ಎಸ್ ವೆಂಕಟರಾಮನ್ 
ದೇಶ

ಆರ್‌ಬಿಐ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 

ಚೆನೈ: ಅನಾರೋಗ್ಯದಿಂದ ಬಳಲುತ್ತಿದ್ದ ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾಜಿ ಗವರ್ನರ್ ಎಸ್ ವೆಂಕಟರಾಮನ್ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. 

ವೆಂಕಟರಾಮನ್  ಭಾರತೀಯ ಆಡಳಿತ ಸೇವೆಯ ಸದಸ್ಯರಾಗಿದ್ದರು ಮತ್ತು ಆರ್‌ಬಿಐ ಗವರ್ನರ್ ಪಾತ್ರ ವಹಿಸಿಕೊಳ್ಳುವ ಮೊದಲು ಅವರು ಹಣಕಾಸು ಕಾರ್ಯದರ್ಶಿಯಾಗಿ ಮತ್ತು ನಂತರ ಕರ್ನಾಟಕ ಸರ್ಕಾರದ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದರು.

ವೆಂಕಟರಾಮನ್  ಡಿಸೆಂಬರ್ 1990 ಮತ್ತು ಡಿಸೆಂಬರ್ 1992 ರ ನಡುವೆ ಆರ್‌ಬಿಐಗೆ ಸೇವೆ ಸಲ್ಲಿಸಿದ್ದರು. ಇದರ ಬಿಕ್ಕಟ್ಟಿನ ಸಂದರ್ಭದಲ್ಲಿ ಅವರ ಕೊಡುಗೆಗಳನ್ನು ಸ್ಮರಿಸಿರುವ ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್, ವೆಂಕಟರಾಮನ್ ಅದ್ಬುತ ವ್ಯಕ್ತಿತ್ವವುಳ್ಳ, ಜನರ ಸೇವಕ ಎಂದು ಬಣ್ಣಿಸಿದ್ದಾರೆ.

ಅವರ ಅವಧಿಯಲ್ಲಿ ಭಾರತ ಐಎಂಎಫ್‌ನ ಸ್ಥಿರೀಕರಣ ಕಾರ್ಯಕ್ರಮವನ್ನು ಅಳವಡಿಸಿಕೊಂಡು, ರೂಪಾಯಿ ಅಪಮೌಲ್ಯೀಕರಣ ಮತ್ತು ಆರ್ಥಿಕ ಸುಧಾರಣೆ ಕಾರ್ಯಕ್ರಮ ಪ್ರಾರಂಭಿಸಿತು ಎಂದು ಆರ್‌ಬಿಐ ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT