ಸಾಂದರ್ಭಿಕ ಚಿತ್ರ 
ದೇಶ

ವಿಶ್ವಕಪ್ ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿದ ಆರೋಪ: ಯುಎಪಿಎ ಅಡಿ ಏಳು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ

ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಸೋಲನ್ನು ಸಂಭ್ರಮಿಸಿದ ಆರೋಪದಲ್ಲಿಕೃಷಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. 

ಜಮ್ಮು: ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಕ್ರಿಕೆಟ್ ತಂಡದ ಸೋಲನ್ನು ಸಂಭ್ರಮಿಸಿದ ಆರೋಪದಲ್ಲಿಕೃಷಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಬಂಧಿತ ಯುವಕರು ಕಾಶ್ಮೀರದ ಶೇರ್-ಎ-ಕಾಶ್ಮೀರ್ ಕೃಷಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ. 

ವಿಶ್ವಕಪ್  ಫೈನಲ್ ಪಂದ್ಯದಲ್ಲಿ ಭಾರತ ಸೋತು ಆಸ್ಟ್ರೇಲಿಯಾ  ಕಪ್ ಗೆದ್ದ ನಂತರ  ಕಾಲೇಜು ಸಹಪಾಠಿಗಳು ನನಗೆ ಕಿರುಕುಳ ನೀಡಿದ್ದಾರೆ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದಾರೆ ಎಂದು ಆರೋಪಿಸಿ ಹೊರಗಿನ  ವಿದ್ಯಾರ್ಥಿಯೊಬ್ಬ ದಾಖಲಿಸಿದ ದೂರಿನ ಆಧಾರದಲ್ಲಿ ತನಿಖೆ ಆರಂಭಿಸಿದ ಪೊಲೀಸರು,  ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. 

ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್