ಏರ್ ಗನ್ ನೊಂದಿಗೆ ಬಂದ ಯುವಕ(ಸಿಸಿಟಿವಿ ದೃಶ್ಯ) 
ದೇಶ

ಶಾಲೆಗೆ ಬಂದು ಯುವಕನ ಹುಚ್ಚಾಟ: ಗಾಳಿಯಲ್ಲಿ ಗುಂಡು; ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ಆತಂಕ!

ತ್ರಿಶೂರ್‌ನ ಖಾಸಗಿ ಶಾಲೆಯೊಂದಕ್ಕೆ ಏರ್‌ಗನ್‌ನೊಂದಿಗೆ ಅತಿಕ್ರಮ ಪ್ರವೇಶ ಮಾಡಿದ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ನಡುಕ ಹುಟ್ಟಿಸಿದೆ.

ತ್ರಿಸೂರು: ತ್ರಿಶೂರ್‌ನ ಖಾಸಗಿ ಶಾಲೆಯೊಂದಕ್ಕೆ ಏರ್‌ಗನ್‌ನೊಂದಿಗೆ ಅತಿಕ್ರಮ ಪ್ರವೇಶ ಮಾಡಿದ ಯುವಕ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವಿದ್ಯಾರ್ಥಿಗಳು ಮತ್ತು ಶಿಕ್ಷಕರಲ್ಲಿ ನಡುಕ ಹುಟ್ಟಿಸಿದೆ.

ತ್ರಿಶೂರ್ ನ ನಾಯ್ಕನಾಲ್ ವಿವೇಕೋದಯಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಬೆಳಗ್ಗೆ 10.30ರ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸರು ಶಾಲೆಗೆ ತೆರಳಿ ಯುವಕನನ್ನು ಬಂಧಿಸಿದ್ದಾರೆ.

ತ್ರಿಶೂರ್ ಬಳಿಯ ಮುಲಾಯಂ ಮೂಲದ ಜಗನ್ (19) ಎಂದು ಗುರುತಿಸಲಾಗಿದೆ. ಈತ ಶಾಲೆಯ ಹಳೆ ವಿದ್ಯಾರ್ಥಿ. ಆತನ ಹುಚ್ಚಾಟದಿಂದ ಯಾವುದೇ ಪ್ರಾಣಹಾನಿಯಾಗಿಲ್ಲ. ಶಾಲಾ ದಿನಗಳಲ್ಲಿಯೇ ಯುವಕ ಮಾದಕ ವ್ಯಸನಿಯಾಗಿದ್ದ ಎನ್ನಲಾಗಿದೆ. ಆತ ಮೊದಲು ಶಾಲೆಯ ಪ್ರಾಂಶುಪಾಲರ ಕೊಠಡಿಗೆ ಭೇಟಿ ನೀಡಿದ್ದಾನೆ.  ಸಿಸಿಟಿವಿ ದೃಶ್ಯಗಳ ಪ್ರಕಾರ ಶಾಲೆಯ ಸಿಬ್ಬಂದಿ ಕೊಠಡಿ ಮತ್ತು ತರಗತಿ ಕೊಠಡಿಗಳಿಗೆ ಭೇಟಿ ನೀಡಿದ್ದಾನೆ ಎಂದು ತಿಳಿದು ಬಂದಿದೆ.

ಶಾಲೆಯ ಸ್ಟಾಫ್ ರೂಮಿನೊಳಗೆ ಕುಳಿತ ಆರೋಪಿ ತನ್ನ ಬ್ಯಾಗ್‌ನಿಂದ ಹೊರತೆಗೆದ ಬಂದೂಕನ್ನು ಝಳಪಿಸುತ್ತಿರುವ ದೃಶ್ಯಗಳು ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುತ್ತಿವೆ. ಬೆದರಿಕೆಯ ಹಿಂದಿನ ಉದ್ದೇಶ ಇನ್ನೂ ತಿಳಿದಿಲ್ಲ. ತ್ರಿಶೂರ್ ಟೌನ್ ಪೂರ್ವ ಪೊಲೀಸರು ಯುವಕನ ವೈದ್ಯಕೀಯ ಪರೀಕ್ಷೆ ನಡೆಸಿದ್ದಾರೆ,  ಆತ ಮಾದಕ ದ್ರವ್ಯ ಅಥವಾ ಮದ್ಯದ ಅಮಲಿನಲ್ಲಿದ್ದಾನೆಯೋ ಎಂಬ ತಿಳಿದು ಕೊಳ್ಳಲು ವೈದ್ಯಕೀಯ ಪರೀಕ್ಷೆ ನಡೆಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT