ಸಾಂದರ್ಭಿಕ ಚಿತ್ರ 
ದೇಶ

ಸಹಪಾಠಿಗೆ 108 ಬಾರಿ ಕಾಂಪಾಸ್ ನಿಂದ ಇರಿದ  4ನೇ ತರಗತಿ ವಿದ್ಯಾರ್ಥಿಗಳು!

ಮಧ್ಯಪ್ರದೇಶದ ಇಂದೋರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಜ್ಯಾಮಿಟ್ರಿ ಕಂಪಾಸ್‌ನಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದ ಖಾಸಗಿ ಶಾಲೆಯೊಂದರಲ್ಲಿ ನಡೆದ ಜಗಳದ ವೇಳೆ 4ನೇ ತರಗತಿಯ ವಿದ್ಯಾರ್ಥಿಯೊಬ್ಬನ ಮೇಲೆ ಆತನ ಮೂವರು ಸಹಪಾಠಿಗಳು ಜ್ಯಾಮಿಟ್ರಿ ಕಂಪಾಸ್‌ನಿಂದ 108 ಬಾರಿ ಹಲ್ಲೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಶಾಲೆಯಲ್ಲಿ ವಿದ್ಯಾರ್ಥಿಗಳ ಮಧ್ಯೆಯೇ ಸಣ್ಣ ಗಲಾಟೆ ನಡೆದಿದೆ. ಇದೇ ಕಾರಣಕ್ಕಾಗಿ 4ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ಕೆಲ ವಿದ್ಯಾರ್ಥಿಗಳು ತ್ರಿಜ್ಯದಿಂದ ನೂರಕ್ಕೂ ಅಧಿಕ ಬಾರಿ ಇರಿದಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಬಾಲಕನು ಪ್ರಾಣಾಪಾಯದಿಂದ ಪಾರಾಗಿದ್ದರೂ ಮೈತುಂಬ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ತ್ರಿಜ್ಯದಿಂದ ಹಲವು ಬಾರಿ ಹಲ್ಲೆಗೊಳಗಾದ ವಿದ್ಯಾರ್ಥಿಯ ಪೋಷಕರು ಶಾಲೆಯ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಶಾಲೆ ಆಡಳಿತ ಮಂಡಳಿ, ವಿದ್ಯಾರ್ಥಿಗಳ ವಿರುದ್ಧ ಪೊಲೀಸ್‌ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಇದಾದ ಬಳಿಕ ಶಾಲೆಯ ಪ್ರಾಂಶುಪಾಲರಾದ ರಮಾ ಶರ್ಮಾ ಅವರು ವಿದ್ಯಾರ್ಥಿಯ ಪೋಷಕರನ್ನು ಮನವೊಲಿಸಿದ್ದು, ದೂರು ದಾಖಲಾಗಿಲ್ಲ ಎಂದು ತಿಳಿದುಬಂದಿದೆ. ಇನ್ನು ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆಸಿದ ಇಬ್ಬರು ವಿದ್ಯಾರ್ಥಿಗಳನ್ನು ಶಾಲೆಯಿಂದ ಅಮಾನತುಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಹಲ್ಲೆಗೊಳಗಾದ ವಿದ್ಯಾರ್ಥಿಯನ್ನು ಆರಾಧ್ಯ ಎಂದು ಗುರುತಿಸಲಾಗಿದೆ. ಹಲ್ಲೆ ಮಾಡಿದ ವಿದ್ಯಾರ್ಥಿಗಳು ನಿತ್ಯ ಶಾಲೆಗೆ ಬರುತ್ತಾರೆ. ಆದರೆ, ಅವರು ಪ್ರತಿ ದಿನ ಯಾವುದಾದರೊಂದು ಗಲಾಟೆಗೆ ಕಾರಣರಾಗುತ್ತಿದ್ದರು ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ