ಸಂಗ್ರಹ ಚಿತ್ರ 
ದೇಶ

ರಜೌರಿಯಲ್ಲಿ ಉಗ್ರರ ವಿರುದ್ಧ ಎನ್ಕೌಂಟರ್: ಕನ್ನಡಿಗ ಕ್ಯಾಪ್ಟನ್ ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮ, ಮುಂದುವರೆದ ಕಾರ್ಯಾಚರಣೆ

ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಶ್ರೀಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಸೇನಾಪಡ ಮತ್ತು ಉಗ್ರರ ನಡುವೆ ಬುಧವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನ್ನಡಿಗ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದು, ಮತ್ತಿಬ್ಬರು ಯೋಧರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ರಜೌರಿಯ ಅರಣ್ಯ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿದ್ದಾರೆಂಬ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಪೊಲೀಸರು ನಿನ್ನೆ ಜಂಟಿ ಕಾರ್ಯಾಚರಣೆ ಆರಂಭಿಸಿದ್ದವು.

ಈ ವೇಳೆ ಅಡಗಿ ಕುಳಿತಿದ್ದ ಉಗ್ರರು ಏಕಾಏಕಿ ಸೇನಾಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಸೇನಾಧಿಕಾರಿಗಳು ಹಾಗೂ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಈ ನಡುವೆ ಅಡಗಿ ಕುಳಿತಿರುವ ಉಗ್ರರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ವರದಿಗಳು ತಿಳಿಸಿವೆ.

ಮೈಸೂರು ಮೂಲದ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಅವರ ತಂದೆ ವೆಂಕಟೇಶ್ ಅವರು ಮಂಗಳೂರಿನ MRPL ಸಂಸ್ಥೆಯಲ್ಲಿ ಎಂಡಿ ಆಗಿದ್ದರು. ಹೀಗಾಗಿ ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ಕುಟುಂಬ ಸಹಿತ ವೆಂಕಟೇಶ್ ವಾಸವಿದ್ದರು. ಮಂಗಳೂರು, ಬೆಂಗಳೂರಿನಲ್ಲಿ ಶಿಕ್ಷಣ ಪೂರೈಸಿದ ಪ್ರಾಂಜಲ್ ಭಾರತೀಯ ಸೇನೆಗೆ ಸೇರಿದ್ದರು. ಅಲ್ಲದೆ, 63 ರಾಷ್ಟ್ರೀಯ ರೈಫಲ್ಸ್​ ಅನ್ನು ಲೀಡ್ ಮಾಡುತ್ತಿದ್ದರು. ಇತ್ತೀಚೆಗೆ ವೆಂಕಟೇಶ್ ಅವರು ಬೆಂಗಳೂರಿಗೆ ವರ್ಗಾವಣೆಗೊಂಡಿದ್ದರಿಂದ ನಂದನವನದಲ್ಲಿ ನೆಲೆಸಿದ್ದರು.

ಈ ನಡುವೆ ರಜೌರಿಯಲ್ಲಿ ಸ್ಥಳೀಯರಿಗೆ ಮನೆ ಬಿಟ್ಟು ಹೊರಗೆ ಬರದಂತೆ ಸೂಚಿಸಲಾಗಿದ್ದು, ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT