ಸುರಂಗದೊಳಗೆ ಕಾರ್ಯಾಚರಣೆ 
ದೇಶ

ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಕಾರ್ಮಿಕರ ರಕ್ಷಣಾ ಕಾರ್ಯ ಅಂತಿಮ ಘಟ್ಟಕ್ಕೆ; ಕೊನೆಯ ಪೈಪ್ ರವಾನೆ

ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಹಾಕಿಕೊಂಡಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಗಳು ಇಂದು ಗುರುವಾರ ಮುಂಜಾನೆ ಅಂತಿಮ ಹಂತಕ್ಕೆ ತಲುಪಿದ್ದು, ಕೊನೆಯ ಪೈಪ್ ನ್ನು ಪ್ರವೇಶಿಸಿ ಸಿಕ್ಕಿಬಿದ್ದ ಕಾರ್ಮಿಕರನ್ನು ಅವಶೇಷಗಳ ಮೂಲಕ ತಳ್ಳುವ ಮಾರ್ಗವನ್ನು ಸಿದ್ಧಪಡಿಸಲಾಗಿದೆ. 

ಉತ್ತರಕಾಶಿ: ಸಿಲ್ಕ್ಯಾರಾ ಸುರಂಗದಲ್ಲಿ ಸಿಕ್ಕಿಹಾಕಿಕೊಂಡಿರುವ 41 ಕಾರ್ಮಿಕರನ್ನು ರಕ್ಷಿಸುವ ಕಾರ್ಯಾಚರಣೆಗಳು ಇಂದು ಗುರುವಾರ ಮುಂಜಾನೆ ಅಂತಿಮ ಹಂತಕ್ಕೆ ತಲುಪಿದ್ದು, ಕೊನೆಯ ಪೈಪ್ ನ್ನು ಪ್ರವೇಶಿಸಿ ಸಿಕ್ಕಿಬಿದ್ದ ಕಾರ್ಮಿಕರನ್ನು ಅವಶೇಷಗಳ ಮೂಲಕ ತಳ್ಳುವ ಮಾರ್ಗವನ್ನು ಸಿದ್ಧಪಡಿಸಲಾಗಿದೆ. 

ಕಾರ್ಮಿಕರನ್ನು ಸ್ಥಳಾಂತರಿಸಿದ ನಂತರ ತಕ್ಷಣವೇ ವೈದ್ಯಕೀಯ ಸೇವೆಯನ್ನು ಒದಗಿಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ . ಕೊನೆಯ ಪೈಪ್ ಹಾಕಲಾಗುತ್ತಿದೆ ಎಂದು ಸ್ಥಳದಲ್ಲಿ ಕೆಲಸ ಮಾಡುವ ತಾಂತ್ರಿಕ ವರ್ಗ ತಿಳಿಸಿದೆ. 

ಅವಶೇಷಗಳ ಮೂಲಕ 800 ಎಂಎಂ ವ್ಯಾಸದ ಉಕ್ಕಿನ ಪೈಪ್‌ಗಳನ್ನು ಕೊರೆಯಲು ನಿನ್ನೆ ತಡರಾತ್ರಿ ಕೆಲವು ಕಬ್ಬಿಣದ ರಾಡ್‌ಗಳು ಆಗರ್ ಯಂತ್ರಕ್ಕೆ ಅಡ್ಡಿಪಡಿಸಿದಾಗ ಸಣ್ಣ ಅಡಚಣೆಯಾಗಿದೆ.

ಸಿಲ್ಕ್ಯಾರಾ ಸುರಂಗದಿಂದ ಹೊರತರುವ ಕಾರ್ಮಿಕರನ್ನು ತಕ್ಷಣಕ್ಕೆ ಚಿಕಿತ್ಸೆಗೆ ಕರೆದೊಯ್ಯಲು ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ 41 ಹಾಸಿಗೆಗಳ ಪ್ರತ್ಯೇಕ ವಾರ್ಡ್ ನ್ನು ಸಿದ್ಧಪಡಿಸಲಾಗಿದೆ ಮತ್ತು 41 ಆಂಬ್ಯುಲೆನ್ಸ್‌ಗಳು ಸುರಂಗದ ಹೊರಗೆ ಕಾಯುತ್ತಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

SCROLL FOR NEXT