ವಾಯುಸೇನೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ 
ದೇಶ

ಮಧ್ಯಪ್ರದೇಶ: ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ: ಸಿಬ್ಬಂದಿ ಸುರಕ್ಷಿತ

ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ವೊಂದು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ 6 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಭೋಪಾಲ್: ತಾಂತ್ರಿಕದೋಷದಿಂದ ವಾಯುಸೇನೆ ಹೆಲಿಕಾಪ್ಟರ್ ವೊಂದು ಮಧ್ಯ ಪ್ರದೇಶದ ಹಳ್ಳಿಯೊಂದರಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಹೆಲಿಕಾಪ್ಟರ್ ನಲ್ಲಿದ್ದ ಎಲ್ಲಾ 6 ಮಂದಿ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

ಆರು ಜನರಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಭಾನುವಾರ ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನ ಹಳ್ಳಿಯೊಂದರಲ್ಲಿ 'ತುರ್ತು' ಲ್ಯಾಂಡಿಂಗ್ ಮಾಡಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಎಎಫ್‌ನ III ಎಚ್‌ಯು ಘಟಕದ ಹೆಲಿಕಾಪ್ಟರ್ ಭೋಪಾಲ್ ಜಿಲ್ಲಾ ಕೇಂದ್ರದಿಂದ ಸುಮಾರು 60 ಕಿಮೀ ದೂರದಲ್ಲಿರುವ ಡುಂಗರಿಯಾ ಗ್ರಾಮದ ಸರೋವರದ ಬಳಿಯ ಕಬ್ಬಿನ ಗದ್ದೆಯಲ್ಲಿ "ತುರ್ತು" ಲ್ಯಾಂಡಿಂಗ್ ಮಾಡಿದೆ. ಇಂದು ಬೆಳಗ್ಗೆ 8.45ರ ಸುಮಾರಿಗೆ ಈ ಘಟನೆ ನಡೆದಿದ್ದು, ಹೆಲಿಕಾಪ್ಟರ್ ಭೋಪಾಲ್‌ನಿಂದ ಝಾನ್ಸಿಗೆ ತೆರಳುತ್ತಿತ್ತು. ಈ ವೇಳೆ ಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದೆ. ಪೈಲಟ್ ಮತ್ತು ಐವರು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಸ್ಥಳದಲ್ಲಿದ್ದ ಬೆರಾಸಿಯಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ನರೇಂದ್ರ ಕುಲಸ್ತೆ ದೂರವಾಣಿ ಮೂಲಕ ಪಿಟಿಐಗೆ ತಿಳಿಸಿದ್ದಾರೆ.

ತಾಂತ್ರಿಕ ದೋಷವನ್ನು ಸರಿಪಡಿಸಲು ಐಎಎಫ್‌ನ ತಂಡವು ಸ್ಥಳಕ್ಕೆ ತಲುಪಿದೆ. ಮತ್ತೊಂದು ತಂತ್ರಜ್ಞರ ತಂಡ ನಾಗ್ಪುರದಿಂದ ಡುಂಗರಿಯಾ ಗ್ರಾಮವನ್ನು ಶೀಘ್ರದಲ್ಲೇ ತಲುಪುವ ನಿರೀಕ್ಷೆಯಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT