ಸಿಲ್ಕ್ಯಾರಾ ಸುರಂಗ ಕುಸಿತ 
ದೇಶ

ಸಿಲ್ಕ್ಯಾರಾ ಸುರಂಗ ಕುಸಿತ: ಕಾರ್ಮಿಕರ ರಕ್ಷಣೆಗೆ ಮಾನವ ಶಕ್ತಿ ಬಳಕೆ ಬಿಟ್ಟು ಬೇರೆ ದಾರಿಯಿಲ್ಲ; ತಜ್ಞರ ಅಭಿಪ್ರಾಯ

ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಮಾನವ ಶಕ್ತಿ ಬಳಕೆ ಬಿಟ್ಟು ಬೇರೆ ದಾರಿಯಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಉತ್ತರಕಾಶಿ: ಉತ್ತರಖಂಡದ ಉತ್ತರಕಾಶಿಯಲ್ಲಿರುವ ಸಿಲ್ಕ್ಯಾರಾ ಸುರಂಗ ಕುಸಿತ ಪ್ರಕರಣದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣೆಗೆ ಮಾನವ ಶಕ್ತಿ ಬಳಕೆ ಬಿಟ್ಟು ಬೇರೆ ದಾರಿಯಿಲ್ಲ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ಈಗಾಗಲೇ ಸಾಕಷ್ಟು ಕಾರ್ಯಾಚರಣೆ ನಡೆಸಿರುವ ರಕ್ಷಣಾ ಸಿಬ್ಬಂದಿ ಇದೀಗ ಲಂಬ ಕೊರೆಯುವಿಕೆ ಕಾರ್ಯಾಚರಣೆ ನಡೆಸುತ್ತಿದ್ದು, ಇದೂ ಕೂಡ ನಿರ್ಣಾಯಕ ಹಂತ ತಲುಪಿದೆ. ಯಾವುದೇ ಕ್ಷಣದಲ್ಲಿ ರಕ್ಷಣಾ ಸಿಬ್ಬಂದಿ ನಿಗಧಿತ ಗುರಿ ತಲುಪಬಹುದು. ಆದರೆ ಹಾಲಿ ಪರಿಸ್ಥಿತಿಯಲ್ಲಿ ಸುರಂಗದೊಳಗೆ ಯಂತ್ರಗಳ ಕಾರ್ಯಾಚರಣೆ ಅಸಾಧ್ಯ ಎಂದು ಹೇಳಿರುವ ತಜ್ಞರು ರಕ್ಷಣಾ ಕಾರ್ಯಾಚರಣೆಗೆ ಮಾನವ ಶಕ್ತಿ ಬಳಕೆ ಬಿಟ್ಟು ಬೇರೆ ದಾರಿಯಿಲ್ಲ ಎಂದು ಮಾಜಿ ಇಂಜಿನಿಯರ್-ಇನ್-ಚೀಫ್ ಮತ್ತು ಬಾರ್ಡರ್ ರೋಡ್ಸ್ ಆರ್ಗನೈಸೇಷನ್ ಡೈರೆಕ್ಟರ್ ಜನರಲ್, ಲೆಫ್ಟಿನೆಂಟ್ ಜನರಲ್ ಹರ್ಪಾಲ್ ಸಿಂಗ್ (ನಿವೃತ್ತ) ಹೇಳಿದ್ದಾರೆ.

ಇದನ್ನೂ ಓದಿ: ಸಿಲ್ಕ್ಯಾರ ಟನಲ್ ಮೇಲ್ಭಾಗದಲ್ಲಿ ಲಂಬ ಕೊರೆಯುವಿಕೆ ಆರಂಭ: ರಕ್ಷಣಾ ಕಾರ್ಯಾಚರಣೆಗೆ ಸೇನೆ ನೆರವು
 
"ಮಾನವ ಶಕ್ತಿ ಬಳಕೆ ವಿಧಾನವನ್ನು ಹೊರತುಪಡಿಸಿ ಬೇರೆ ಯಾವುದೇ ಮಾರ್ಗವಿಲ್ಲ ಮತ್ತು ನಾವು ಕಾರ್ಮಿಕರನ್ನು ತಲುಪಲು ಸುರಕ್ಷಿತ ಮಾರ್ಗವಾಗಿದೆ. ಪ್ರಸ್ತುತ ಪರಿಸ್ಥಿತಿಯಲ್ಲಿ, ಸಿಲುಕಿಕೊಂಡಿದ್ದ ಆಗರ್ ಯಂತ್ರವನ್ನು ತೆಗೆದುಹಾಕಲಾಗಿದೆ. 1.5 ಮೀಟರ್ ಸುರಂಗ ತೆಗೆಯುವ ಪ್ರಯತ್ನಗಳು ನಡೆಯುತ್ತಿವೆ. ಹಾನಿಗೊಳಗಾದ ಪೈಪ್, ಅದನ್ನು ತೆಗೆದುಹಾಕುವುದು, ಬಲಪಡಿಸುವುದು ಮತ್ತು ಮಕ್ ತೆರವು ನಂತರ, ನುರಿತ ಕಾರ್ಮಿಕರು ಸೇನೆಯ ಸಹಾಯದಿಂದ ಸುರಂಗದೊಳಗೆ ಹೋಗುತ್ತಾರೆ. ಇದನ್ನು ಶೀಘ್ರದಲ್ಲೇ ಮಾಡಲಾಗುತ್ತದೆ ಎಂದು ನಾವು ಭಾವಿಸುತ್ತೇವೆ" ಎಂದು ಲೆಫ್ಟಿನೆಂಟ್ ಜನರಲ್ ಹರ್ಪಾಲ್ ಸಿಂಗ್ (ನಿವೃತ್ತ) ಹೇಳಿದರು.

ತಾಂತ್ರಿಕ ಮಾಹಿತಿ ಒದಗಿಸಲು ಮತ್ತು ನಡೆಯುತ್ತಿರುವ ರಕ್ಷಣಾ ಕಾರ್ಯಾಚರಣೆಗಳಿಗೆ ಹೆಚ್ಚಿನ ನೆರವು ನೀಡಲು ತಾನು ಸ್ಥಳಕ್ಕೆ ತಲುಪಿದ್ದೇನೆ. ರಕ್ಷಣಾ ಪ್ರಕ್ರಿಯೆಯನ್ನು ವೇಗಗೊಳಿಸಲು ಎಲ್ಲಾ ರಂಗಗಳಲ್ಲಿ ಪ್ರಯತ್ನಗಳನ್ನು ಮಾಡಲಾಗುತ್ತದೆ. ತಾಂತ್ರಿಕ ಸಲಹೆ, ಮಾಹಿತಿಗಳನ್ನು ಒದಗಿಸಲು ಮತ್ತು ಹೆಚ್ಚಿನ ರಕ್ಷಣಾ ಕಾರ್ಯಾಚರಣೆಗಳಲ್ಲಿ ಭಾಗವಹಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಕೆಳಗಿನಿಂದ ಪೈಪ್‌ಲೈನ್ ಮೂಲಕ ನಡೆಯುತ್ತಿರುವ ಕೆಲಸಗಳು ಮತ್ತು ಮೇಲಿನಿಂದ ಲಂಬ ಕೊರೆಯುವ ಮೂಲಕ 31 ಮೀಟರ್ ಸುತ್ತಲೂ ಮಾಡಲಾದ ಕೆಲಸಗಳು, ಪ್ರಯತ್ನಗಳು ಎರಡೂ ಮಾರ್ಗಗಳ ಮೂಲಕ ಮಾಡಲಾಗುತ್ತಿದೆ," ಎಂದು ಅವರು ಹೇಳಿದರು.

ಇನ್ನು ಮುಂದೆ ಕೈಗೆತ್ತಿಕೊಳ್ಳಲಿರುವ ಮಾನವ ಶಕ್ತಿ ಬಳಕೆಯ ಸುರಂಗ ಕೊರೆತದ ಕುರಿತು ಮಾತನಾಡಿದ ಅವರು, "ನಾವು ಸಹಾಯ ಮಾಡಲು ಇಲ್ಲಿದ್ದೇವೆ, ಕಾರ್ಯಾಚರಣೆಗಳನ್ನು ಸೇನೆ ಮತ್ತು ಇತರ ಏಜೆನ್ಸಿಗಳು ನಡೆಸುತ್ತವೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ರಸ್ತೆ, ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಕಾರ್ಯದರ್ಶಿಗಳ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಸೇನೆಯ ಇಂಜಿನಿಯರ್ಸ್ ರೆಜಿಮೆಂಟ್ ಮ್ಯಾನ್ಯುವಲ್ ಡ್ರಿಫ್ಟ್ ಮಾಡಿದೆ ಮತ್ತು ಅವರೊಂದಿಗೆ ಇಂಜಿನಿಯರ್ ರೆಜಿಮೆಂಟ್ನ ಸಿಬ್ಬಂದಿ ಕೊನೆಯ 10-12 ಮೀಟರ್ ಪೈಪ್‌ಲೈನ್ ಹಾಕುವ ಕೆಲಸ ಮಾಡುತ್ತಾರೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT