ರೌಡಿಗಳನ್ನು ಓಡಿಸಿದ ಮಹಿಳೆ 
ದೇಶ

ಗುಂಡು ಹಾರಿಸಿ ಕೊಲ್ಲಲು ಬಂದವರಿಗೆ 'ಪೊರಕೆ ಪೂಜೆ': ರೌಡಿಗಳನ್ನು ಓಡಿಸಿದ ಮಹಿಳೆಯ ವಿಡಿಯೋ ವೈರಲ್

ಮನೆ ಮುಂದೆ ನಿಂತಿದ್ದ ವ್ಯಕ್ತಿ ಮೇಲೆ ಗುಂಡು ಹಾರಿಸಿ ಕೊಲ್ಲಲು ಬಂದ ದುಷ್ಕರ್ಮಿಗಳನ್ನು ಕಸ ಗುಡಿಸುವ ಪೊರಕೆಯಿಂದಲೇ ಮಹಿಳೆಯೊಬ್ಬರು ಹೆದರಿಸಿ ಓಡಿಸಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.

ಭಿವಾಂಡಿ: ಮನೆ ಮುಂದೆ ನಿಂತಿದ್ದ ವ್ಯಕ್ತಿ ಮೇಲೆ ಗುಂಡು ಹಾರಿಸಿ ಕೊಲ್ಲಲು ಬಂದ ದುಷ್ಕರ್ಮಿಗಳನ್ನು ಕಸ ಗುಡಿಸುವ ಪೊರಕೆಯಿಂದಲೇ ಮಹಿಳೆಯೊಬ್ಬರು ಹೆದರಿಸಿ ಓಡಿಸಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ.

ಹರ್ಯಾಣದ ಭಿವಾಂಡಿಯಲ್ಲಿ ಈ ಘಟನೆ ನಡೆದಿದ್ದು, ಭಿವಾನಿಯ (Bhiwani) ಡಾಲರ್ ಕಾಲೋನಿಯ ಮನೆ ಮುಂದೆ ನಿಂತಿದ್ದ ವ್ಯಕ್ತಿ ಮೇಲೆ ಬೈಕ್ ಗಳಲ್ಲಿ ಬಂದ ನಾಲ್ಕೈದು ಮಂದಿ ದುಷ್ಕರ್ಮಿಗಳು ನೋಡ ನೋಡುತ್ತಲೇ ಆತನ ಮೇಲೆ ಗುಂಡು ಹಾರಿಸುತ್ತಾರೆ. ಈ ವೇಳೆ ಭಯಭೀತನಾದ ವ್ಯಕ್ತಿ ಓಡಿ ಬಂದು ಮನೆಯ ಗೇಟ್ ನೊಳಗೆ ನುಗ್ಗುತ್ತಾನೆ. ಆದರೆ ಆತನನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಗೇಟ್ ನ ಹೊರಗಿನಿಂದಲೇ ಗುಂಡು ಹಾರಿಸುತ್ತಿರುತ್ತಾರೆ. ಈ ವೇಳೆ ಎದುರುಮನೆಯ ಹಿರಿಯ ಮಹಿಳೆಯೊಬ್ಬರು ತಮ್ಮ ಕೈಗೆ ಸಿಕ್ಕ ಕಸಗೂಡಿಸುವ ಪೊರೆಕೆ ಹಿಡಿದು ಗುಂಡು ಹಾರಿಸುತ್ತಿದ್ದ ದುಷ್ಕರ್ಮಿಗಳ ಮೇಲೆ ದಾಳಿ ಮಾಡುತ್ತಾರೆ.

ಈ ವೇಳೆ ಮಹಿಳೆಯ ಆವೇಶಕ್ಕೆ ಹೆದರಿದ ದುಷ್ಕರ್ಮಿಗಳು ತಾವು ತಂದಿದ್ದ ಬೈಕ್ ಮೇಲೆ ಹತ್ತಿ ಪರಾರಿಯಾಗುತ್ತಾರೆ. ಮನೆಗೆ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದ್ದು, ಈ ಕುರಿತಾದ ದೃಶ್ಯಾವಳಿಯು ಸೋಷಿಯಲ್ ಮೀಡಿಯಾದಲ್ಲಿ (Social Media) ಭಾರೀ ವೈರಲ್ ಆಗಿದೆ(Viral Video). ಈ ಮಹಿಳೆಯ ಧೈರ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. 

ಅಂದಹಾಗೆ ಗುಂಡೇಟು ತಿಂದ ವ್ಯಕ್ತಿಯನ್ನು ಹರಿಕಿಶನ್ ಎಂದು ಗುರುತಿಸಲಾಗಿದೆ. ರವಿ ಬಾಕ್ಸರ್ ಹತ್ಯೆ ಪ್ರಕರಣದ ಆರೋಪಿ ಹರಿಕಿಶನ್ ಎಂಬಾತನಿಗೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೊತೆ ಸಂಪರ್ಕವಿದೆ ಎಂದು ಶಂಕಿಸಲಾಗಿದೆ. ಹರಿಕಿಶನ್ ಸದ್ಯ ಜಾಮೀನಿನ ಮೇಲೆ ಹೊರಗಿದ್ದಾರೆ. ಸುಮಾರು ಮೂರು ತಿಂಗಳ ಹಿಂದೆ ಭಿವಾನಿ ಪೊಲೀಸರು ಹರಿಕಿಶನ್ ಮೇಲೆ ಹಲ್ಲೆ ನಡೆಸಲು ಸಂಚು ರೂಪಿಸಿದ ಶಂಕಿತ ಐವರನ್ನು ಬಂಧಿಸಿದ್ದರು.

ಮಂಗಳವಾರ ಬೆಳಗ್ಗೆ 7.30ರ ಸುಮಾರಿಗೆ ಭಿವಾನಿಯ ಡಾಬರ್ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ಶೂಟರ್‌ಗಳು ಒಂಬತ್ತು ಸುತ್ತು ಗುಂಡು ಹಾರಿಸಿದ್ದಾರೆ. ಹರಿಕಿಶನ್‌ಗೆ ನಾಲ್ಕು ಬುಲೆಟ್‌ ತಗುಲಿವೆ. ಗಾಯಗೊಂಡ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಪಿಜಿಐಎಂಎಸ್ ರೋಹ್ಟಕ್‌ಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ದೀಪಕ್ ತಿಳಿಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರೀಕ್ಷಿಸುತ್ತಿದ್ದು, ಶೂಟರ್‌ಗಳು ಮತ್ತು ಅವರೊಂದಿಗೆ ಬಂದ ಇಬ್ಬರು ಸವಾರರನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT