ಸುಪ್ರೀಂಕೋರ್ಟ್ 
ದೇಶ

ರಾಷ್ಟ್ರೀಯ ಸ್ಮಾರಕವಾಗಿ 'ರಾಮಸೇತು' ಘೋಷಿಸಲು ನಿರ್ದೇಶನ ಕೋರಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್!

'ರಾಮಸೇತು'ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮತ್ತು ಸ್ಥಳದಲ್ಲಿ ಗೋಡೆಯನ್ನು ನಿರ್ಮಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದ್ದು, ಇದು ಸರ್ಕಾರದ ಆಡಳಿತಾತ್ಮಕ ವಿಷಯಗಳು ಎಂದು ಹೇಳಿದೆ.

ನವದೆಹಲಿ: 'ರಾಮಸೇತು'ವನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಮತ್ತು ಸ್ಥಳದಲ್ಲಿ ಗೋಡೆಯನ್ನು ನಿರ್ಮಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಮನವಿಯನ್ನು ಪರಿಗಣಿಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದ್ದು, ಇದು ಸರ್ಕಾರದ ಆಡಳಿತಾತ್ಮಕ ವಿಷಯಗಳು ಎಂದು ಹೇಳಿದೆ.

ಆಡಮ್‌ನ ಸೇತುವೆ ಎಂದೂ ಕರೆಯಲ್ಪಡುವ 'ರಾಮ ಸೇತು' ತಮಿಳುನಾಡಿನ ಆಗ್ನೇಯ ಕರಾವಳಿಯ ಪಂಬನ್ ದ್ವೀಪ ಮತ್ತು ಶ್ರೀಲಂಕಾದ ವಾಯುವ್ಯ ಕರಾವಳಿಯ ಮನ್ನಾರ್ ದ್ವೀಪದ ನಡುವಿನ ಸುಣ್ಣದ ಕಲ್ಲುಗಳ ಸರಪಳಿಯಾಗಿದೆ. ಈ ಅರ್ಜಿಯು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಸುಧಾಂಶು ಧುಲಿಯಾ ಅವರ ಪೀಠದ ಮುಂದೆ ವಿಚಾರಣೆಗೆ ಬಂದಿತು.

‘ದಿ ಹಿಂದೂ ಪರ್ಸನಲ್ ಲಾ ಬೋರ್ಡ್’ ಸಂಸ್ಥೆ ತನ್ನ ಅಧ್ಯಕ್ಷ ಅಶೋಕ್ ಪಾಂಡೆ ಮೂಲಕ ಅರ್ಜಿ ಸಲ್ಲಿಸಿದೆ. ವಕೀಲರೂ ಆಗಿರುವ ಪಾಂಡೆ, ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿ ಇದೆ ಎಂದು ಪೀಠಕ್ಕೆ ತಿಳಿಸಿದರು.

ರಾಮಸೇತುವನ್ನು ರಾಷ್ಟ್ರೀಯ ಪಾರಂಪರಿಕ ಸ್ಮಾರಕವನ್ನಾಗಿ ಘೋಷಿಸಲು ಕೇಂದ್ರಕ್ಕೆ ನಿರ್ದೇಶನ ನೀಡಬೇಕು ಎಂದು ಸ್ವಾಮಿ ತಮ್ಮ ಮನವಿಯಲ್ಲಿ ಕೋರಿದ್ದಾರೆ. ಮಂಡಳಿ ಸಲ್ಲಿಸಿರುವ ಮನವಿಯನ್ನು ಸ್ವಾಮಿ ಅವರ ಬಾಕಿ ಇರುವ ಅರ್ಜಿಯೊಂದಿಗೆ ಟ್ಯಾಗ್ ಮಾಡಬೇಕು ಎಂದು ಪಾಂಡೆ ಪೀಠವನ್ನು ಒತ್ತಾಯಿಸಿದರು. "ಅದು ಬಾಕಿ ಇದ್ದರೆ, ಇರುತ್ತದೆ ನಿಮಗೆ ಏನಾಗಬೇಕು ಎಂದು ನ್ಯಾಯಪೀಠ ಕೇಳಿತು.

ಸೈಟ್ನಲ್ಲಿ ಗೋಡೆಯ ನಿರ್ಮಾಣಕ್ಕಾಗಿ ಅವರು ತಮ್ಮ ಮನವಿ ಉಲ್ಲೇಖಿಸಿದಾಗ, ಪೀಠವು "ಎರಡು ಬದಿಗಳಲ್ಲಿ ಗೋಡೆಯನ್ನು ಹೇಗೆ ನಿರ್ಮಿಸಬಹುದು?" "ಇದು ನ್ಯಾಯಾಲಯ ಮಾಡಬೇಕೇ? ಇವು ಸರ್ಕಾರದ ಆಡಳಿತಾತ್ಮಕ ವಿಷಯಗಳು. ನಾವೇಕೆ  ಇದರಲ್ಲಿ ಭಾಗಿಯಾಗಬೇಕು" ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಬಾಕಿ ಉಳಿದಿರುವ ಅರ್ಜಿಯೊಂದಿಗೆ ಅವರ ಮನವಿಯನ್ನು ಟ್ಯಾಗ್ ಮಾಡಬೇಕೆಂಬ ಅರ್ಜಿದಾರರ ಮನವಿಯನ್ನು ಸಮ್ಮತಿಸಲು ಪೀಠ ನಿರಾಕರಿಸಿತು. ಅರ್ಜಿದಾರರು ಬಯಸಿದಂತೆ ನಿರ್ದೇಶನದ ಯಾವುದೇ ಸ್ವರೂಪವನ್ನು ನೀಡಲು ಭಾರತದ ಸಂವಿಧಾನದ 32 ನೇ ವಿಧಿಯ ಅಡಿಯಲ್ಲಿ ನ್ಯಾಯವ್ಯಾಪ್ತಿಯನ್ನು ಚಲಾಯಿಸಲು ನಾವು ಒಲವು ಹೊಂದಿಲ್ಲ" ಎಂದು ಪೀಠವು ಮನವಿಯನ್ನು ಪರಿಗಣಿಸಲು ನಿರಾಕರಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸುಪ್ರೀಂ ಕೋರ್ಟ್‌ನಲ್ಲೂ ಕರ್ನಾಟಕಕ್ಕೆ ಹಿನ್ನಡೆ: ಕಾವೇರಿ ವಿಚಾರಣೆ ಒಂದು ವಾರ ಮುಂದೂಡಿಕೆ, CWMA ಆದೇಶ ಪಾಲಿಸಲು ಸೂಚನೆ..!

ನಾನು ರಾತ್ರೋರಾತ್ರಿ ಸ್ಟಾರ್ ಆದವನಲ್ಲ, ಕಷ್ಟಪಟ್ಟು ಸ್ಟಾರ್ ಆಗಿದ್ದೇನೆ: ಕಷ್ಟದ ದಿನಗಳನ್ನು ನೆನೆದ ರಾಕಿಂಗ್ ಸ್ಟಾರ್ ಯಶ್‌

ನಟ ದರ್ಶನ್‌ಗೆ ಮತ್ತೊಂದು ಶಾಕ್; ಖುದ್ದು ಹಾಜರಿ ಕೋರಿದ್ದ ಅರ್ಜಿ ವಜಾ; ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಿಗೆ ಸೂಚನೆ

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿಯನ್ನು ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ತನ್ನ ಕ್ರಿಕೆಟ್ ವೃತ್ತಿ ಜೀವನದಲ್ಲೇ The Best Catch ಹಿಡಿದ ಶುಭಮನ್ ಗಿಲ್: ಅವಕ್ಕಾಗಿ ನಿಂತ ಲಂಕಾ ಬ್ಯಾಟರ್, Video