ಸಾಂದರ್ಭಿಕ ಚಿತ್ರ 
ದೇಶ

ಮಹಿಳಾ ಸ್ವ-ಸಹಾಯ ಗುಂಪುಗಳಿಗೆ ಡ್ರೋನ್‌ ಒದಗಿಸಲು 1,261 ಕೋಟಿ ರೂ. ಯೋಜನೆಗೆ ಕೇಂದ್ರ ಅನುಮೋದನೆ

ಮುಂದಿನ ಹಣಕಾಸು ವರ್ಷದಿಂದ ಎರಡು ವರ್ಷಗಳವರೆಗೆ ಒಟ್ಟು ರೂ. 1, 261 ಕೋಟಿ ವೆಚ್ಚದೊಂದಿಗೆ  15,000 ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಡ್ರೋನ್‌ಗಳನ್ನು ಒದಗಿಸುವ ಕೇಂದ್ರ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ.

ನವದೆಹಲಿ: ಮುಂದಿನ ಹಣಕಾಸು ವರ್ಷದಿಂದ ಎರಡು ವರ್ಷಗಳವರೆಗೆ ಒಟ್ಟು ರೂ. 1, 261 ಕೋಟಿ ವೆಚ್ಚದೊಂದಿಗೆ 15,000 ಮಹಿಳಾ ಸ್ವ-ಸಹಾಯ ಗುಂಪುಗಳಿಗೆ (ಎಸ್‌ಎಚ್‌ಜಿ) ಡ್ರೋನ್‌ಗಳನ್ನು ಒದಗಿಸುವ ಕೇಂದ್ರ ಯೋಜನೆಗೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಆಗಸ್ಟ್ 15 ರಂದು ಪ್ರಧಾನಮಂತ್ರಿಯವರು ಕೆಂಪು ಕೋಟೆಯಿಂದ ಮಾಡಿದ ತಮ್ಮ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಡ್ರೋನ್ ತಂತ್ರಜ್ಞಾನದೊಂದಿಗೆ ಮಹಿಳಾ ಸ್ವ ಸಹಾಯ ಸಂಘಗಳನ್ನು ಸಬಲೀಕರಣಗೊಳಿಸುವುದಾಗಿ ಘೋಷಿಸಿದ್ದರು. ಅಲ್ಲದೇ ಗ್ರಾಮೀಣ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಾಮರ್ಥ್ಯವನ್ನು ಹೆಚ್ಚಿಸುವುದಾಗಿ ಹೇಳಿದ್ದರು. 

ಕೃಷಿ ಉದ್ದೇಶಗಳಿಗಾಗಿ ರೈತರಿಗೆ ಬಾಡಿಗೆ ಸೇವೆಗಳನ್ನು ಒದಗಿಸಲು 2023-24 ರಿಂದ 2025-2026 ರ ಅವಧಿಯಲ್ಲಿ ಆಯ್ದ 15,000 ಮಹಿಳಾ ಸ್ವಸಹಾಯ ಗುಂಪುಗಳಿಗೆ ಡ್ರೋನ್‌ಗಳನ್ನು ಒದಗಿಸುವ ಗುರಿಯನ್ನು ಈ ಯೋಜನೆ ಹೊಂದಿದೆ.
ಈ ಯೋಜನೆಯು ಮಹಿಳಾ ಸ್ವಸಹಾಯ ಗುಂಪುಗಳನ್ನು ಸಬಲೀಕರಣಗೊಳಿಸಲು ಮತ್ತು ಕೃಷಿ ವಲಯದಲ್ಲಿ ಡ್ರೋನ್ ಸೇವೆಗಳ ಮೂಲಕ ಹೊಸ ತಂತ್ರಜ್ಞಾನಗಳನ್ನು ತರಲು ಪ್ರಯತ್ನಿಸುತ್ತದೆ.

ಈ ಯೋಜನೆಯು ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ರಸಗೊಬ್ಬರ ಇಲಾಖೆ, ಮಹಿಳಾ ಸ್ವಸಹಾಯಗಳು ಮತ್ತು ಪ್ರಮುಖ ರಸಗೊಬ್ಬರ ಕಂಪನಿಗಳ (LFCs) ಸಂಪನ್ಮೂಲಗಳು ಮತ್ತು ಪ್ರಯತ್ನಗಳನ್ನು ಒಟ್ಟುಗೂಡಿಸುವ ಮೂಲಕ ಸಮಗ್ರ ಮಧ್ಯಸ್ಥಿಕೆಗಳನ್ನು ಅನುಮೋದಿಸುತ್ತದೆ.

ಗುರುತಿಸಲಾದ ಕ್ಲಸ್ಟರ್‌ಗಳಲ್ಲಿ ವಿವಿಧ ರಾಜ್ಯಗಳಲ್ಲಿ ಹಂತಹಂತವಾಗಿ 15,000 ಮಹಿಳಾ ಸ್ವಸಹಾಯ ಗುಂಪುಗಳನ್ನು ಡ್ರೋನ್‌ಗಳನ್ನು ಒದಗಿಸಲು ಆಯ್ಕೆ ಮಾಡಲಾಗುತ್ತದೆ. ಡ್ರೋನ್‌ನ ವೆಚ್ಚದ ಶೇ. 80 ರಷ್ಟು ಕೇಂದ್ರ ಹಣಕಾಸು ನೆರವು ನೀಡುತ್ತದೆ. ಡ್ರೋನ್ ಖರೀದಿಗಾಗಿ ಪರಿಕರಣಗಳ ಶುಲ್ಕವಾಗಿ ಗರಿಷ್ಠ ಗರಿಷ್ಠ ರೂ.8 ಲಕ್ಷದವರೆಗೂ ಮಹಿಳಾ ಸಂಘಗಳಿಗೆ ನೀಡಲಾಗುತ್ತದೆ.

ಡ್ರೋನ್‌ಗಳನ್ನು ಸಂಗ್ರಹಿಸುವಲ್ಲಿ ಮತ್ತು ದುರಸ್ತಿ ಮತ್ತು ನಿರ್ವಹಣೆ ಕೈಗೊಳ್ಳುವಲ್ಲಿ ಸ್ವಸಹಾಯ ಗುಂಪುಗಳು ಎದುರಿಸಬಹುದಾದ ತೊಂದರೆಗಳನ್ನು ಪರಿಗಣಿಸಿ ಡ್ರೋನ್ ಪೂರೈಕೆದಾರ ಕಂಪನಿಗಳು ಮತ್ತು ಮಹಿಳಾ ಸ್ವಸಹಾಯ ಗುಂಪುಗಳ ನಡುವೆ ಪ್ರಮುಖ ರಸಗೊಬ್ಬರ ಕಂಪನಿಗಳು ಸೇತುವೆಯಾಗಿ ಕಾರ್ಯನಿರ್ವಹಿಸುತ್ತವೆ.

ಈ ಯೋಜನೆಯು ಕೃಷಿಯಲ್ಲಿ ಸುಧಾರಿತ ತಂತ್ರಜ್ಞಾನ, ಬೆಳೆ ಇಳುವರಿ ಹೆಚ್ಚಿಸಲು ಮತ್ತು ರೈತರ ಅನುಕೂಲಕ್ಕಾಗಿ ಕಾರ್ಯಾಚರಣೆಯ ವೆಚ್ಚವನ್ನು ಕಡಿಮೆ ಮಾಡುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT