ಲಾರೆನ್ಸ್ ಬಿಷ್ಣೋಯ್-ಗಿಪ್ಪಿ-ಸಲ್ಮಾನ್ ಖಾನ್ 
ದೇಶ

ಎಲ್ಲೇ ಅಡಗಿದರೂ ನಿನ್ನನ್ನು ಬಿಡಲ್ಲ: ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಜೀವ ಬೆದರಿಕೆ; 'ಟೈಗರ್'ಗೆ ಭದ್ರತೆ ಪರಿಶೀಲನೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೀವ ಬೆದರಿಕೆ ಹಾಕಿದ್ದು, ಹೀಗಾಗಿ ಮುಂಬೈ ಪೊಲೀಸರು ಸಲ್ಮಾನ್ ಖಾನ್‌ಗೆ ನೀಡಲಾದ ಭದ್ರತೆಯನ್ನು ಪರಿಶೀಲಿಸಿದ್ದಾರೆ. 

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಜೀವ ಬೆದರಿಕೆ ಹಾಕಿದ್ದು, ಹೀಗಾಗಿ ಮುಂಬೈ ಪೊಲೀಸರು ಸಲ್ಮಾನ್ ಖಾನ್‌ಗೆ ನೀಡಲಾದ ಭದ್ರತೆಯನ್ನು ಪರಿಶೀಲಿಸಿದ್ದಾರೆ. 

ಅಲ್ಲದೆ, 'ಟೈಗರ್ 3' ನಟನಿಗೆ ಸಹ ಎಚ್ಚರವಾಗಿರಲು ತಿಳಿಸಲಾಗಿದೆ. ಸಲ್ಮಾನ್ ಖಾನ್ ಜೊತೆಗಿನ ಆಪ್ತ ಸಂಬಂಧದ ಕಾರಣಕ್ಕಾಗಿ ಕೆಲವು ದಿನಗಳ ಹಿಂದೆ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕೆನಡಾದಲ್ಲಿ ಪಂಜಾಬಿ ಗಾಯಕ ಗಿಪ್ಪಿ ಗ್ರೆವಾಲ್ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆಸಿದ್ದರು. ಲಾರೆನ್ಸ್ ಬಿಷ್ಣೋಯ್ ಅವರ ಬೆದರಿಕೆಯ ನಂತರ ಮುಂಬೈ ಪೊಲೀಸರು ಈಗಾಗಲೇ ನಟನಿಗೆ ವೈ-ಪ್ಲಸ್ ಭದ್ರತೆಯನ್ನು ನೀಡಿದ್ದಾರೆ.

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಅವರು ಕೆನಡಾದಲ್ಲಿ ಗಿಪ್ಪಿ ಗ್ರೆವಾಲ್ ಅವರ ಮನೆಯ ಮೇಲೆ ದಾಳಿಯ ಹಿಂದಿನ ಕಾರಣ ಸಲ್ಮಾನ್ ಖಾನ್ ಅವರ ಸಾಮೀಪ್ಯ ಎಂದು ಹೇಳಿದರು. ಇದನ್ನು ಕೇಳಿದ ಭಾಯಿಜಾನ್ ಅಭಿಮಾನಿಗಳ ಚಿಂತೆ ಮತ್ತೆ ಹೆಚ್ಚಿದೆ. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ ಬಂದಿದ್ದು, ಮುಂಬೈ ಪೊಲೀಸರು ಸಲ್ಮಾನ್ ಭದ್ರತೆಯನ್ನು ಪರಿಶೀಲಿಸಿದ್ದಾರೆ.

ಮುಂಬೈ ಪೊಲೀಸರು ಯಾವ ಕ್ರಮ ಕೈಗೊಂಡಿದ್ದಾರೆ?
ಪರಿಶೀಲನೆಯನ್ನು ದೃಢೀಕರಿಸಿದ ಹಿರಿಯ ಅಧಿಕಾರಿಯೊಬ್ಬರು, 'ಬೆದರಿಕೆಯ ನಂತರ, ಯಾವುದೇ ಲೋಪದೋಷಗಳು ಉಳಿಯದಂತೆ ನೋಡಿಕೊಳ್ಳಲು ನಟನ ಭದ್ರತೆಯನ್ನು ಪರಿಶೀಲಿಸಲಾಗಿದೆ. ನಾವು ಅವರನ್ನೂ ಸಂಪರ್ಕಿಸಿ ಎಚ್ಚರಿಕೆ ವಹಿಸುವಂತೆ ಕೇಳಿಕೊಂಡಿದ್ದೇವೆ ಮತ್ತು ಅವರ ಸುರಕ್ಷತೆಗೆ ಸಂಬಂಧಿಸಿದಂತೆ ಕೆಲವು ವಿಷಯಗಳನ್ನು ಚರ್ಚಿಸಿದ್ದೇವೆ. ಈ ಹಿಂದೆ, ಲಾರೆನ್ಸ್ ಬಿಷ್ಣೋಯ್ ಹೆಸರಿನ ಫೇಸ್‌ಬುಕ್ ಖಾತೆಯು ಕೆನಡಾದಲ್ಲಿ ಜಿಪ್ಪಿ ಗ್ರೆವಾಲ್ ಅವರ ಮನೆಯ ಮೇಲಿನ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT