ಸಂಗ್ರಹ ಚಿತ್ರ 
ದೇಶ

ದೆಹಲಿಗೆ ತೆರಳುತ್ತಿದ್ದ ವಿಮಾನದಲ್ಲಿ ಮಗುವಿಗೆ ಉಸಿರಾಟದ ತೊಂದರೆ; ಇಬ್ಬರು ವೈದ್ಯರಿಂದ ರಕ್ಷಣೆ!

ರಾಂಚಿ-ದೆಹಲಿ ವಿಮಾನದಲ್ಲಿ ತೆರಳುತ್ತಿದ್ದಾಗ ಜನ್ಮಜಾತ ಹೃದ್ರೋಗದಿಂದ ಬಳಲುತ್ತಿದ್ದ ಮಗುವಿಗೆ ತೀವ್ರ ಉಸಿರಾಟದ ತೊಂದರೆ ಎದುರಾಗಿದೆ ಈ ವೇಳೆ ವೈದ್ಯರೂ ಆಗಿದ್ದ ಇಬ್ಬರು ಸಹ-ಪ್ರಯಾಣಿಕರು ಮಗುವಿನ ಸಹಾಯಕ್ಕೆ ಬಂದಿದ್ದು ಮಗುವನ್ನು ರಕ್ಷಿಸಿದ್ದಾರೆ.

ನವದೆಹಲಿ: ರಾಂಚಿ-ದೆಹಲಿ ವಿಮಾನದಲ್ಲಿ ತೆರಳುತ್ತಿದ್ದಾಗ ಜನ್ಮಜಾತ ಹೃದ್ರೋಗದಿಂದ ಬಳಲುತ್ತಿದ್ದ ಮಗುವಿಗೆ ತೀವ್ರ ಉಸಿರಾಟದ ತೊಂದರೆ ಎದುರಾಗಿದೆ ಈ ವೇಳೆ ವೈದ್ಯರೂ ಆಗಿದ್ದ ಇಬ್ಬರು ಸಹ-ಪ್ರಯಾಣಿಕರು ಮಗುವಿನ ಸಹಾಯಕ್ಕೆ ಬಂದಿದ್ದು ಮಗುವನ್ನು ರಕ್ಷಿಸಿದ್ದಾರೆ.

IAS ಅಧಿಕಾರಿ ಡಾ ನಿತಿನ್ ಕುಲಕರ್ಣಿ ಮತ್ತು ರಾಂಚಿ ಸದರ್ ಆಸ್ಪತ್ರೆಯ ವೈದ್ಯ ಡಾ. ಮೊಝಮ್ಮಿಲ್ ಫಿರೋಜ್ ತುರ್ತು ವೈದ್ಯಕೀಯ ಸಹಾಯವಾಗಿ ವಯಸ್ಕರಿಗೆ ಮೀಸಲಾದ ಮಾಸ್ಕ್ ಮತ್ತು ಇತರ ಔಷಧಿಗಳನ್ನು ಬಳಸಿ ಆಮ್ಲಜನಕವನ್ನು ಪೂರೈಸಿದರು. ಒಂದು ಗಂಟೆಯ ನಂತರ ವಿಮಾನ ಲ್ಯಾಂಡ್ ಆದ ನಂತರ, ವೈದ್ಯಕೀಯ ತಂಡವು ಮಗುವನ್ನು ತಮ್ಮ ಆರೈಕೆಗೆ ತೆಗೆದುಕೊಂಡು ಆಮ್ಲಜನಕವನ್ನು ಒದಗಿಸಿತು. ಮಗುವಿನ ಹೃದಯ ಕಾಯಿಲೆಯ ಚಿಕಿತ್ಸೆಗಾಗಿ ಪೋಷಕರು ಮಗುವನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯುತ್ತಿದ್ದರು.

ಇದನ್ನೂ ಓದಿ: ಮಧ್ಯಪ್ರದೇಶ: ಶಾಲಾ ಬಸ್ ಪಲ್ಟಿಯಾಗಿ 12 ವಿದ್ಯಾರ್ಥಿಗಳಿಗೆ ಗಾಯ, 4 ಮಂದಿ ಚಿಂತಾಜನಕ
 
ದೆಹಲಿಗೆ ಹಾರಿದ ಇಪ್ಪತ್ತು ನಿಮಿಷಗಳ ನಂತರ ಇಂಡಿಗೋ ವಿಮಾನದ ಸಿಬ್ಬಂದಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದರು. ತೊಂದರೆಯಲ್ಲಿರುವ ಮಗುವಿಗೆ ವಿಮಾನದಲ್ಲಿದ್ದ ವೈದ್ಯರಿಂದ ವೈದ್ಯಕೀಯ ಸಹಾಯವನ್ನು ಪಡೆದರು. ಪ್ರಸ್ತುತ ಜಾರ್ಖಂಡ್ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ ಕುಲಕರ್ಣಿ ಮತ್ತು ರಾಂಚಿಯ ಸದರ್ ಆಸ್ಪತ್ರೆಯ ಡಾ. ಮೊಝಮ್ಮಿಲ್ ಫಿರೋಜ್ ಮಗುವನ್ನು ಉಳಿಸಲು ಮುಂದೆ ಬಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT