ಸುಪ್ರಿಯಾ ಸುಳೆ 
ದೇಶ

ರಾಹುಲ್ ಗಾಂಧಿ ಪ್ರಬಲ ಹೋರಾಟಗಾರ, ಅವರು ಪ್ರಾಮಾಣಿಕ ಉತ್ತರ ನೀಡಲಿದ್ದಾರೆ: ಸುಪ್ರಿಯಾ ಸುಳೆ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಹೋರಾಟಗಾರನಾಗಿದ್ದು, ಚುನಾವಣಾ ಆಯೋಗದ ನೋಟಿಸ್‌ಗೆ ಗೌರವಯುತ ಮತ್ತು ಪ್ರಾಮಾಣಿಕವಾಗಿ ಉತ್ತರ ನೀಡಲಿದ್ದಾರೆ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಹೋರಾಟಗಾರನಾಗಿದ್ದು, ಚುನಾವಣಾ ಆಯೋಗದ ನೋಟಿಸ್‌ಗೆ ಗೌರವಯುತ ಮತ್ತು ಪ್ರಾಮಾಣಿಕವಾಗಿ ಉತ್ತರ ನೀಡಲಿದ್ದಾರೆ ಎಂದು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಅವರು ಪ್ರಾಮಾಣಿಕ ಉತ್ತರವನ್ನು ನೀಡುತ್ತಾರೆ ಎಂದು ನನಗೆ ವಿಶ್ವಾಸವಿದೆ. ಅವರು ಪ್ರಾಮಾಣಿಕರಾಗಿರುವುದರಿಂದ ನಿರ್ಭೀತಿಯಿಂದ ಇರುತ್ತಾರೆ’ ಎಂದು ಸುಪ್ರಿಯಾ ಸುಳೆ ತಿಳಿಸಿದ್ದಾರೆ.

ಬಿಜೆಪಿಗರು ಜವಾಹರಲಾಲ್ ನೆಹರೂ ಕುಟುಂಬದ ಬಗ್ಗೆ ಮಾತನಾಡಿದ ಹಲವು ಉದಾಹರಣೆಗಳಿವೆ. ಹಾಗಾಗಿ ಅವರು (ಬಿಜೆಪಿಗರು) ಏನಾದರೂ ಮಾತನಾಡಿದರೆ ಬೇಸರಗೊಳ್ಳುವ ಅಗತ್ಯವೇನಿದೆ ಎಂದು ಸುಪ್ರಿಯಾ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಉದ್ದೇಶಿಸಿ ‘ಪನೌತಿ’ (ಅಪಶಕುನ) ಎಂದು ಹೇಳಿದ್ದಕ್ಕಾಗಿ ಹಾಗೂ ಮೋದಿ ಅವರ ಬಗ್ಗೆ ಮಾತನಾಡುವ ಸಂದರ್ಭದಲ್ಲಿ ‘ಜೇಬುಗಳ್ಳತನ’ದ ಬಗ್ಗೆ ಉಲ್ಲೇಖಿಸಿದ್ದಕ್ಕಾಗಿ ಚುನಾವಣಾ ಆಯೋಗವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿಗೊಳಿಸಿದೆ.

ಭಾರತೀಯ ಜನತಾ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಬಿಜೆಪಿಯವರು ರಾಹುಲ್ ಗಾಂಧಿಯವರ ಕುಟುಂಬದ ವಿರುದ್ಧ ಮಾತನಾಡಿರುವ ಹಲವಾರು ನಿದರ್ಶನಗಳಿವೆ. ಈಗ ಅವರೇನಾದರೂ ಮಾತನಾಡಿದರೆ, ಅದರ ಬಗ್ಗೆ ಬೇಸರಿಸಿಕೊಳ್ಳುವ ಅಗತ್ಯವೇನಿದೆ? ಅವರು (ಬಿಜೆಪಿ) ರಾಹುಲ್ ಗಾಂಧಿಯವರ ಮುತ್ತಾತನ ವಿರುದ್ಧವೂ ಮಾತನಾಡಿದ್ದಾರೆ” ಎಂದು ಕಿಡಿ ಕಾರಿದ್ದಾರೆ.

ಚುನಾವಣಾ ಸಮಾವೇಶವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ರಾಹುಲ್ ಗಾಂಧಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ದೂರನ್ನು ಆಧರಿಸಿ ಭಾರತೀಯ ಚುನಾವಣಾ ಆಯೋಗವು ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ.

ರಾಹುಲ್ ಅವರ ಮಾತುಗಳು ಹಿರಿಯ ನಾಯಕರಿಗೆ ಶೋಭೆ ತರುವುದಿಲ್ಲ ಎಂದು ಬಿಜೆಪಿಯು ಆಯೋಗಕ್ಕೆ ದೂರು ಸಲ್ಲಿಸಿತ್ತು. ರಾಜಕೀಯ ವಿರೋಧಿಗಳನ್ನು ಉದ್ದೇಶಿಸಿ ಆಧಾರವಿಲ್ಲದೆ ಮಾತನಾಡುವುದು ನೀತಿ ಸಂಹಿತೆಗೆ ವಿರುದ್ಧ ಎಂದು ಆಯೋಗವು ರಾಹುಲ್ ಅವರಿಗೆ ನೀಡಿರುವ ನೋಟಿಸ್‌ನಲ್ಲಿ ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT