ಮತದಾನಕ್ಕೆ ನಿಂತಿರುವ ಜನರ ಸಾಲು 
ದೇಶ

ತೆಲಂಗಾಣ ಚುನಾವಣೆ: ಮಧ್ಯಾಹ್ನ 1 ಗಂಟೆ ವೇಳೆಗೆ ಶೇ.36.68ರಷ್ಟು ಮತದಾನ, ಬಹುತೇಕ ಶಾಂತಿಯುತ

ತೆಲಂಗಾಣ ರಾಜ್ಯದ 119 ವಿಧಾನಸಭಾ ಕ್ಷೇತ್ರಗಳಿಗೆ ಬಿರುಸಿನ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ಶೇಕಡಾ 36.68ರಷ್ಟು ಮತ ಚಲಾವಣೆಯಾಗಿದೆ.

ಹೈದರಾಬಾದ್: ತೆಲಂಗಾಣ ರಾಜ್ಯದ 119 ವಿಧಾನಸಭಾ ಕ್ಷೇತ್ರಗಳಿಗೆ ಬಿರುಸಿನ ಮತದಾನ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಯ ವೇಳೆಗೆ ಶೇಕಡಾ 36.68ರಷ್ಟು ಮತ ಚಲಾವಣೆಯಾಗಿದೆ.

ಕೆಲವು ಮತಗಟ್ಟೆಗಳಲ್ಲಿ ಹೊಡೆದಾಟ, ವಿದ್ಯುನ್ಮಾನ ಮತ ಯಂತ್ರಗಳ ಅಕ್ರಮ ಬಳಕೆಯ ದೂರುಗಳು ಕೇಳಿಬಂದಿರುವುದು ಬಿಟ್ಟರೆ ಬಹುತೇಕ ಶಾಂತಿಯುತವಾಗಿದೆ. 

ತೆಲಂಗಾಣದ 32.6 ಮಿಲಿಯನ್ ಮತದಾರರು 119 ವಿಧಾನಸಭಾ ಸ್ಥಾನಗಳಿಗೆ ಸ್ಪರ್ಧಿಸುವ 2,290 ಅಭ್ಯರ್ಥಿಗಳ ಭವಿಷ್ಯವನ್ನು ಇಂದು ನಿರ್ಧರಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ನ ರಾಹುಲ್ ಗಾಂಧಿ ಮತ್ತು ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯ (BRS) ಕೆ ಚಂದ್ರಶೇಖರ ರಾವ್ ಅವರಂತಹ ಪ್ರಮುಖ ರಾಷ್ಟ್ರೀಯ ನಾಯಕರು ತೀವ್ರ ಪ್ರಚಾರ ಕೈಗೊಂಡಿದ್ದರು. 

ಆಡಳಿತಾರೂಢ ಬಿಆರ್‌ಎಸ್ ಎಲ್ಲಾ 119 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಹೊಂದಿದೆ, ಬಿಜೆಪಿ ಮತ್ತು ನಟ ಪವನ್ ಕಲ್ಯಾಣ್ ನೇತೃತ್ವದ ಜನಸೇನೆ ಕ್ರಮವಾಗಿ 111 ಮತ್ತು 8 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ. ಕಾಂಗ್ರೆಸ್ ತನ್ನ ಮಿತ್ರ ಪಕ್ಷವಾದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (CPI) ಗೆ ಒಂದು ಸ್ಥಾನವನ್ನು ಹಂಚಿಕೆ ಮಾಡಿದೆ, ಇತರ 118 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ನವೆಂಬರ್ 7 ರಿಂದ ನವೆಂಬರ್ 25 ರ ನಡುವೆ ಮತದಾನ ನಡೆದ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ಮಿಜೋರಾಂ ಫಲಿತಾಂಶಗಳೊಂದಿಗೆ ತೆಲಂಗಾಣದ ಫಲಿತಾಂಶಗಳನ್ನು ಡಿಸೆಂಬರ್ 3 ರಂದು ಪ್ರಕಟವಾಗಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT