ಸಾಂದರ್ಭಿಕ ಚಿತ್ರ 
ದೇಶ

ದೆಹಲಿ: 17 ವರ್ಷದ ಹುಡುಗನಿಗೆ 55 ಬಾರಿ ಇರಿದು, ಕತ್ತು ಸೀಳಿ ಕೊಂದ 16ರ ಬಾಲಕ; ಭೀಕರ ಕೃತ್ಯದ ನಡುವೆ ಡ್ಯಾನ್ಸ್ ಮಾಡಿ ವಿಕೃತಿ!

ಈ ವಾರದ ಆರಂಭದಲ್ಲಿ ಪೂರ್ವ ದೆಹಲಿಯ ವೆಲ್‌ಕಮ್‌ ಕಾಲೋನಿಯಲ್ಲಿ 16 ವರ್ಷದ ಯುವಕನೊಬ್ಬ, ಮತ್ತೊಬ್ಬ 17 ವರ್ಷದ ಯುವಕನಿಗೆ 55ಕ್ಕೂ ಹೆಚ್ಚು ಬಾರಿ ಇರಿದು, ಆತನ ಕತ್ತು ಸೀಳಿ ಹತ್ಯೆ ಮಾಡಿ, ಬಳಿಕ ಶವವನ್ನು ರಸ್ತೆಯಲ್ಲಿ ಎಳೆದುಕೊಂಡು...

ನವದೆಹಲಿ: ಈ ವಾರದ ಆರಂಭದಲ್ಲಿ ಪೂರ್ವ ದೆಹಲಿಯ ವೆಲ್‌ಕಮ್‌ ಕಾಲೋನಿಯಲ್ಲಿ 16 ವರ್ಷದ ಯುವಕನೊಬ್ಬ, ಮತ್ತೊಬ್ಬ 17 ವರ್ಷದ ಯುವಕನಿಗೆ 55ಕ್ಕೂ ಹೆಚ್ಚು ಬಾರಿ ಇರಿದು, ಆತನ ಕತ್ತು ಸೀಳಿ ಹತ್ಯೆ ಮಾಡಿ, ಬಳಿಕ ಶವವನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಮಂಗಳವಾರ ಜಂತಾ ಮಜ್ದೂರ್ ಕಾಲೋನಿಯಲ್ಲಿ ನಡೆದ ಈ ಭೀಕರ ಹತ್ಯೆಯ ಕೆಲವು ಭಯಾನಕ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿ ಸುತ್ತಮುತ್ತಲಿನ ಜನರಿಗೂ ಬೆದರಿಕೆ ಹಾಕಿದ್ದಾನೆ.

ಬುಧವಾರ ಬೆಳಗ್ಗೆ ಆರೋಪಿಯನ್ನು ಬಂಧಿಸಲಾಗಿದ್ದು, ತಪ್ಪೊಪ್ಪಿಕೊಂಡಿದ್ದಾನೆ. ಬಿರಿಯಾನಿ ಖರೀದಿಸಲು ತನಗೆ ಹಣ ಕೇಳಿದ 17 ವರ್ಷದ ಯುವಕನನ್ನು ಹತ್ಯೆ ಮಾಡಿದ್ದಾನೆ. ಮೃತ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

"ನಾವು ಈಗಾಗಲೇ ಕೊಲೆಗೆ ಬಳಸಿದ ಆಯುಧವನ್ನು ವಶಪಡಿಸಿಕೊಂಡಿದ್ದೇವೆ. ಯುವಕ ಚಾಕುವನ್ನು ಎಲ್ಲಿಂದ ಖರೀದಿಸಿದ ಎಂಬ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ" ಎಂದು ಪೊಲೀಸ್ ಉಪ ಆಯುಕ್ತ (ಈಶಾನ್ಯ) ಜಾಯ್ ಟಿರ್ಕಿ ಹೇಳಿದ್ದಾರೆ.

ಮಂಗಳವಾರ ರಾತ್ರಿ 11.15ರ ಸುಮಾರಿಗೆ ಈ ಕೃತ್ಯ ನಡೆದಿದೆ. ದಾಳಿಗೊಳಗಾದ ಯುವಕನನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

"ಅವನು ಭೀಕರ ಕೃತ್ಯವನ್ನು ಮಾಡುವಾಗ ನೃತ್ಯ ಮಾಡುತ್ತಿದ್ದ. ಏನಾಗುತ್ತಿದೆ ಎಂದು ನೋಡಲು ಬಾಗಿಲು ತೆರೆಯಲು ಯತ್ನಿಸಿದ ಒಬ್ಬ ವ್ಯಕ್ತಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದಾನೆ" ಎಂದು ಅಪರಾಧದ ತನಿಖೆ ನಡೆಸುತ್ತಿರವವ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT