ಸಿಲ್ಕ್ಯಾರ ಟನಲ್ 
ದೇಶ

ಸಿಲ್ಕ್ಯಾರ ಟನಲ್ ಮೇಲ್ಭಾಗದಲ್ಲಿ ಲಂಬ ಕೊರೆಯುವಿಕೆ ಆರಂಭ: ರಕ್ಷಣಾ ಕಾರ್ಯಾಚರಣೆಗೆ ಸೇನೆ ನೆರವು

ಉತ್ತರಕಾಶಿಯಲ್ಲಿ ಕುಸಿತ ಕಂಡಿರುವ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವುದಕ್ಕಾಗಿ ಟನಲ್ ಮೇಲ್ಭಾಗದಿಂದ ಲಂಬ ಕೊರೆಯುವಿಕೆ ಆರಂಭವಾಗಿದೆ. 

ಉತ್ತರಾಖಂಡ್: ಉತ್ತರಕಾಶಿಯಲ್ಲಿ ಕುಸಿತ ಕಂಡಿರುವ ಸಿಲ್ಕ್ಯಾರ ಟನಲ್ ನಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸುವುದಕ್ಕಾಗಿ ಟನಲ್ ಮೇಲ್ಭಾಗದಿಂದ ಲಂಬ ಕೊರೆಯುವಿಕೆ ಆರಂಭವಾಗಿದೆ. 

ವರ್ಟಿಕಲ್ ಡ್ರಿಲಿಂಗ್ ಗಾಗಿ ಎರಡು ನಿರ್ದಿಷ್ಟ ಸ್ಥಳಗಳನ್ನು ಗುರುತು ಮಾಡಲಾಗಿತ್ತು. ಎಸ್ ಜೆವಿಎನ್ ಎಂಬ ಸರ್ಕಾರಿ ಸ್ವಾಮ್ಯದ ಸಂಸ್ಥೆ ವರ್ಟಿಕಲ್ ಡ್ರಿಲ್ಲಿಂಗ್ ನ್ನು ಆರಂಭಿಸಿದೆ. ಈ ನಡುವೆ ರಕ್ಷಣಾ ಕಾರ್ಯಾಚರಣೆಗೆ ನೆರವು ನೀಡಲು ಸೇನೆಯೂ ಧಾವಿಸಿದೆ. 

ನ.12 ರಂದು ಟನಲ್ ಪ್ರದೇಶದಲ್ಲಿ ಭೂಕುಸಿತ ಉಂಟಾಗಿ ಟನಲ್ ಭಾಗಶಃ ಕುಸಿದಿದ್ದು ಕಾರ್ಮಿಕರು ಹೊರಬರಲು ಸಾಧ್ಯವಾಗದೇ ಒಳಗೆ ಸಿಲುಕಿದ್ದಾರೆ.

ಇದೇ ವೇಳೆ ಸೇನೆ ಮಾನಸಂಪನ್ಮೂಲ ಬಳಸಿಕೊಂಡು ಟನಲ್ ಡ್ರಿಲ್ಲಿಂಗ್ ಕಾರ್ಯಾಚರಣೆಯಲ್ಲಿ ತೊಡಗಿದೆ. ಸೇನೆಯ ಮದ್ರಾಸ್ ಸ್ಯಾಪರ್ಸ್ ಈ ಕಾರ್ಯಾಚರಣೆಯನ್ನು ನಡೆಸಲಿದೆ ಮತ್ತು ಅವರ 20 ಸದಸ್ಯರ ತುಕಡಿಯನ್ನು ಹಿರಿಯ ಅಧಿಕಾರಿಗಳು ಆಯ್ಕೆ ಮಾಡಿದ್ದಾರೆ. ಇದಕ್ಕೂ ಮುನ್ನ  ಸುರಂಗ ಕೊರೆಯುತ್ತಿದ್ದ ಮಾರ್ಗ ಮಧ್ಯೆ ಮತ್ತೆ ಅಡ್ಡಿ ಎದುರಾಗಿದ್ದು ಕೊರೆಯುವ ಕಾರ್ಯವನ್ನು ಮತ್ತೆ ಸ್ಥಗಿತಗೊಳಿಸಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT