ಸಾಂದರ್ಭಿಕ ಚಿತ್ರ 
ದೇಶ

ರುಚಿಯಾದ ಆಹಾರ ನೀಡಿಲ್ಲವೆಂದು ಹೆತ್ತತಾಯಿಯನ್ನೇ ಕೊಂದ ಪಾಪಿ ಪುತ್ರ!

ರುಚಿಯಾದ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ತಾಯಿಯೊಂದಿಗೆ ಜಗಳವಾಡಿದ ನಂತರ 55 ವರ್ಷದ ತಾಯಿಯನ್ನು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮುಂಬೈ: ರುಚಿಯಾದ ಅಡುಗೆ ಮಾಡಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ತಾಯಿಯೊಂದಿಗೆ ಜಗಳವಾಡಿದ ನಂತರ 55 ವರ್ಷದ ತಾಯಿಯನ್ನು ಕೊಂದಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವೇಲು ಗ್ರಾಮದಲ್ಲಿ ಭಾನುವಾರ (ನವೆಂಬರ್‌ 26) ಸಂಜೆ ಕೊಲೆ ನಡೆದಿದೆ. ಅಡುಗೆ ರುಚಿಯಾಗಿ ಮಾಡಿಲ್ಲ ಎಂದು 55 ವರ್ಷದ ತಾಯಿಯನ್ನು ಮಗ ಕೊಂದಿದ್ದಾನೆ ಎಂದು ಪೊಲೀಸರು ಮಂಗಳವಾರ (ನವೆಂಬರ್‌ 28) ಮಾಹಿತಿ ನೀಡಿದ್ದಾರೆ.

ಮನೆ, ಅಡುಗೆ ವಿಚಾರಕ್ಕೆ ಆಗಾಗ ತಾಯಿ ಮಗನ ಮಧ್ಯೆ ಜಗಳ ನಡೆಯುತ್ತಿತ್ತು. ಭಾನುವಾರ ರಾತ್ರಿ ಮನೆಗೆ ಬಂದ ಮಗನಿಗೆ ತಾಯಿ ಊಟ ಬಡಿಸಿದ್ದಾಳೆ. ಊಟ ರುಚಿಯಾಗಿಲ್ಲ ಎಂದು ಆತ ತಾಯಿ ಜತೆ ಜಗಳ ಆಡಿದ್ದಾನೆ. ಇದೇ ವೇಳೆ ಆತನು ತಾಯಿಯ ಕತ್ತಿಗೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಮಹಿಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರತಿದಿನ ರುಚಿಯಾಗಿ ಅಡುಗೆ ಮಾಡಿಲ್ಲ ಎಂದು ವ್ಯಕ್ತಿಯು ತಾಯಿ ಜತೆ ಜಗಳ ಆಡುತ್ತಿದ್ದ ಎಂದು ನೆರೆಹೊರೆಯವರು ತಿಳಿಸಿದ್ದಾರೆ. ರುಚಿಯಾಗಿ ಅಡುಗೆ ಮಾಡಿಲ್ಲ ಎಂಬ ವಿಷಯಕ್ಕೇ ಕಳೆದ ಭಾನುವಾರ ವ್ಯಕ್ತಿಯು ಕೋಪಗೊಂಡಿದ್ದಾನೆ. ಮೊದಲು ತಾಯಿ ಮೇಲೆ ಹಲ್ಲೆ ನಡೆಸಿದ್ದಾನೆ. ಇದಾದ ಬಳಿಕ ಕುಡಗೋಲಿನಿಂದ ಆಕೆಯ ಕುತ್ತಿಗೆಗೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ದಾಖಲಿಸಿಕೊಂಡಿರುವ ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

ತಾಯಿ ಮೇಲೆ ಮಗ ಹಲ್ಲೆ ನಡೆಸುತ್ತಿರುವ ಕುರಿತು ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವಷ್ಟರಲ್ಲಿ ಮಹಿಳೆ ಮೃತಪಟ್ಟಿದ್ದರು ಎನ್ನಲಾಗಿದೆ. ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮತ್ತೊಂದೆಡೆ, ತಾಯಿಯನ್ನು ಹತ್ಯೆಗೈದ ವ್ಯಕ್ತಿಯು ನಿದ್ರೆ ಮಾತ್ರೆಗಳನ್ನು ನುಂಗಿದ್ದಾನೆ. ಅಸ್ವಸ್ಥಗೊಂಡಿರುವ ಆತನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ಗುಣಮುಖನಾದ ಮೇಲೆ ಪೊಲೀಸರು ಬಂಧಿಸುತ್ತಾರೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಹಸಸಿಂಹ, ಏಜೆಂಟ್ ಅಮರ್ ಚಿತ್ರ ಖ್ಯಾತಿಯ ನಿರ್ದೇಶಕ ಜೋ ಸೈಮನ್ ಹೃದಯಾಘಾತದಿಂದ ನಿಧನ

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

ಸೆಂಟ್ರಲ್ ಏಜೆನ್ಸಿಗಳ ಒತ್ತಡದಿಂದ NCP ತೊರೆದಿದ್ದ ಅಜಿತ್ ಪವಾರ್, ಮತ್ತೆ ಎರಡು ಬಣಗಳ ವಿಲೀನ ಬಯಸಿದ್ದರು- NCP SP ನಾಯಕ

ಪ್ರೇಮಿಗಳ ದಿನಾಚರಣೆಗೆ ಕ್ಷಣಗಣನೆ: ಹಾರ್ದಿಕ್ ಪಾಂಡ್ಯಗೆ ಮಹಿಕಾ ಕೊಟ್ಟ 'ಸ್ಪೆಷಲ್ ಗಿಫ್ಟ್' ಏನು ಗೊತ್ತಾ? Video

ವಿಜಯ್ ಗೆ ಜನರಿಗೆ ಸಹಾಯ ಮಾಡುವ ಉದ್ದೇಶ ಇಲ್ಲ: ಸಿಂಪಲ್ ಆಗಿ ಸಿಎಂ ಆಗುವ ಬಯಕೆ- ಡಿಎಂಕೆ ತಿರುಗೇಟು

SCROLL FOR NEXT