ಚಿಂತನ್ ಉಪಾಧ್ಯಾಯ 
ದೇಶ

ಅವಳಿ ಕೊಲೆ ಪ್ರಕರಣದಲ್ಲಿ ಕಲಾವಿದ ಚಿಂತನ್ ಉಪಾಧ್ಯಾಯ ತಪ್ಪಿತಸ್ಥ: ಕೋರ್ಟ್ ತೀರ್ಪು 

ಕಲಾವಿದ ಚಿಂತನ್ ಉಪಾಧ್ಯಾಯ ಅವಳಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಮುಂಬೈ ನ ಸೆಷನ್ಸ್ ಕೋರ್ಟ್ ತೀರ್ಪು ಪ್ರಕಟಿಸಿದೆ.

ನವದೆಹಲಿ: ಕಲಾವಿದ ಚಿಂತನ್ ಉಪಾಧ್ಯಾಯ ಅವಳಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥ ಎಂದು ಮುಂಬೈ ನ ಸೆಷನ್ಸ್ ಕೋರ್ಟ್ ತೀರ್ಪು ಪ್ರಕಟಿಸಿದೆ.

ಪತ್ನಿ ಹೇಮಾ ಉಪಾಧ್ಯಾಯ ಹಾಗೂ ಆಕೆಯ ವಕೀಲರಾದ ಹರೀಶ್ ಭಂಭನಿ ಅವರನ್ನು ಹತ್ಯೆ ಮಾಡಿದ ಆರೋಪ ಚಿಂತನ್ ಉಪಾಧ್ಯಾಯ ವಿರುದ್ಧ ಕೇಳಿಬಂದಿತ್ತು.

ವಿಜಯ್ ರಾಜ್ಭರ್, ಪ್ರದೀಪ್ ರಾಜ್ಭರ್, ಶಿವಕುಮಾರ್ ರಾಜ್ಭರ್, ಆಜಾದ್ ರಾಜ್ಭರ್ ಅವರುಗಳ ವಿರುದ್ಧದ ಆರೋಪವೂ ಪ್ರಕರಣದಲ್ಲಿ ಸಾಬೀತಾಗಿದೆ.

2015 ರ ಡಿ.11 ರಂದು ಹೇಮಾ ಉಪಾಧ್ಯಾಯ ಹಾಗೂ ಭಂಭನಿ ಅವರನ್ನು ಹತ್ಯೆ ಮಾಡಲಾಗಿತ್ತು. ಅವರ ಮೃತದೇಹಗಳು ಮುಂಬೈನ ಕಂಡಿವಲಿ ಪ್ರದೇಶದ ಹಳ್ಳದಲ್ಲಿ ಪತ್ತೆಯಾಗಿತ್ತು.

ಉಪನಗರ ದಿಂಡೋಶಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಎಸ್ ವೈ ಭೋಸಲೆ, ಉಪಾಧ್ಯಾಯ ಅವರ ಪತ್ನಿ ಮತ್ತು ಅವರ ವಕೀಲರನ್ನು ಕೊಲ್ಲಲು ಕುಮ್ಮಕ್ಕು ನೀಡಿದ ಮತ್ತು ಸಂಚು ರೂಪಿಸಿದ ಆರೋಪದಲ್ಲಿ ತಪ್ಪಿತಸ್ಥರೆಂದು ತೀರ್ಪು ನೀಡಿದರು.

ಶಿಕ್ಷೆಯ ಪ್ರಮಾಣ ಕುರಿತ ವಿಚಾರಣೆ ಶನಿವಾರ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT