ಶಂಕಿತ ಉಗ್ರರನ್ನು ಬಂಧಿಸಿದ ಪೊಲೀಸರು 
ದೇಶ

ಬಂಧಿತ ಮೂವರು ಮೂಲಭೂತವಾದಿಗಳು ಉನ್ನತ ಶಿಕ್ಷಣ ಪಡೆದಿದ್ದರು: ISIS ಉಗ್ರರ ಬಗ್ಗೆ ಪೊಲೀಸರ ಸ್ಫೋಟಕ ಮಾಹಿತಿ!

ಉಗ್ರ ಪಟ್ಟಿಯಲ್ಲಿರುವ ಮೂವರು ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಮೂವರೂ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ. ಅಷ್ಟೇ ಅಲ್ಲದೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಸ್ಫೋಟ ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದಾರೆ. 

ನವದೆಹಲಿ: ಉಗ್ರ ಪಟ್ಟಿಯಲ್ಲಿರುವ ಮೂವರು ಮೋಸ್ಟ್ ವಾಂಟೆಡ್ ಭಯೋತ್ಪಾದಕರನ್ನು ದೆಹಲಿ ಪೊಲೀಸರು ಇಂದು ಬಂಧಿಸಿದ್ದಾರೆ. ಈ ಮೂವರೂ ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ಸಂಪರ್ಕ ಹೊಂದಿದ್ದಾರೆ. ಅಷ್ಟೇ ಅಲ್ಲದೆ ದೇಶದ ವಿವಿಧ ಭಾಗಗಳಲ್ಲಿ ನಡೆದ ಸ್ಫೋಟ ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದಾರೆ. 

ಕಳೆದ ತಿಂಗಳು ಎನ್‌ಐಎ ಈ ಮೂವರು ಉಗ್ರರ ತಲೆಗೆ ತಲಾ 3 ಲಕ್ಷ ರೂಪಾಯಿ ಬಹುಮಾನ ಘೋಷಿಸಿತ್ತು. ಈ ಮೂವರ ಬಂಧನದೊಂದಿಗೆ ಐಸಿಸ್‌ನ ಪ್ಯಾನ್ ಇಂಡಿಯಾ ಘಟಕವನ್ನು ಭೇದಿಸಲಾಗಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ. ವಿಶೇಷವೆಂದರೆ ಈ ಮೂವರು ಭಯೋತ್ಪಾದಕರು ಉನ್ನತ ಶಿಕ್ಷಣ ಪಡೆದಿದ್ದ ಮೂಲಭೂತವಾದಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಶಂಕಿತ ಐಸಿಸ್ ಭಯೋತ್ಪಾದಕ ಶಹನವಾಜ್ ಅಲ್ಮಾ ಅಲಿಯಾಸ್ ಶಫಿ ಉಜ್ಜಾಮನನ್ನು ರಾಜಧಾನಿ ದೆಹಲಿಯ ಜೈತ್‌ಪುರ ಪ್ರದೇಶದಲ್ಲಿ ಇಂದು ಬೆಳಗ್ಗೆ ಬಂಧಿಸಲಾಗಿದೆ. ಶಹನವಾಜ್ ವೃತ್ತಿಯಲ್ಲಿ ಇಂಜಿನಿಯರ್. ಈತ ಪುಣೆಯಲ್ಲಿ ಐಸಿಸ್ ಗೆ ಸಂಬಂಧಿಸಿದ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ. ಪುಣೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ದೆಹಲಿಯಲ್ಲಿ ತಲೆಮರೆಸಿಕೊಂಡಿದ್ದ. ಶಹನವಾಜ್ ಜಾರ್ಖಂಡ್‌ನ ಹಜಾರಿಬಾಗ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಮೈನಿಂಗ್ ಇಂಜಿನಿಯರಿಂಗ್ ಮಾಡಿದ್ದಾರೆ. ಅವನಿಗೆ ಸ್ಫೋಟಿಸುವ ಜ್ಞಾನವಿದೆ. ಆತನ ಪತ್ನಿ ಹಿಂದೂವಾಗಿದ್ದು ಮದುವೆಗೆ ಮುಂಚೆಯೇ ಇಸ್ಲಾಂಗೆ ಮತಾಂತರಗೊಂಡಿದ್ದಳು. ಆಕೆ ಇನ್ನೂ ತಲೆಮರೆಸಿಕೊಂಡಿದ್ದಾಳೆ.

ದೆಹಲಿ ಪೊಲೀಸರ ವಿಶೇಷ ಸೆಲ್ ಯುಪಿಯ ಮೊರಾದಾಬಾದ್‌ನಲ್ಲಿ ಮೊಹಮ್ಮದ್ ಅರ್ಷದ್ ವಾರ್ಸಿಯನ್ನು ಬಂಧಿಸಿದೆ. ಮೊಹಮ್ಮದ್ ಅರ್ಷದ್ ವಾರ್ಸಿ ಕೂಡ ಜಾರ್ಖಂಡ್ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಅಲಿಘರ್ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಎಂಜಿನಿಯರಿಂಗ್ ಮಾಡಿದ್ದಾರೆ. ಅರ್ಷದ್ ಪ್ರಸ್ತುತ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪಡೆಯುತ್ತಿದ್ದಾನೆ. ಅರ್ಷದ್ ಐಸಿಸ್ ಹ್ಯಾಂಡ್ಲರ್‌ಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರೊಂದಿಗೆ ನಿಯಮಿತವಾಗಿ ವರದಿಗಳನ್ನು ಹಂಚಿಕೊಳ್ಳುತ್ತಿದ್ದನು.

ಮೊಹಮ್ಮದ್ ರಿಜ್ವಾನ್ ಅಶ್ರಫ್ ಕಂಪ್ಯೂಟರ್ ಸೈನ್ಸ್ ನಲ್ಲಿ ಬಿ.ಟೆಕ್ ಮಾಡಿದ್ದಾನೆ. ರಿಜ್ವಾನ್ ಮೂಲತಃ ಉತ್ತರ ಪ್ರದೇಶದ ಅಜಂಗಢದವನು. ದೆಹಲಿ ಪೊಲೀಸರ ವಿಶೇಷ ಸೆಲ್ ಆತನನ್ನು ಲಕ್ನೋದಲ್ಲಿ ಬಂಧಿಸಿದೆ. ರಿಜ್ವಾನ್ ಮೌಲ್ವಿಯಾಗಿಯೂ ತರಬೇತಿ ಪಡೆದಿದ್ದಾನೆ. ಈ ಮೂವರ ಬಂಧನದೊಂದಿಗೆ ಐಸಿಸ್‌ನ ಪ್ಯಾನ್ ಇಂಡಿಯಾ ಮಾಡ್ಯೂಲ್ ಭೇದಿಸಲಾಗಿದೆ ಎಂದು ದೆಹಲಿ ಪೊಲೀಸ್ ವಿಶೇಷ ಸೆಲ್ ಕಮಿಷನರ್ ಎಚ್‌ಜಿಎಸ್ ಧಲಿವಾಲ್ ಹೇಳಿದ್ದಾರೆ. ಗಣ್ಯರನ್ನು ಗುರಿಯಾಗಿಸುವುದು ಇವರ ಗುರಿಯಾಗಿದೆ ಎಂದು ಧಲಿವಾಲ್ ಹೇಳಿದರು. ಇವರು ಸಾಧ್ಯವಾದಷ್ಟು ಜನರಿಗೆ ಹಾನಿ ಮಾಡಲು ಬಯಸಿದ್ದರು. ಭಯೋತ್ಪಾದಕರ ಇಂತಹ ಚಟುವಟಿಕೆಗಳ ಹಿಂದಿರುವ ಹಣದ ಹಾದಿಯೂ ಬಯಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT