ಪ್ರಾತಿನಿಧಿಕ ಚಿತ್ರ 
ದೇಶ

22 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ

ಐಎಂಬಿಎಲ್ ಉಲ್ಲಂಘಿಸಿದ ಆರೋಪದ ಮೇಲೆ ರಾಮನಾಥಪುರಂನ ಪಂಬನ್ ಪ್ರದೇಶದಿಂದ ಬಂದ ಎರಡು ದೋಣಿಗಳಲ್ಲಿದ್ದ 22 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಮುಂದಿನ ಕಾನೂನು ಕ್ರಮಗಳಿಗಾಗಿ ಬಂಧಿತ ಮೀನುಗಾರರನ್ನು ಮತ್ತು ಅವರ ವಶಪಡಿಸಿಕೊಂಡ ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ.

ರಾಮನಾಥಪುರಂ: ಐಎಂಬಿಎಲ್ ಉಲ್ಲಂಘಿಸಿದ ಆರೋಪದ ಮೇಲೆ ರಾಮನಾಥಪುರಂನ ಪಂಬನ್ ಪ್ರದೇಶದಿಂದ ಬಂದ ಎರಡು ದೋಣಿಗಳಲ್ಲಿದ್ದ 22 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. 

ಮುಂದಿನ ಕಾನೂನು ಕ್ರಮಗಳಿಗಾಗಿ ಬಂಧಿತ ಮೀನುಗಾರರನ್ನು ಮತ್ತು ಅವರ ವಶಪಡಿಸಿಕೊಂಡ ದೋಣಿಗಳನ್ನು ವಶಕ್ಕೆ ಪಡೆಯಲಾಗಿದೆ. ಚಂಡಮಾರುತದ ಎಚ್ಚರಿಕೆಯಿಂದಾಗಿ ಹಲವು ದಿನಗಳ ನಂತರ ಶನಿವಾರ ಮೀನುಗಾರರು ಸಮುದ್ರಕ್ಕೆ ಇಳಿದಿದ್ದಾರೆ ಎಂಬುದು ಗಮನಿಸಬೇಕಾದ ಸಂಗತಿ.

ನವೆಂಬರ್ 15ರಂದು ನಾಡದೋಣಿ ಮೀನುಗಾರರು ಸಮುದ್ರಕ್ಕೆ ಇಳಿದಿದ್ದರು. ದೋಣಿಗಳು ಐಎಂಬಿಎಲ್ ಬಳಿ ಮೀನುಗಾರಿಕೆಯಲ್ಲಿ ತೊಡಗಿದ್ದಾಗ, ಶ್ರೀಲಂಕಾ ನೌಕಾಪಡೆಯು ಭಾರತೀಯ ಮೀನುಗಾರರಿದ್ದ ದೋಣಿಗಳನ್ನು ಅಲ್ಲಿಂದ ಓಡಿಸಿತು. ಆದರೆ, ಅವುಗಳ ಪೈಕಿ ಎರಡು ದೋಣಿಗಳು ಶ್ರೀಲಂಕಾದ ಸಮುದ್ರದಲ್ಲಿ ಮೀನುಗಾರಿಕೆ ಮುಂದುವರಿಸಿವೆ ಎಂದು ಆರೋಪಿಸಲಾಗಿದೆ.

ಇದರ ಪರಿಣಾಮವಾಗಿ, ಉತ್ತರ ನೌಕಾ ಕಮಾಂಡ್ ಪಾಯಿಂಟ್ ಪೆಡ್ರೊದ ಲಂಕಾದ ನೀರಿನಲ್ಲಿ ಮೀನುಗಾರಿಗೆ ಮಾಡಿದ ಆರೋಪದ ಮೇಲೆ 22 ಮೀನುಗಾರರನ್ನು ಬಂಧಿಸಿದೆ. ಒಂದು ದೋಣಿ 10 ಜನರನ್ನು ಹೊತ್ತೊಯ್ದರೆ, ಇನ್ನೊಂದು 12 ಜನರನ್ನು ಹೊತ್ತೊಯ್ದಿತ್ತು. ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬಂಧಿತ ಮೀನುಗಾರರನ್ನು ಜಾಫ್ನಾ ಬಂದರಿಗೆ ಕರೆದೊಯ್ಯಲಾಗಿದೆ. ಅಲ್ಲಿ ಅವರನ್ನು ಮುಂದಿನ ಕ್ರಮಗಳಿಗಾಗಿ ಮೀನುಗಾರಿಕೆ ಇಲಾಖೆಗೆ ಹಸ್ತಾಂತರಿಸಲಾಯಿತು.

ಈ ವರ್ಷ ದ್ವೀಪ ರಾಷ್ಟ್ರದಿಂದ ಸೆರೆ ಸಿಕ್ಕ ಭಾರತೀಯ ಮೀನುಗಾರರ ಸಂಖ್ಯೆ 196ಕ್ಕೆ ತಲುಪಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಮೀನುಗಾರರ ಬಿಡುಗಡೆಗೆ ಕೇಂದ್ರ ಕ್ರಮ ಕೈಗೊಳ್ಳಬೇಕು ಎಂದು ಮೀನುಗಾರರ ಸಂಘಗಳು ಒತ್ತಾಯಿಸಿವೆ. 

ಶ್ರೀಲಂಕಾದ ನೌಕಾಪಡೆಯ ಹೇಳಿಕೆ ಪ್ರಕಾರ, ಮೀನುಗಾರರನ್ನು ಕಂಕಸಂತುರೆ ಬಂದರಿಗೆ ಕರೆತರಲಾಗಿದ್ದು, ಅವರನ್ನು ಮೈಲಾಡಿಯ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT