ದೇಶ

ಮುಂಬೈ: ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ ಕೇರಳ ಮೂಲದ 20 ವರ್ಷದ ಯುವತಿ ಆತ್ಮಹತ್ಯೆ 

Ramyashree GN

ಮುಂಬೈ: ಭಾರತೀಯ ನೌಕಾಪಡೆಯಲ್ಲಿ ಅಗ್ನಿವೀರ್ ತರಬೇತಿ ಪಡೆಯುತ್ತಿದ್ದ 20 ವರ್ಷದ ಮಹಿಳೆ ಮುಂಬೈನ ಐಎನ್‌ಎಸ್ ಹಮ್ಲಾದಲ್ಲಿರುವ ತನ್ನ ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಕೇರಳ ಮೂಲದ ಯುವತಿ ಮಲಾಡ್‌ನ ಪಶ್ಚಿಮ ಉಪನಗರದಲ್ಲಿರುವ ಮಾಲ್ವಾನಿ ಪ್ರದೇಶದ ಐಎನ್‌ಎಸ್ ಹಮ್ಲಾದಲ್ಲಿ ತರಬೇತಿ ಪಡೆಯುತ್ತಿದ್ದರು. ಸೋಮವಾರ ಬೆಳಗ್ಗೆ ಆಕೆ ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲದಿದ್ದರೂ, ವೈಯಕ್ತಿಕ ಕಾರಣಗಳಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯುವತಿ ತನ್ನ ಮೂಲಭೂತ ತರಬೇತಿಯನ್ನು ಪೂರ್ಣಗೊಳಿಸಿದ ನಂತರ ಕಳೆದ 15 ದಿನಗಳಿಂದ ಈ ಸೌಲಭ್ಯದಲ್ಲಿ ತರಬೇತಿ ಪಡೆಯುತ್ತಿದ್ದರು ಎಂದು ಅವರು ಹೇಳಿದರು.

ಪೊಲೀಸರು ಆಕಸ್ಮಿಕ ಸಾವಿನ ವರದಿಯನ್ನು (ಎಡಿಆರ್) ದಾಖಲಿಸಿಕೊಂಡಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಗ್ನಿವೀರ್‌ಗಳು 2022ರಲ್ಲಿ ಪರಿಚಯಿಸಲಾದ ಅಗ್ನಿಪಥ್ ಯೋಜನೆಯಡಿ ಸಶಸ್ತ್ರ ಪಡೆಗಳಿಗೆ ನೇಮಕಗೊಂಡಂತ ಸೈನಿಕರು.
ನೂತನ ಅಗ್ನಿಪಥ್ ಯೋಜನೆ ಅಡಿಯಲ್ಲಿ ಭಾರತೀಯ ಸೇನೆಯ ಮೂರು ವಿಭಾಗಗಳಲ್ಲಿ ಕೆಲಸ ಮಾಡಲು ಇಚ್ಛಿಸುವ ಯುವಕ-ಯುವತಿಯರು ತರಬೇತಿ ಸೇರಿದಂತೆ ನಾಲ್ಕು ವರ್ಷಗಳ ಕಾಲ 'ಅಗ್ನಿವೀರ್' ಎಂಬ ಹೆಸರಿನ ಯೋಧರಾಗಿ ಕೆಲಸ ಮಾಡಬಹುದಾಗಿದೆ. ನಾಲ್ಕು ವರ್ಷಗಳಲ್ಲಿ ಮೊದಲಿಗೆ ಆರು ತಿಂಗಳ ಕಠಿ ತರಬೇತಿ ಪಡೆಯಬೇಕಿರುತ್ತದೆ. ಅಗ್ನಿವೀರರಾಗಲು 10ನೇ ತರಗತಿ ಮತ್ತು ಪಿಯುಸಿ ಪಾಸಾದವರು ಅರ್ಹರು. 

SCROLL FOR NEXT