ಎದೆ ಹಾಲುಣಿಸುತ್ತಿರುವ ಪೊಲೀಸ್ ಅಧಿಕಾರಿ 
ದೇಶ

ಕೊಚ್ಚಿ: ವಲಸೆ ಮಗುವಿಗೆ ತಾಯಿಯಾದ ಪೊಲೀಸ್ ಅಧಿಕಾರಿ; ಇಲಾಖೆ, ಸಾರ್ವಜನಿಕರಿಂದ ಮೆಚ್ಚುಗೆ

ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಎದೆ ಹಾಲುಣಿಸುವ ಮೂಲಕ ತಾಯಿ ಪ್ರೀತಿ ತೋರಿದ್ದು, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಕೊಚ್ಚಿ: ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಎದೆ ಹಾಲುಣಿಸುವ ಮೂಲಕ ತಾಯಿ ಪ್ರೀತಿ ತೋರಿದ್ದು, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಬಿಹಾರ ಮೂಲದ ತಾಯಿ ಗುರುವಾರ ಶಸ್ತ್ರಚಿಕಿತ್ಸೆಯ ನಂತರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರಿಂದ ಎರ್ನಾಕುಲಂ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಿಶುವಿನ ಆರೈಕೆಗೆ ಮುಂದಾದ ಎರ್ನಾಕುಲಂ ವನಿತಾ ಪೊಲೀಸ್ ಠಾಣೆಯ ಸಿವಿಲ್ ಪೊಲೀಸ್ ಅಧಿಕಾರಿ ಆರ್ಯ ಅವರ ಈ ಉದಾತ್ತ ಕಾರ್ಯಕ್ಕೆ ಸಹ ಅಧಿಕಾರಿಗಳು ಮತ್ತು ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಶಸ್ತ್ರಚಿಕಿತ್ಸೆಯ ನಂತರ ಉಸಿರಾಟದ ತೊಂದರೆಯಿಂದಾಗಿ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ಕು ತಿಂಗಳ ಶಿಶು ಸೇರಿದಂತೆ ನಾಲ್ವರು ಮಕ್ಕಳಿಗೆ ಸಹಾಯದ ಅವಶ್ಯಕತೆ ಇದೆ ಎಂದು ಗುರುವಾರ ಪೊಲೀಸರಿಗೆ ತಿಳಿಸಲಾಗಿದೆ.

ತಕ್ಷಣ ಆಸ್ಪತ್ರೆಗೆ ಆಗಮಿಸಿದ ವನಿತಾ ಠಾಣೆಯ ಪೊಲೀಸ್ ತಂಡ, ಮಕ್ಕಳನ್ನು ಠಾಣೆಗೆ ಸ್ಥಳಾಂತರಿಸಿದೆ.

“ಪೊಲೀಸ್ ಅಧಿಕಾರಿಗಳು ಮಕ್ಕಳಿಗೆ ಆಹಾರವನ್ನು ಖರೀದಿಸಿದರು ಮತ್ತು ಇತ್ತೀಚೆಗೆ ಹೆರಿಗೆ ರಜೆಯಿಂದ ಕೆಲಸಕ್ಕೆ ಮರಳಿದ ಆರ್ಯ ಅವರು ನಾಲ್ಕು ತಿಂಗಳ ಮಗುವಿಗೆ ಎದೆ ಹಾಲುಣಿಸಿದರು. ನಂತರ ಮಕ್ಕಳನ್ನು ಕೊಚ್ಚಿಯ ಚೈಲ್ಡ್ ಕೇರ್ ಹೋಮ್‌ಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಮ್ಮ ತಂದೆ ಜೈಲಿನಲ್ಲಿದ್ದಾರೆ. ನಾನು ಮತ್ತು ನನ್ನ ಒಡಹುಟ್ಟಿದವರು ಕ್ರಮವಾಗಿ ಐದು ಮತ್ತು ಮೂರು ವರ್ಷ ವಯಸ್ಸಿನ ಹುಡುಗ ಮತ್ತು ಹುಡುಗಿ, ತಾಯಿಯೊಂದಿಗೆ ಕೇರಳದಲ್ಲಿ ನೆಲೆಸಿದ್ದೇವೆ ಎಂದು 13 ವರ್ಷದ ಹಿರಿಯ ಪುತ್ರಿ ಪೊಲೀಸರಿಗೆ ತಿಳಿಸಿದ್ದಾರೆ.

ಮಲಯಾಳಂ ಅನ್ನು ನಿರರ್ಗಳವಾಗಿ ಮಾತನಾಡುವ ಬಾಲಕಿಗೆ ಬಿಹಾರದಲ್ಲಿರುವ ತನ್ನ ಸ್ಥಳದ ಬಗ್ಗೆ ಗೊತ್ತಿಲ್ಲ ಎನ್ನುತ್ತಿದ್ದಾಳೆ. ಪೊಲೀಸರು ಅವರ ತಾಯಿಯ ಆರೋಗ್ಯ ಸ್ಥಿತಿಯ ಬಗ್ಗೆ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಅವರ ಸಂಬಂಧಿಕರ ಪತ್ತೆಗೆ ಬಿಹಾರ ಪೊಲೀಸರ ನೆರವು ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ! ಕಠಿಣ ಕ್ರಮಕ್ಕೆ ಸಿಎಂ ಆದೇಶ

Maruti Suzuki Baleno ಹೊಸ ಆವೃತ್ತಿ ಬಿಡುಗಡೆ: ಬೆಲೆ, ಮೈಲೇಜ್, ವೈಶಿಷ್ಟ್ಯ: ಕಾರು ಖರೀದಿಸುವ ಮುನ್ನ ನೀವು ತಿಳಿಯಬೇಕಾದ ಅಂಶಗಳಿವು...

ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವು