ಕಾಂಗ್ರೆಸ್ ಸೇರಿದ ಬಿಆರ್ ಎಸ್ ಹಾಲಿ ಶಾಸಕ ಅಬ್ರಹಾಂ 
ದೇಶ

ತೆಲಂಗಾಣ ವಿಧಾನಸಭೆ ಚುನಾವಣೆ: ಬಿಆರ್‌ಎಸ್‌ ಹಾಲಿ ಶಾಸಕ ಕಾಂಗ್ರೆಸ್‌ ಸೇರ್ಪಡೆ

ತೆಲಂಗಾಣ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಒಂದು ವಾರ ಬಾಕಿ ಇರುವಂತೆಯೇ ಬಿಆರ್ ಎಸ್ ಹಾಲಿ ಶಾಸಕ ಕೈ ಕೊಟ್ಟಿದ್ದು, ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಗೆ ಇನ್ನೂ ಕೇವಲ ಒಂದು ವಾರ ಬಾಕಿ ಇರುವಂತೆಯೇ ಬಿಆರ್ ಎಸ್ ಹಾಲಿ ಶಾಸಕ ಕೈ ಕೊಟ್ಟಿದ್ದು, ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿ.ಎಂ. ಜೋಗುಲಾಂಬ-ಗದ್ವಾಲ್ ಜಿಲ್ಲೆಯ ಆಲಂಪುರ ಕ್ಷೇತ್ರದ ಶಾಸಕ ಅಬ್ರಹಾಂ ಅವರನ್ನು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಎ.ರೇವಂತ್ ರೆಡ್ಡಿ ಪಕ್ಷಕ್ಕೆ ಸ್ವಾಗತಿಸಿದರು.

ಆಗಸ್ಟ್‌ನಲ್ಲಿ ಬಿಆರ್‌ಎಸ್ ಇದೇ ಕ್ಷೇತ್ರದಿಂದ ಅಬ್ರಹಾಂ ಅವರನ್ನು ಅಭ್ಯರ್ಥಿಯನ್ನಾಗಿ ಹೆಸರಿಸಿತ್ತು. ಪ್ರಚಾರವನ್ನೂ ಆರಂಭಿಸಿದ್ದರು. ಆದರೆ, ಕೊನೇ ಕ್ಷಣದಲ್ಲಿ ಅವರನ್ನು ಬದಲಾಯಿಸಿ, ವಿಜಯುಡು ಅವರನ್ನು ಬಿಆರ್ ಎಸ್ ಕಣಕ್ಕಿಳಿಸಿತು. ಎಂಎಲ್‌ಸಿ ಚಲ್ಲಾ ವೆಂಕಟರಾಮಿ ರೆಡ್ಡಿ ನೇತೃತ್ವದ ಪಕ್ಷದ ಮುಖಂಡರ ಬೇಡಿಕೆಯಿಂದಾಗಿ ಬಿಆರ್‌ಎಸ್ ತನ್ನ ಅಭ್ಯರ್ಥಿಯನ್ನು ಬದಲಾಯಿಸಿದೆ ಎನ್ನಲಾಗಿದೆ. 

2018 ರ ಚುನಾವಣೆಯಲ್ಲಿ ಬಿಆರ್‌ಎಸ್ ಟಿಕೆಟ್‌ನಲ್ಲಿ ಆಲಂಪುರದಿಂದ ಚುನಾಯಿತರಾಗಿದ್ದ ಅಬ್ರಹಾಂ, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಸಂಪತ್ ಕುಮಾರ್ ಅವರನ್ನು 44,000 ಮತಗಳಿಂದ ಸೋಲಿಸಿದ್ದರು. 2014ರ ಚುನಾವಣೆಯಲ್ಲಿ ಟಿಡಿಪಿ ಟಿಕೆಟ್‌ನಲ್ಲಿ ಸ್ಪರ್ಧಿಸಿದ್ದ ಅಬ್ರಹಾಂ, ಸಂಪತ್‌ಕುಮಾರ್‌ ವಿರುದ್ಧ ಸೋತಿದ್ದರು. ನಂತರ ಅಬ್ರಹಾಂ  ಟಿಆರ್‌ಎಸ್‌ಗೆ (ಈಗ ಬಿಆರ್‌ಎಸ್) ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದರು.119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ನವೆಂಬರ್ 30 ರಂದು ಚುನಾವಣೆ ನಡೆಯಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT