ಲೆಸ್ತೇನ್ ಪ್ರೇಮಿಯಿಂದ ಭದ್ರತೆ ಉಲ್ಲಂಘನೆ 
ದೇಶ

ICC world cup 2023: ಪ್ಯಾಲೆಸ್ತೇನ್ ಪ್ರೇಮಿಯಿಂದ ಭದ್ರತೆ ಉಲ್ಲಂಘನೆ, ಕೊಹ್ಲಿಯತ್ತ ಧಾವಿಸಿದ ವ್ಯಕ್ತಿ!

ಅಹ್ಮದಾಬಾದ್ ನಲ್ಲಿ ನಡೆಯುತ್ತಿರುವ ಐಸಿಸಿ 2023 ವಿಶ್ವಕಪ್ ಪಂದ್ಯದಲ್ಲಿ ಭದ್ರತಾ ಉಲ್ಲಂಘನೆಯಾಗಿದೆ. 

ಅಹ್ಮದಾಬಾದ್: ಅಹ್ಮದಾಬಾದ್ ನಲ್ಲಿ ನಡೆಯುತ್ತಿರುವ ಐಸಿಸಿ 2023 ವಿಶ್ವಕಪ್ ಪಂದ್ಯದಲ್ಲಿ ಭದ್ರತಾ ಉಲ್ಲಂಘನೆಯಾಗಿದೆ. ಪ್ಯಾಲೆಸ್ತೇನ್ ಅಭಿಮಾನಿಯೋರ್ವ ಬಿಗಿ ಭದ್ರತೆಯ ನಡುವೆಯೂ ಕ್ರಿಕೆಟ್ ಮೈದಾನಕ್ಕೆ ನುಗ್ಗಿ ಕೊಹ್ಲಿಯತ್ತ ಧಾವಿಸಿದ ಘಟನೆ ವರದಿಯಾಗಿದೆ. 

ಮೊದಲ ವಿರಾಮಕ್ಕೂ ಮುನ್ನ ಈ ಆತಂಕಕಾರಿ ಘಟನೆ ವರದಿಯಾಗಿದೆ. ಭದ್ರತಾ ಸಿಬ್ಬಂದಿಗಳು ಆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತನನ್ನು ಚೀನಾ-ಫಿಲಿಪಿನೋ ಮೂಲದ ಆಸ್ಟ್ರೇಲಿಯಾ ವ್ಯಕ್ತಿ ವೇಯ್ನ್ ಜಾನ್ಸನ್ ಎಂದು ಗುರುತಿಸಲಾಗಿದೆ.

ವೇಯ್ನ್ ಜಾನ್ಸನ್ ನ್ನು ಬಂಧಿಸಿ ಚಾಂದ್ ಖೇಡಾ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.  ಕ್ರಿಕೆಟ್ ಆಟಗಳಲ್ಲಿ ರಾಜಕೀಯ ಘೋಷಣೆಗಳು ಅಪರಾಧವಾಗಿದೆ ಆದರೆ ಜಾನ್ಸನ್ ವಿದೇಶಿ ಪ್ರಜೆಯಾಗಿರುವುದರಿಂದ ಅವರ ವಿರುದ್ಧ ಯಾವ ರೀತಿಯ ಕ್ರಮ ತೆಗೆದುಕೊಳ್ಳಲಾಗುವುದು ಎಂಬುದು ಇನ್ನೂ ತಿಳಿದಿಲ್ಲ.

ಜಾನ್ಸನ್ ಪ್ಯಾಲೆಸ್ತೀನ್ ಧ್ವಜದ ವಿನ್ಯಾಸದ ಮಾಸ್ಕ್ ಮತ್ತು ಎರಡೂ ಬದಿಗಳಲ್ಲಿ ಸ್ಲೋಗನ್‌ಗಳನ್ನು ಹೊಂದಿದ್ದ ಟಿ-ಶರ್ಟ್ ನ್ನು ಧರಿಸಿದ್ದರು. ಟೀ-ಶರ್ಟ್‌ನ ಮುಂಭಾಗದಲ್ಲಿ, 'ಪ್ಯಾಲೆಸ್ಟೈನ್ ಬಾಂಬ್ ಸ್ಫೋಟವನ್ನು ನಿಲ್ಲಿಸಿ' ಎಂದು ಮತ್ತು ಹಿಂಭಾಗದಲ್ಲಿ, 'ಪ್ಯಾಲೆಸ್ತೀನ್ ಉಳಿಸಿ' ಎಂದು ಬರೆಯಲಾಗಿತ್ತು. ಆತ ಹಠಾತ್ ಒಳನುಗ್ಗಿದ್ದು, ಭದ್ರತಾ ಸಿಬ್ಬಂದಿಗಳು ಆತನನ್ನು ತ್ವರಿತವಾಗಿ ಬಂಧಿಸಿದ್ದಾರೆ. 

ಐಸಿಸಿ ತನ್ನ ಈವೆಂಟ್‌ನಲ್ಲಿ ಯಾವುದೇ ರಾಜಕೀಯ ಘೋಷಣೆಗಳನ್ನು ಅನುಮತಿಸುವುದಿಲ್ಲ ಮತ್ತು ಅಂತಹ ಯಾವುದೇ ಕಾರ್ಯವನ್ನು ಭಾರತದಲ್ಲಿ ಸಹ ಅನುಮತಿಸಲಾಗುವುದಿಲ್ಲ.

ಇಸ್ರೇಲ್ ಮತ್ತು ಪ್ಯಾಲೆಸ್ಟೈನ್ ಉಗ್ರಗಾಮಿ ಗುಂಪು ಹಮಾಸ್ ಅಕ್ಟೋಬರ್ 7 ರಿಂದ ಯುದ್ಧದಲ್ಲಿ ತೊಡಗಿಸಿಕೊಂಡಿದೆ, ಹಮಾಸ್ ಕಿಬ್ಬುಟ್ಜ್ ರೀಮ್‌ನಲ್ಲಿ ಸಂಗೀತ ಉತ್ಸವದ ಮೇಲೆ ದಾಳಿ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT