ರಕ್ಷಿಸಲ್ಪಟ್ಟ ಕಾರ್ಮಿಕರು 
ದೇಶ

ಸಿಲ್ಕ್ಯಾರಾ ಸುರಂಗ ಕುಸಿತ: ರಕ್ಷಿಸಲ್ಪಟ್ಟ ಕಾರ್ಮಿಕರಿಗೆ ಋಷಿಕೇಶದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಮತ್ತು ಋಷಿಕೇಶದಲ್ಲಿರುವ ಏಮ್ಸ್ ಗೆ ಏರ್ ಲಿಫ್ಟ್ ಮಾಡಲಾಗಿದೆ. ಅಲ್ಲಿ ಅವರನ್ನು ಸ್ವಲ್ಪ ಸಮಯದವರೆಗೆ ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು.

ಡೆಹ್ರಾಡೂನ್: ಸಿಲ್ಕ್ಯಾರಾ ಸುರಂಗದಿಂದ ರಕ್ಷಿಸಲ್ಪಟ್ಟ ಮತ್ತು ಋಷಿಕೇಶದಲ್ಲಿರುವ ಏಮ್ಸ್ ಗೆ ಏರ್ ಲಿಫ್ಟ್ ಮಾಡಲಾಗಿದೆ. ಅಲ್ಲಿ ಅವರನ್ನು ಸ್ವಲ್ಪ ಸಮಯದವರೆಗೆ ವೈದ್ಯಕೀಯ ನಿಗಾದಲ್ಲಿ ಇರಿಸಲಾಗುವುದು.

ಕಾರ್ಮಿಕರು ರೆಡಿಯೋಲಾಜಿ ಮತ್ತು ಹೃದ್ರೋಗ ಪರೀಕ್ಷೆಗಳಿಗೆ ಒಳಗಾಗಿದ್ದು, ವರದಿಗಳಿಗಾಗಿ ಕಾಯಲಾಗುತ್ತಿದೆ ಎಂದು ಏಮ್ಸ್‌ನ ವೈದ್ಯಕೀಯ ಅಧೀಕ್ಷಕ ರಿಷಿಕೇಶ್ ಆರ್ ಬಿ ಕಾಲಿಯಾ ತಿಳಿಸಿದ್ದಾರೆ.

ಈ ವರದಿಗಳ ಆಧಾರದ ಮೇಲೆ ಅವರನ್ನು ಪರೀಕ್ಷಿಸಿದ ವೈದ್ಯಕೀಯ ತಂಡ ಗುರುವಾರ ಅಭಿಪ್ರಾಯ ನೀಡಲಿದೆ. ಅದರಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಾರ್ಮಿಕರು ಆರೋಗ್ಯವಾಗಿರುವುದಾಗಿ ಕಂಡುಬರುತ್ತಿದೆ. ಆದರೆ ಅವರ ಪರೀಕ್ಷಾ ವರದಿ ಬಂದಾಗ ಮಾತ್ರ ಏನಾದರೂ ನಿರ್ಣಾಯಕವಾಗಿ ಹೇಳಬಹುದು ಎಂದು ಅಧಿಕಾರಿ ಹೇಳಿದರು.

ಮಂಗಳವಾರ ಸಂಜೆ ಕಾರ್ಮಿಕರನ್ನು ಸ್ಥಳಾಂತರಿಸಿದ ತಕ್ಷಣ,  ಮೊದಲು ಚಿನ್ಯಾಲಿಸೌರ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಯಿತು, ಅಲ್ಲಿಂದ ಅವರನ್ನು ಚಿನೂಕ್ ಹೆಲಿಕಾಪ್ಟರ್‌ನಲ್ಲಿ ಬುಧವಾರ ಮಧ್ಯಾಹ್ನ ರಿಷಿಕೇಶಕ್ಕೆ ಹಾರಿಸಲಾಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT