ಸಾಂದರ್ಭಿಕ ಚಿತ್ರ 
ದೇಶ

ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳಲ್ಲಿ 'ರಾಮಾಯಣ' ಸೇರ್ಪಡೆ ಸಾಧ್ಯತೆ

ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಇತಿಹಾಸದ ಪಠ್ಯಕ್ರಮದ ಭಾಗವಾಗಿ ಶಾಲೆಗಳಲ್ಲಿ ಕಲಿಸಬೇಕು ಎಂದು ಉನ್ನತ ಮಟ್ಟದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಮಿತಿ ಶಿಫಾರಸು ಮಾಡಿದೆ.

ನವದೆಹಲಿ: ರಾಮಾಯಣ ಮತ್ತು ಮಹಾಭಾರತದಂತಹ ಮಹಾಕಾವ್ಯಗಳನ್ನು ಇತಿಹಾಸದ ಪಠ್ಯಕ್ರಮದ ಭಾಗವಾಗಿ ಶಾಲೆಗಳಲ್ಲಿ ಕಲಿಸಬೇಕು ಎಂದು ಉನ್ನತ ಮಟ್ಟದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಮಿತಿ ಶಿಫಾರಸು ಮಾಡಿದೆ. ಸಂವಿಧಾನದ ಪೀಠಿಕೆಯನ್ನು ಎಲ್ಲಾ ತರಗತಿಗಳ ಗೋಡೆಗಳ ಮೇಲೆ ಸ್ಥಳೀಯ ಭಾಷೆಗಳಲ್ಲಿ ಬರೆಯುವಂತೆ ಸಮಿತಿಯು ಶಿಫಾರಸು ಮಾಡಿದೆ ಎಂದು ಸಮಿತಿಯ ಅಧ್ಯಕ್ಷ ಪ್ರೊ ಸಿ ಐ ಇಸಾಕ್ ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದರು.

ಶಾಲೆಗಳಿಗೆ ಸಮಾಜ ವಿಜ್ಞಾನ ಪಠ್ಯಕ್ರಮವನ್ನು ಪರಿಷ್ಕರಿಸಲು ಸ್ಥಾಪಿಸಲಾದ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ ಸಮಾಜ ವಿಜ್ಞಾನ ಸಮಿತಿಯು ಪಠ್ಯಪುಸ್ತಕಗಳಲ್ಲಿ ಭಾರತೀಯ ಜ್ಞಾನ ವ್ಯವಸ್ಥೆ, ವೇದಗಳು ಮತ್ತು ಆಯುರ್ವೇದವನ್ನು ಪರಿಚಯಿಸುವುದು ಸೇರಿದಂತೆ ಹಲವಾರು ಪ್ರಸ್ತಾಪಗಳನ್ನು ಮಾಡಿದೆ. ಈ ಪ್ರಸ್ತಾವನೆಗೆ ಎನ್‌ಸಿಇಆರ್‌ಟಿಯಿಂದ ಅಂತಿಮ ಒಪ್ಪಿಗೆ ಸಿಗಬೇಕಿದೆ.

ಇತಿಹಾಸವನ್ನು ನಾಲ್ಕು ಅವಧಿಗಳಾಗಿ ಅಂದರೆ ಶಾಸ್ತ್ರೀಯ ಅವಧಿ, ಮಧ್ಯಕಾಲೀನ ಅವಧಿ, ಬ್ರಿಟಿಷ್ ಯುಗ ಮತ್ತು ಆಧುನಿಕ ಭಾರತ. ವರ್ಗೀಕರಿಸಲು ಸಮಿತಿಯು ಶಿಫಾರಸುಗಳನ್ನು ಮಾಡಿದೆ. ಇಲ್ಲಿಯವರೆಗೆ, ಭಾರತೀಯ ಇತಿಹಾಸದಲ್ಲಿ ಪ್ರಾಚೀನ, ಮಧ್ಯಕಾಲೀನ ಮತ್ತು ಆಧುನಿಕ ಭಾರತ ಎಂಬ ಕೇವಲ ಮೂರು ವರ್ಗೀಕರಣಗಳಿವೆ ಎಂದು ನಿವೃತ್ತ ಇತಿಹಾಸ ಪ್ರಾಧ್ಯಾಪಕ ಐಸಾಕ್ ಹೇಳಿದರು.

ಪಠ್ಯಪುಸ್ತಕಗಳು ಕೇವಲ ಒಂದು ಅಥವಾ ಎರಡು ಬದಲಿಗೆ ಭಾರತವನ್ನು ಆಳಿದ ಎಲ್ಲಾ ರಾಜವಂಶಗಳಿಗೆ ಜಾಗವನ್ನು ನೀಡಬೇಕು ಎಂದು ಸಮಿತಿಯು ಪ್ರಸ್ತಾಪಿಸಿದೆ. ಪುಸ್ತಕದಲ್ಲಿ ಸುಭಾಷ್ ಚಂದ್ರ ಬೋಸ್ ಅವರಂತಹ ವಿಜಯಗಳು ಮತ್ತು ವೀರರ ಬಗ್ಗೆ ಮಾಹಿತಿ ಇರುವಂತೆ ಸಮಿತಿ ಸೂಚಿಸಿದೆ.  ವಿದ್ಯಾರ್ಥಿಗಳು ಭಾರತೀಯ ವೀರರು ಮತ್ತು ಅವರ ಹೋರಾಟ ಮತ್ತು ವಿಜಯಗಳ ಬಗ್ಗೆ ತಿಳಿದಿರಬೇಕು ಇದರಿಂದ ಅವರ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT