ಯುಪಿ ಡಿಸಿಎಂ ಕೇಶವ್ ಪ್ರಸಾದ್ ಮೌರ್ಯ 
ದೇಶ

ನಕಲಿ ಪದವಿ ಪ್ರಕರಣ: ಯುಪಿ ಡಿಸಿಎಂಗೆ ಹೈಕೋರ್ಟ್ ನೋಟಿಸ್

ನಕಲಿ ಪದವಿ' ಪ್ರಕರಣದಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.

ಅಲಹಾಬಾದ್: 'ನಕಲಿ ಪದವಿ' ಪ್ರಕರಣದಲ್ಲಿ ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರಿಗೆ ಅಲಹಾಬಾದ್ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ.

ಪ್ರಸ್ತುತ ರಾಜ್ಯದ ಉಪಮುಖ್ಯಮಂತ್ರಿಯಾಗಿರುವ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ಸಲ್ಲಿಸಲಾಗಿದ್ದ ಕ್ರಿಮಿನಲ್ ಪರಿಷ್ಕರಣೆ ಅರ್ಜಿ ಕುರಿತು ನೊಟೀಸ್ ಜಾರಿ ಮಾಡಿರುವ ನ್ಯಾಯಮೂರ್ತಿ ರಾಜ್‌ಬೀರ್ ಸಿಂಗ್ ಅವರು, ಉತ್ತರ ನೀಡಲು ನಾಲ್ಕು ವಾರಗಳ ಕಾಲಾವಕಾಶ ನೀಡಿದ್ದಾರೆ. ಪ್ರಯಾಗ್‌ರಾಜ್ ನಿವಾಸಿ ದಿವಾಕರ್ ನಾಥ್ ತ್ರಿಪಾಠಿ ಎಂಬುವವರ ಅರ್ಜಿಯ ವಿಚಾರಣೆ ವೇಳೆ ಈ ಆದೇಶ ಹೊರಡಿಸಲಾಗಿದೆ.

ನಕಲಿ ದಾಖಲೆಗಳ ಲಾಭ ಪಡೆದಿರುವ ಆರೋಪದ ಮೇಲೆ ಉಪಮುಖ್ಯಮಂತ್ರಿ ಅವರು ನಾಲ್ಕು ವಾರಗಳಲ್ಲಿ ನೋಟಿಸ್‌ಗೆ ಉತ್ತರ ನೀಡುವಂತೆ ಸೂಚಿಸಿದ್ದಾರೆ. ಅರ್ಜಿಯ ಮುಂದಿನ ವಿಚಾರಣೆ ಡಿಸೆಂಬರ್ 21 ರಂದು ನಡೆಯಲಿದೆ.

ನಕಲಿ ದಾಖಲೆಗಳ ಮೂಲಕ ಲಾಭ ಪಡೆದ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲಿಸುವ ಅರ್ಜಿಯನ್ನು ರದ್ದುಗೊಳಿಸುವಂತೆ ಅಧೀನ ನ್ಯಾಯಾಲಯದ ಪ್ರಯಾಗ್‌ರಾಜ್ ಮತ್ತು ಬಾಲನ್ಯಾಯ ಮಂಡಳಿಯ ಆದೇಶದ ಜೊತೆಗೆ ಮೌರ್ಯ ಅವರ ಸಿಂಧುತ್ವವನ್ನು ಪ್ರತಿಪಕ್ಷದ ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. 

ಮೌರ್ಯ  ನಕಲಿ ಪದವಿ ನೀಡಿ ಪೆಟ್ರೋಲ್ ಪಂಪ್‌ನ ಪರವಾನಗಿ ಪಡೆದಿದ್ದರು ಮತ್ತು ಅದೇ ಪದವಿಯ ಆಧಾರದ ಮೇಲೆ ಐದು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು ಎಂದು ಆರೋಪಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT