ಪ್ರಾತಿನಿಧಿಕ ಚಿತ್ರ 
ದೇಶ

ದನದ ಮಾಂಸ ತಿನ್ನುವ ಅಭ್ಯಾಸವನ್ನು ವಿರೋಧಿಸಿ ವಿದ್ಯಾರ್ಥಿನಿಗೆ ಥಳಿಸಿ, ನಿಂದಿಸಿದ ಶಿಕ್ಷಕಿ; ದೂರು ದಾಖಲು

ಶಿಕ್ಷಕಿಯೊಬ್ಬರು ಗೋಮಾಂಸ ತಿನ್ನುವ ತಮ್ಮ ಅಭ್ಯಾಸ ಮತ್ತು ಅವರ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅಶೋಕಪುರಂನ ಸರ್ಕಾರಿ ಪ್ರೌಢಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯ ಪೋಷಕರು ಮಂಗಳವಾರ ಮುಖ್ಯ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ 

ಕೊಯಮತ್ತೂರು: ಶಿಕ್ಷಕಿಯೊಬ್ಬರು ಗೋಮಾಂಸ ತಿನ್ನುವ ತಮ್ಮ ಅಭ್ಯಾಸ ಮತ್ತು ಅವರ ಧರ್ಮದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಅಶೋಕಪುರಂನ ಸರ್ಕಾರಿ ಪ್ರೌಢಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿನಿಯ ಪೋಷಕರು ಮಂಗಳವಾರ ಮುಖ್ಯ ಶಿಕ್ಷಣಾಧಿಕಾರಿಗೆ ದೂರು ನೀಡಿದ್ದಾರೆ 

ಹಿಜಾಬ್ ಧರಿಸಿ ಶಾಲೆಗೆ ಬರುವ ಮಕ್ಕಳನ್ನು ಶಿಕ್ಷಕಿ ಇಷ್ಟಪಡುತ್ತಿರಲಿಲ್ಲ ಮತ್ತು ಕಳೆದ ಕೆಲವು ತಿಂಗಳಿಂದ ಪರೋಕ್ಷವಾಗಿ ಅಲ್ಪಸಂಖ್ಯಾತ ಸಮುದಾಯದ ಮಕ್ಕಳಿಗೆ ಕಿರುಕುಳ ನೀಡುತ್ತಿದ್ದಾರೆ. ಅವರಿಗೆ ಹಿಜಾಬ್ ಧರಿಸಿ ಶಾಲೆಗೆ ಬರುವ ಮಕ್ಕಳನ್ನು ಕಂಡರೆ ಆಗುವುದಿಲ್ಲ ಎಂದು ಪೋಷಕರು ಅರ್ಜಿಯಲ್ಲಿ ತಿಳಿಸಿದ್ದಾರೆ.

'ಎರಡು ತಿಂಗಳ ಹಿಂದೆ, ಶಿಕ್ಷಕಿ ವಿದ್ಯಾರ್ಥಿನಿಗೆ ಕುಟುಂಬದ ಉದ್ಯೋಗದ ಬಗ್ಗೆ ಕೇಳಿದ್ದಾರೆ. ಆಗ ನನ್ನ ಮಗಳು ನಾವು ಗೋಮಾಂಸ ಮತ್ತು ಮಾಂಸದ ಅಂಗಡಿ ನಡೆಸುತ್ತಿದ್ದೇವೆ ಎಂದು ಹೇಳಿದ್ದಾಳೆ. ಆಗ ಶಿಕ್ಷಕಿ ನನ್ನ ಮಗಳಿಗೆ ಥಳಿಸಿದ್ದಾರೆ ಮತ್ತು ನಮ್ಮ ಆಹಾರ ಪದ್ಧತಿಯಾದ ಗೋಮಾಂಸ ಸೇವನೆಯನ್ನು ಟೀಕಿಸಿದ್ದಾರೆ. ಈ ಸಮಸ್ಯೆಯನ್ನು ಶಾಲೆಯ ಮುಖ್ಯೋಪಾಧ್ಯಾಯರ ಬಳಿ ತಿಳಿಸಿದಾಗ, ಅವರು ಕೂಡ ಶಿಕ್ಷಕಿಯನ್ನೇ ಬೆಂಬಲಿಸಿದರು. ಮುಖ್ಯಶಿಕ್ಷಕಿ ತಮ್ಮ ದೂರಿನ ಬಗ್ಗೆ ಕ್ರಮ ಕೈಗೊಳ್ಳದ ಕಾರಣ, ನಾವು  ಸಿಇಒ ಅವರನ್ನು ಸಂಪರ್ಕಿಸಿದೆವು' ಎಂದು ಪೋಷಕರು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಲು ಮುಖ್ಯಶಿಕ್ಷಕಿ ರಾಜೇಶ್ವರಿ ನಿರಾಕರಿಸಿದರು. ಪೋಷಕರಿಂದ ದೂರನ್ನು ಸ್ವೀಕರಿಸಿದ್ದು, ತನಿಖೆಗೆ ಆದೇಶಿಸುವುದಾಗಿ ಮುಖ್ಯ ಶಿಕ್ಷಣಾಧಿಕಾರಿ ಆರ್ ಬಾಲಮುರಳಿ ಟಿಎನ್‌ಐಇಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT