ಸಾಂದರ್ಭಿಕ ಚಿತ್ರ 
ದೇಶ

ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಲು ಇಬ್ಬರಿಗೆ ಅವಕಾಶ: 40 ವರ್ಷದ ಮಹಿಳೆಗೆ ಜೈಲು ಶಿಕ್ಷೆ!

ದುಷ್ಟ ಮಹಿಳೆಯೊಬ್ಬಳು ತನ್ನ ಅಪ್ರಾಪ್ತ ಮಗಳ ಮೇಲೆಯೇ ಪ್ರಿಯತಮ ಅತ್ಯಾಚಾರ ಎಸಗಲು  ಅವಕಾಶ  ಮಾಡಿಕೊಟ್ಟ ಮಹಿಳೆಗೆ ನ್ಯಾಯಾಲಯವು 40 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ತಿರುವನಂತಪುರಂ: ದುಷ್ಟ ಮಹಿಳೆಯೊಬ್ಬಳು ತನ್ನ ಅಪ್ರಾಪ್ತ ಮಗಳ ಮೇಲೆಯೇ ಪ್ರಿಯತಮ ಅತ್ಯಾಚಾರ ಎಸಗಲು  ಅವಕಾಶ  ಮಾಡಿಕೊಟ್ಟ ಮಹಿಳೆಗೆ ನ್ಯಾಯಾಲಯವು 40 ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಕೇರಳದ ಸ್ಪಷೆಲ್‌ ಫಾಸ್ಟ್‌ ಟ್ರ್ಯಾಕ್‌ ನ್ಯಾಯಾಲಯವು ಮಹಿಳೆಗೆ 40 ವರ್ಷ ಜೈಲು ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿದೆ. ದಂಡ ವಿಧಿಸಲು ವಿಫಲವಾದರೆ ಮಹಿಳೆಯು ಇನ್ನೂ 6 ತಿಂಗಳು ಜೈಲಿನಲ್ಲಿ ಇರಬೇಕು ಎಂದು ನ್ಯಾಯಾಲಯವು ಆದೇಶಿಸಿದೆ. ಅಲ್ಲದೆ, “ಒಬ್ಬ ತಾಯಿಯಾದವಳು ಮಕ್ಕಳನ್ನು ರಕ್ಷಿಸಬೇಕು. ಆದರೆ, ಇಂತಹ ಪ್ರಕರಣಗಳು ತಾಯ್ತನಕ್ಕೇ ಕಳಂಕ ಅಂಟಿಸುವ ಪ್ರಕರಣಗಳಾಗಿವೆ” ಎಂದು ನ್ಯಾಯಾಲಯವು ಬೇಸರ ವ್ಯಕ್ತಪಡಿಸಿದೆ. 2018-19ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ಶಿಕ್ಷೆ ವಿಧಿಸಿದೆ.

ಕೇರಳದ ಮಹಿಳೆಯ ಪತಿಯು ಮಾನಸಿಕವಾಗಿ ಅಸ್ವಸ್ಥಗೊಂಡಿದ್ದಾರೆ. ಇದರಿಂದಾಗಿ ಮಹಿಳೆಯು ಆತನನ್ನು ತೊರೆದು ಶಿಶುಪಾಲನ್‌ ಎಂಬ ಪ್ರಿಯತಮನ ಜತೆ ವಾಸಿಸುತ್ತಿದ್ದಳು. ಮಹಿಳೆಯು ಶಿಶುಪಾಲನ್‌ ಜತೆ ವಾಸಿಸುವಾಗ ಆಗ 7 ವರ್ಷದವಳಿದ್ದ ಮಗಳನ್ನೂ ಕರೆದುಕೊಂಡು ಹೋಗಿದ್ದರು. ಆದರೆ, ಶಿಶುಪಾಲನ್‌ ತನ್ನ ಮಗಳ ಮೇಲೆ ಕಣ್ಣು ಹಾಕಿದರೂ ಸುಮ್ಮನಿದ್ದ ಮಹಿಳೆಯು, ತನ್ನೆದುರೇ ಮಗಳ ಮೇಲೆ ಅತ್ಯಾಚಾರ ಎಸಗಲು ಬಿಟ್ಟಿದ್ದಾಳೆ. ಹಲವು ಬಾರಿ ಅತ್ಯಾಚಾರ ಎಸಗಿದರೂ ಮಹಿಳೆಯು ನೋಡಿ ಸುಮ್ಮನಾಗಿದ್ದಾಳೆ.

ಮಹಿಳೆಗೆ 11 ವರ್ಷದ ಇನ್ನೊಬ್ಬ ಮಗಳಿದ್ದು, ಆಕೆ ಅಜ್ಜಿಯ ಮನೆಯಲ್ಲಿ ಇರುತ್ತಿದ್ದಳು. ಅದೊಂದು ದಿನ ತಾಯಿಯ ಮನೆಗೆ ಬಂದ ಆಕೆಯ ಎದುರು 7 ವರ್ಷದ ಬಾಲಕಿಯು ಘಟನೆ ಕುರಿತು ತಿಳಿಸಿದ್ದಾಳೆ. ಇದರಿಂದ ಭಯಗೊಂಡ ಬಾಲಕಿಯು ತಂಗಿಯನ್ನು ಕರೆದುಕೊಂಡು ಅಜ್ಜಿಯ ಮನೆಗೆ ಪರಾರಿಯಾಗಿದ್ದಾಳೆ. ಮನೆಗೆ ಹೋದ ಕೂಡಲೇ ಅಜ್ಜಿಗೆ ತನ್ನ ತಾಯಿ ಮಾಡಿದ ನೀಚ ಕೆಲಸದ ಕುರಿತು ಮಾಹಿತಿ ನೀಡಿದ್ದಾಳೆ. ಇದಾದ ಬಳಿಕ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದ್ದು, ಮಹಿಳೆಯ ನೀಚ ಕೆಲಸವು ಬಯಲಾಗಿದೆ.

ಮಹಿಳೆಯು ತನ್ನ ಮಗಳ ಮೇಲೆ ಒಬ್ಬನಲ್ಲ, ಇಬ್ಬರು ಗೆಳೆಯರಿಂದ ಅತ್ಯಾಚಾರ ಎಸಗಲು ಬಿಟ್ಟಿದ್ದಾಳೆ ಎಂದು ತಿಳಿದುಬಂದಿದೆ. ಮೊದಲ ಪ್ರಕರಣ ಬಯಲಾದ ಬಳಿಕ ಶಿಶುಪಾಲನ್‌ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದಾದ ನಂತರ ಮಹಿಳೆಯು ಮತ್ತೊಬ್ಬ ಗೆಳೆಯನ ಜತೆ ವಾಸಿಸುತ್ತಿದ್ದಳು. ಆಗ ಆತನೂ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT