ವಂದೇ ಭಾರತ್ ರೈಲು 
ದೇಶ

ವಂದೇ ಭಾರತ್ ಎಕ್ಸ್‌ಪ್ರೆಸ್‌ ಹಳಿ ಮೇಲೆ ಕಲ್ಲುಗಳು-ಕಬ್ಬಿಣದ ರಾಡ್‌ಗಳನ್ನಿಟ್ಟ ಕಿಡಿಗೇಡಿಗಳು, ವಿಡಿಯೋ

ಉದಯಪುರ-ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರಿ ಅಪಘಾತದಿಂದ ಪಾರಾಗಿದೆ. ಲೊಕೊ ಪೈಲಟ್‌ನ ಸಮಯಪ್ರಜ್ಞೆಯಿಂದ ಈ ಅನಾಹುತ ತಪ್ಪಿದೆ. 

ಉದಯಪುರ-ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ಭಾರಿ ಅಪಘಾತದಿಂದ ಪಾರಾಗಿದೆ. ಲೊಕೊ ಪೈಲಟ್‌ನ ಸಮಯಪ್ರಜ್ಞೆಯಿಂದ ಈ ಅನಾಹುತ ತಪ್ಪಿದೆ. 

ಗಂಗ್ರಾರ್-ಸೋನಿಯಾನಾ ನಡುವಿನ ವಂದೇ ಭಾರತ್ ರೈಲಿನ ಮಾರ್ಗದಲ್ಲಿ ದುಷ್ಕರ್ಮಿಗಳು ರೈಲು ಹಳಿ ಮೇಲೆ ಕಲ್ಲುಗಳು ಮತ್ತು ಕಬ್ಬಿಣದ ರಾಡ್‌ಗಳನ್ನು ಹಾಕಿದ್ದಾರೆ. ಇದನ್ನು ರೈಲ್ವೆ ಹಳಿಗಳ ಮೇಲೆ ದೂರದವರೆಗೆ ಇಡಲಾಗಿದೆ. ಒಂದು ವೇಳೆ ರೈಲು ಹಾದು ಹೋಗಿದ್ದರೆ ಭಾರೀ ಅವಘಡ ಸಂಭವಿಸುವ ಸಾಧ್ಯತೆ ಇತ್ತು. ಬೆಳಗ್ಗೆ 9:55ರ ಸುಮಾರಿಗೆ ಈ ಘಟನೆ ನಡೆದಿದೆ. ರೈಲ್ವೆ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಉದಯಪುರ-ಜೈಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಲೊಕೊಮೊಟಿವ್ ಪೈಲಟ್‌ಗಳು ಸಮಯಕ್ಕೆ ಸರಿಯಾಗಿ ಟ್ರ್ಯಾಕ್‌ನಲ್ಲಿ ಕಲ್ಲುಗಳು ಮತ್ತು ಕಬ್ಬಿಣದ ರಾಡ್‌ಗಳನ್ನು ಗುರುತಿಸಿದರು. ನಂತರ ರೈಲು ಅದರ ಮೇಲೆ ಹೋಗದಂತೆ ತುರ್ತು ಬ್ರೇಕ್‌ಗಳನ್ನು ಹಾಕಿದರು. ಇದರಿಂದಾಗಿ ಅನಾಹುತ ತಪ್ಪಿದೆ.

ರೈಲಿನಿಂದ ಇಳಿದ ನಂತರ, ಲೊಕೊ ಪೈಲಟ್‌ಗಳು ರೈಲಿನ ಮೇಲಿನ ಕಲ್ಲುಗಳು ಮತ್ತು ಕಬ್ಬಿಣದ ರಾಡ್ ಗಳನ್ನು ತೆರವುಗೊಳಿಸಿದರು. ಅಲ್ಲದೆ ಘಟನೆಯ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT