ಸಾಂದರ್ಭಿಕ ಚಿತ್ರ 
ದೇಶ

ತೆಲಂಗಾಣ ಚುನಾವಣಾ ಪ್ರಚಾರದಲ್ಲಿ 'ಡೀಪ್‌ಫೇಕ್' ತಂತ್ರಜ್ಞಾನ; ಕಾಂಗ್ರೆಸ್ ವಿರುದ್ಧ ಬಿಆರ್‌ಎಸ್ ದೂರು

ತೆಲಂಗಾಣದಲ್ಲಿ ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಮತ್ತು ಇತರ ಪ್ರಮುಖ ನಾಯಕರು ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪಕ್ಷದ  ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ 'ಡೀಪ್‌ಫೇಕ್' ತಂತ್ರಜ್ಞಾನವನ್ನು ಬಳಸಿ ನಕಲಿ ಸುದ್ದಿಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿ ಬಿಆರ್‌ಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಹೈದರಾಬಾದ್: ತೆಲಂಗಾಣದಲ್ಲಿ ಬಿಆರ್‌ಎಸ್ ಅಧ್ಯಕ್ಷ ಕೆ ಚಂದ್ರಶೇಖರ್ ರಾವ್ ಮತ್ತು ಇತರ ಪ್ರಮುಖ ನಾಯಕರು ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪಕ್ಷದ  ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ 'ಡೀಪ್‌ಫೇಕ್' ತಂತ್ರಜ್ಞಾನವನ್ನು ಬಳಸಿ ನಕಲಿ ಸುದ್ದಿಗಳನ್ನು ಸೃಷ್ಟಿಸಿದೆ ಎಂದು ಆರೋಪಿಸಿ ಬಿಆರ್‌ಎಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮುಖ್ಯ ಚುನಾವಣಾ ಆಯುಕ್ತರು, ತೆಲಂಗಾಣ ಮುಖ್ಯ ಚುನಾವಣಾಧಿಕಾರಿ ಮತ್ತು ರಾಜ್ಯ ಡಿಜಿಪಿ ಅವರಿಗೆ ಬುಧವಾರ ನೀಡಿದ ದೂರಿನಲ್ಲಿ, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ (ಟಿಪಿಸಿಸಿ) 'ಡೀಪ್‌ಫೇಕ್' ತಂತ್ರಜ್ಞಾನ ಮತ್ತು ಕೃತಕ ಬುದ್ಧಿಮತ್ತೆಯ ಮೂಲಕ ನಕಲಿ ಆಡಿಯೋ ಮತ್ತು ವಿಡಿಯೋಗಳನ್ನು ಸೃಷ್ಟಿಸಿ, ಪ್ರಸರಣದಲ್ಲಿ ತೊಡಗಿಸಿಕೊಂಡಿದೆ ಎಂದು ವಿಶ್ವಾಸಾರ್ಹ ಮೂಲಗಳು ಮಾಹಿತಿ ನೀಡಿವೆ ಎಂದು ಬಿಆರ್‌ಎಸ್ ಹೇಳಿದೆ. 

ಕೆಸಿಆರ್, ಕೆಟಿ ರಾಮರಾವ್, ಸಚಿವ ಹರೀಶ್ ರಾವ್, ಎಂಎಲ್‌ಸಿ ಕೆ ಕವಿತಾ ಸೇರಿದಂತೆ ಬಿಆರ್‌ಎಸ್‌ನ ಪ್ರಮುಖ ನಾಯಕರು ಮತ್ತು ಪಕ್ಷದ ಇತರ ಅಭ್ಯರ್ಥಿಗಳನ್ನು ಕಾಂಗ್ರೆಸ್ ಗುರಿಯಾಗಿಸಿಕೊಂಡಿದೆ. ಅವರ ವಿರುದ್ಧ ಇಲ್ಲಸಲ್ಲದ ವಿಚಾರಗಳನ್ನು ಹೇಳಲಾಗಿದೆ ಎಂದು ಅದು ಹೇಳಿದೆ.

ಟಿಪಿಸಿಸಿಯಿಂದ ತಂತ್ರಜ್ಞಾನದ ಕಾನೂನುಬಾಹಿರ ಬಳಕೆಯ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಬಿಆರ್‌ಎಸ್ ಕೋರಿದೆ.

'ಈ ವಿಷಯವು ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರವಾಗುವ ಸಾಧ್ಯತೆಯಿದೆ ಎಂದು ನಾವು ನಿರೀಕ್ಷಿಸುತ್ತೇವೆ. ಚಿತ್ರ, ವಿಡಿಯೋಗಳು ಮತ್ತು ಮೀಮ್‌ಗಳು ಸೇರಿದಂತೆ ಇಂತಹ ತಪ್ಪುದಾರಿಗೆಳೆಯುವ ವಿಚಾರಗಳನ್ನು ಸೃಷ್ಟಿಸಿ, ಪ್ರಚಾರ ಮಾಡುತ್ತಿರುವುದರಿಂದ ಟಿಪಿಸಿಸಿ ಮತ್ತು ಅದರ ವಿವಿಧ ಕಾನೂನು, ಕಾನೂನಾತ್ಮಕವಲ್ಲದ ಮತ್ತು ಅದೃಶ್ಯ ನಿರ್ವಾಹಕರನ್ನು ಗುರುತಿಸಲು ಮತ್ತು ನಿರ್ಬಂಧಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ನಿಮ್ಮನ್ನು ಒತ್ತಾಯಿಸುತ್ತೇವೆ' ಎಂದು ಬಿಆರ್‌ಎಸ್ ದೂರಿನಲ್ಲಿ ತಿಳಿಸಲಾಗಿದೆ. 

ಈ ಕುರಿತು ಟ್ವೀಟ್ ಮಾಡಿರುವ ಕೆ ಕವಿತಾ, 'ಆತ್ಮೀಯ ಮತದಾರರೇ, ಜಾಗರೂಕರಾಗಿರಿ! ಹತಾಶ ಪಕ್ಷಗಳು ತೆಲಂಗಾಣದಲ್ಲಿ ನಕಲಿ ಸುದ್ದಿಗಳನ್ನು ಹರಡುತ್ತಿವೆ! ನಕಲಿ ಸುದ್ದಿಗಳು ನಿಮ್ಮ ನಿರ್ಧಾರಗಳನ್ನು ಬದಲಿಸಲು ಬಿಡಬೇಡಿ. ಅಂತಹ ವಿಚಾರಗಳನ್ನು ನಂಬುವ ಅಥವಾ ಹಂಚಿಕೊಳ್ಳುವ ಮೊದಲು ಆ ಮಾಹಿತಿಯನ್ನು ಪರಿಶೀಲಿಸಿ. ನಮ್ಮ ಪ್ರಜಾಪ್ರಭುತ್ವವು ತಿಳುವಳಿಕೆಯುಳ್ಳ ಆಯ್ಕೆಗಳ ಮೇಲೆ ಅಭಿವೃದ್ಧಿ ಹೊಂದುತ್ತದೆ, ತಪ್ಪು ಮಾಹಿತಿಯಿಂದಲ್ಲ' ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT