ರಕ್ಷಿಸಲ್ಪಟ್ಟ ಕಾರ್ಮಿಕರು 
ದೇಶ

ಸಿಲ್ಕ್ಯಾರಾ ಸುರಂಗ ಕುಸಿತ: ರಕ್ಷಿಸಲ್ಪಟ್ಟ ಕಾರ್ಮಿಕರಿಗೆ ಋಷಿಕೇಶದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಮತ್ತು ಋಷಿಕೇಶದಲ್ಲಿರುವ ಏಮ್ಸ್ ಗೆ ಏರ್ ಲಿಫ್ಟ್ ಮಾಡಲಾಗಿದೆ. ಅಲ್ಲಿ ಅವರನ್ನು ಸ್ವಲ್ಪ ಸಮಯದವರೆಗೆ ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು.

ಡೆಹ್ರಾಡೂನ್: ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಮತ್ತು ಋಷಿಕೇಶದಲ್ಲಿರುವ ಏಮ್ಸ್ ಗೆ ಏರ್ ಲಿಫ್ಟ್ ಮಾಡಲಾಗಿದೆ. ಅಲ್ಲಿ ಅವರನ್ನು ಸ್ವಲ್ಪ ಸಮಯದವರೆಗೆ ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು.

ಕಾರ್ಮಿಕರು ರೆಡಿಯೋಲಾಜಿ ಮತ್ತು ಹೃದ್ರೋಗ ಪರೀಕ್ಷೆಗಳಿಗೆ ಒಳಗಾಗಿದ್ದು, ವರದಿಗಳಿಗಾಗಿ ಕಾಯಲಾಗುತ್ತಿದೆ ಎಂದು ಏಮ್ಸ್‌ನ ವೈದ್ಯಕೀಯ ಅಧೀಕ್ಷಕ ರಿಷಿಕೇಶ್ ಆರ್ ಬಿ ಕಾಲಿಯಾ ತಿಳಿಸಿದ್ದಾರೆ.

ಈ ವರದಿಗಳ ಆಧಾರದ ಮೇಲೆ ಅವರನ್ನು ಪರೀಕ್ಷಿಸಿದ ವೈದ್ಯಕೀಯ ತಂಡ ಗುರುವಾರ ಅಭಿಪ್ರಾಯ ನೀಡಲಿದೆ. ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರು ಆರೋಗ್ಯವಾಗಿರುವುದಾಗಿ ಕಂಡುಬರುತ್ತಿದೆ. ಆದರೆ ಅವರ ಪರೀಕ್ಷಾ ವರದಿ ಬಂದಾಗ ಮಾತ್ರ ಏನಾದರೂ ನಿರ್ಣಾಯಕವಾಗಿ ಹೇಳಬಹುದು ಎಂದು ಅಧಿಕಾರಿ ಹೇಳಿದರು.

ಮಂಗಳವಾರ ಸಂಜೆ ಕಾರ್ಮಿಕರನ್ನು ಸ್ಥಳಾಂತರಿಸಿದ ತಕ್ಷಣ,  ಮೊದಲು ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ಚಿನೂಕ್ ಹೆಲಿಕಾಪ್ಟರ್‌ನಲ್ಲಿ ಬುಧವಾರ ಮಧ್ಯಾಹ್ನ ರಿಷಿಕೇಶಕ್ಕೆ ಹಾರಿಸಲಾಯಿತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

SCROLL FOR NEXT