ತಿರುಪತಿಯಲ್ಲಿ ಪ್ರಧಾನಿ ಮೋದಿ. 
ದೇಶ

ತಿರುಪತಿ ದೇಗುಲಕ್ಕೆ ಪ್ರಧಾನಿ ಭೇಟಿ, 140 ಕೋಟಿ ಭಾರತೀಯರ ಶ್ರೇಯಸ್ಸಿಗೆ ಪ್ರಾರ್ಥಿಸಿದೆ ಎಂದ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದ್ದು, ವೆಂಕಟೇಶ್ವರನ ದರ್ಶನ ಪಡೆದು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದಿದ್ದಾರೆ. ೌ

ತಿರುಪತಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಿರುಪತಿ ಬಾಲಾಜಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದ್ದು, ವೆಂಕಟೇಶ್ವರನ ದರ್ಶನ ಪಡೆದು ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದಿದ್ದಾರೆ.

ಈ ಕುರಿತ ಚಿತ್ರಗಳನ್ನು ಸ್ವತಃ ಪ್ರಧಾನಿ ಮೋದಿ ಅವರೇ ತಮ್ಮ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಪೋಸ್ಟ್ ನಲ್ಲಿ '140 ಕೋಟಿ ಭಾರತೀಯರ ಸಮೃದ್ಧಿ ಮತ್ತು ಉತ್ತಮ ಆರೋಗ್ಯಕ್ಕಾಗಿ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದೆ ಎಂದು ಹೇಳಿದ್ದಾರೆ.

ಭಾನುವಾರ ರಾತ್ರಿಯೇ ಪ್ರಧಾನಿ ತಿರುಮಲಕ್ಕೆ ಆಗಮಿಸಿದ್ದರು. ಆಂಧ್ರಪ್ರದೇಶದ ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ರೇಣಿಗುಂಟಾ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡಿದ್ದರು. ದೇವರ ದರ್ಶನದ ನಂತರ ಪ್ರಧಾನಿ ತೆಲಂಗಾಣಕ್ಕೆ ತೆರಳಲಿದ್ದಾರೆ.

ತೆಲಂಗಾಣದ 119 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 30 ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಹೊರ ಬೀಳಲಿದೆ. ತೆಲಂಗಾಣಕ್ಕೂ ಮುನ್ನ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಗೆ ಮತದಾನ ನಡೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT