ಸಾವು (ಸಾಂಕೇತಿಕ ಚಿತ್ರ) 
ದೇಶ

ನಾಗ್ಪುರದ 2 ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದೇ ದಿನ 23 ಸಾವು! 

ಮಹಾರಾಷ್ಟ್ರದ 2 ಸರ್ಕಾರಿ ಆಸ್ಪತ್ರೆಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ಒಟ್ಟು 23 ಮಂದಿ ಸಾವನ್ನಪ್ಪಿದ್ದಾರೆ. 

ಮುಂಬೈ: ಮಹಾರಾಷ್ಟ್ರದ 2 ಸರ್ಕಾರಿ ಆಸ್ಪತ್ರೆಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ಒಟ್ಟು 23 ಮಂದಿ ಸಾವನ್ನಪ್ಪಿದ್ದಾರೆ. 

ಒಂದು ಆಸ್ಪತ್ರೆಯಲ್ಲಿ 14 ಮಂದಿ ಸಾವನ್ನಪ್ಪಿದ್ದರೆ, ಮತ್ತೊಂದರಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಎರಡೂ ಆಸ್ಪತ್ರೆಗಳ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಸೆಪ್ಟೆಂಬರ್ 30 ಮತ್ತು ಅಕ್ಟೋಬರ್ 2 ರ ನಡುವೆ ನಾಂದೇಡ್‌ನ ಡಾ.ಶಂಕರರಾವ್ ಚವಾಣ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 48 ಗಂಟೆಗಳಲ್ಲಿ 31 ರೋಗಿಗಳು ಮತ್ತು ಛತ್ರಪತಿ ಸಂಭಾಜಿನಗರದ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 18 ಸಾವುಗಳು ವರದಿಯಾದ ಬೆನ್ನಲ್ಲೇ ಈ ಹೊಸ ಪ್ರಕರಣಗಳು ವರದಿಯಾಗಿವೆ. 

ಬುಧವಾರ ಬೆಳಿಗ್ಗೆ 8 ಗಂಟೆ ವೇಳೆಗೆ ನಾಗ್ಪುರದ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ ಬುಧವಾರ ಬೆಳಿಗ್ಗೆ ವರೆಗೂ 14 ಮಂದಿ ಸಾವನ್ನಪ್ಪಿದ್ದಾರೆ. 

ಜಿಎಂಸಿಹೆಚ್ ಡೀನ್ ಡಾ. ರಾಜ್ ಗಜಭಿಯೇ ಈ ಬಗ್ಗೆ ಮಾತನಾಡಿದ್ದು 1,900 ಬೆಡ್ ಗಳ ವ್ಯವಸ್ಥೆ ಇಲ್ಲಿ ಇದ್ದು, ಸರಾಸರಿ ದಿನವೊಂದಕ್ಕೆ 10-12 ಮಂದಿಯ ಸಾವು ವರದಿಯಾಗುತ್ತದೆ ಎಂದು ಹೇಳಿದ್ದಾರೆ.

"ಆಸ್ಪತ್ರೆಯಲ್ಲಿ ಸಾಯುವ ರೋಗಿಗಳು ಹೆಚ್ಚಾಗಿ ಕೊನೆಯ ಕ್ಷಣದಲ್ಲಿ ಕರೆತರಲಾಗಿರುವವರು ಮತ್ತು ತೀವ್ರ ನಿಗಾ ಘಟಕ (ಐಸಿಯು)ದ ಅಗತ್ಯವಿರುವವರು. ಅಂತಹ ರೋಗಿಗಳನ್ನು ಗಂಭೀರ ಸ್ಥಿತಿಯಲ್ಲಿ GMCH ಗೆ ತರಲಾಗುತ್ತದೆ" ಎಂದು ಅವರು ಹೇಳಿದ್ದಾರೆ. 

ಇದೇ ಮಾದರಿಯಲ್ಲಿ ಇಂದಿರಾ ಗಾಂಧಿ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯಲ್ಲಿ (ಐಜಿಜಿಎಂಸಿಹೆಚ್) 24 ಗಂಟೆಗಳಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.  ಐಜಿಜಿಎಂಸಿ ಹೆಚ್ ನಲ್ಲಿ 800 ಬೆಡ್ ಗಳಿದ್ದು, ಆಸ್ಪತ್ರೆಯಲ್ಲಿ  ಔಷಧಗಳು ಮತ್ತು ಇತರ ಸೌಲಭ್ಯಗಳ ಸಾಕಷ್ಟು ದಾಸ್ತಾನು ಇದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಕರ್ನಾಟಕದ ಇತಿಹಾಸದಲ್ಲೇ ಮೊದಲು: ಪ್ರತಿಭಟಿಸುವುದಾದರೆ ಸದನದ ಬಾವಿಗೆ ಬನ್ನಿ; ವಿಪಕ್ಷ ಶಾಸಕರಿಗೆ ಸ್ಪೀಕರ್ ಆಹ್ವಾನ, BJP ಕಿಡಿ!

ಸಚಿವ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿಪಟ್ಟು: ವಿಧಾನಸೌಧ ಆವರಣದಲ್ಲಿ ಪ್ರತಿಭಟನೆ; ಸಿಎಂ ಡಿಕೆಶಿ ವಿರುದ್ಧ ವಾಗ್ದಾಳಿ; Video

ತಪ್ಪಾದ DPR ಸಿದ್ಧಪಡಿಸುವ ಸಲಹೆಗಾರರೇ ಹೆದ್ದಾರಿ ಅಪಘಾತಗಳು ಮತ್ತು ಸಾವುಗಳಿಗೆ 'ತಪ್ಪಿತಸ್ಥರು': ನಿತಿನ್ ಗಡ್ಕರಿ ಕಠಿಣ ಕ್ರಮದ ಎಚ್ಚರಿಕೆ!