ಸಂಗ್ರಹ ಚಿತ್ರ 
ದೇಶ

ರಾಜತಾಂತ್ರಿಕ ಬಿಕ್ಕಟ್ಟು ನಡುವಲ್ಲೇ ಕೆನಡಾ ಪ್ರಜೆಗಳಿಗೆ ಇ-ವೀಸಾ ಸೇವೆ ಪುನರಾರಂಭಿಸಿದ ಭಾರತ

ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟ 2 ತಿಂಗಳ ಬಳಿಕ ಕೇಂದ್ರ ಸರ್ಕಾರ ಕೆನಡಾ ಪ್ರಜೆಗಳಿಗೆ ಇ-ವೀಸಾ ಸೇವೆಗಳನ್ನು ಪುನರಾರಂಭಿಸಿದೆ.

ನವದೆಹಲಿ: ಎರಡು ದೇಶಗಳ ನಡುವೆ ನಡೆಯುತ್ತಿರುವ ರಾಜತಾಂತ್ರಿಕ ಬಿಕ್ಕಟ್ಟು ಏರ್ಪಟ್ಟ 2 ತಿಂಗಳ ಬಳಿಕ ಕೇಂದ್ರ ಸರ್ಕಾರ ಕೆನಡಾ ಪ್ರಜೆಗಳಿಗೆ ಇ-ವೀಸಾ ಸೇವೆಗಳನ್ನು ಪುನರಾರಂಭಿಸಿದೆ.

ಎರಡು ತಿಂಗಳ ಹಿಂದೆ ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಬಗ್ಗೆ ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ಭಾರತದ ಮೇಲೆ ಆರೋಪ ಮಾಡಿದ ನಂತರ ಎರಡು ದೇಶಗಳ ರಾಜತಾಂತ್ರಿಕ ಸಂಬಂಧ ಹದಗೆಟ್ಟಿತ್ತು. ಉಭಯ ದೇಶಗಳಿಂದ ರಾಯಭಾರಿಗಳು ಹಾಗೂ ಸಿಬ್ಬಂದಿಗಳನ್ನು ವಾಪಸ್‌ ಕರೆಸಿಕೊಳ್ಳಲಾಗಿತ್ತು.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಸೆಪ್ಟೆಂಬರ್ 18ರಂದು, ‘ಕೆನಡಾದ ಭದ್ರತಾ ಏಜೆನ್ಸಿಗಳು ಭಾರತೀಯ ಸರ್ಕಾರಿ ಏಜೆಂಟರು ಮತ್ತು ನಿಜ್ಜರ್ ಸಾವಿನ ನಡುವಿನ ಸಂಬಂಧವನ್ನು ತನಿಖೆ ನಡೆಸುತ್ತಿವೆ’ ಎಂದು ಹೇಳಿದ್ದರು. ಅಲ್ಲದೆ ನಿಜ್ಜರ್ ಹತ್ಯೆಯಲ್ಲಿ ಭಾರತೀಯ ಏಜೆಂಟರ ಕೈವಾಡವಿದೆ ಎಂದು ಆರೋಪಿಸಿದ್ದರು.

ಟ್ರುಡೊ ಹೇಳಿಕೆಯ ನಂತರ, ಭಾರತ ಮತ್ತು ಕೆನಡಾ ನಡುವೆ ರಾಜತಾಂತ್ರಿಕ ಬಿಕ್ಕಟ್ಟು ಪ್ರಾರಂಭವಾಯಿತು. ಭಾರತದ ಸೂಚನೆಗಳನ್ನು ಅನುಸರಿಸಿ, ಕೆನಡಾವು 41 ಕೆನಡಾದ ರಾಜತಾಂತ್ರಿಕರನ್ನು ನವದೆಹಲಿಯಿಂದ ತಮ್ಮ ದೇಶಕ್ಕೆ ಕರೆಸಿಕೊಂಡಿತ್ತು.

ಜಸ್ಟಿನ್ ಟ್ರುಡೊ ಆರೋಪವನ್ನು ನಿರಾಕರಿಸಿದ್ದ ವಿದೇಶಾಂಗ ಇಲಾಖೆಯ ಅಧಿಕಾರಿಗಳು, ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತೀಯ ಏಜೆಂಟ್‌ಗಳು ಭಾಗಿಯಾಗಿಲ್ಲ. ಉಭಯ ದೇಶಗಳ ನಡುವಿನ ಸಂಬಂಧ ಹದಗೆಟ್ಟಿದ್ದರೂ, ವ್ಯಾಪಾರ ಸಂಬಂಧಗಳನ್ನು ಹೆಚ್ಚಿಸಲು ಮತ್ತು ವ್ಯಾಪಾರ ಒಪ್ಪಂದವನ್ನು ಮಾತುಕತೆ ನಡೆಸಲು ಕೆನಡಾದೊಂದಿಗೆ ಭಾರತವು ಚರ್ಚೆಗೆ ಮರಳಲು ಬಯಸುತ್ತದೆ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಹೈದರಾಬಾದ್ ನೀಡಿದ 220 ರನ್ ಟಾರ್ಗೆಟ್ ಬೆನ್ನತ್ತಿ ಗೆದ್ದ ಪಂಜಾಬ್ ಕಿಂಗ್ಸ್!

ಹಳ್ಳ ಹಿಡೀತಾ ಸಂಧಾನ ಮಾತುಕತೆ?: ಹಾರ್ಮೊಜ್ ದಾಟಿದ ಅಮೆರಿಕದ 2 ಯುದ್ಧ ನೌಕೆಗಳು!

ಒಂದು ಕಡೆ ಪಾಕಿಸ್ತಾನದಲ್ಲಿ ಶಾಂತಿ ಮಾತುಕತೆ, ಮತ್ತೊಂದು ಕಡೆ ಲೆಬನಾನ್‌ ಮೇಲೆ ದಾಳಿ ಮುಂದುವರೆಸಿದ ಇಸ್ರೇಲ್

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

SCROLL FOR NEXT