆರೆಯಲಾಗಿದೆ. ನಿಲಕಲ್ ಮತ್ತು ಸುತ್ತಮುತ್ತಲಿನ 17 ಮೈದಾನಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ವರ್ಚುವಲ್ ಕ್ಯೂಗಳಿಗಾಗಿ 15 ಕೌಂಟರ್‌ಗಳನ್ನು ತೆರೆಯಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT