ಸಿಕ್ಕಿಂ ಪ್ರವಾಹ 
ದೇಶ

ಸಿಕ್ಕಿಂ ಪ್ರವಾಹ: ಮೃತರ ಸಂಖ್ಯೆ 14ಕ್ಕೆ ಏರಿಕೆ, 23 ಸೇನಾ ಸಿಬ್ಬಂದಿ ಸೇರಿ 102 ಮಂದಿ ನಾಪತ್ತೆ; ಮುಂದುವರಿದ ಶೋಧ ಕಾರ್ಯ

ಉತ್ತರ ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 23 ಸೇನಾ ಸಿಬ್ಬಂದಿ ಸೇರಿ 102 ಜನ ನಾಪತ್ತೆಯಾಗಿದ್ದಾರೆ.  ಕಣ್ಮರೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಗ್ಯಾಂಗ್ಟೋಕ್: ಉತ್ತರ ಸಿಕ್ಕಿಂನ ಲೊನಾಕ್ ಸರೋವರದಲ್ಲಿ ಮೇಘಸ್ಫೋಟದಿಂದಾಗಿ ತೀಸ್ತಾ ನದಿಯ ಜಲಾನಯನ ಪ್ರದೇಶದಲ್ಲಿ ಉಂಟಾದ ಹಠಾತ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿಕೆಯಾಗಿದ್ದು, 23 ಸೇನಾ ಸಿಬ್ಬಂದಿ ಸೇರಿ 102 ಜನ ನಾಪತ್ತೆಯಾಗಿದ್ದಾರೆ.  ಕಣ್ಮರೆಯಾದವರಿಗಾಗಿ ರಕ್ಷಣಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಇಲ್ಲಿಯವರೆಗೆ, 2,011 ಜನರನ್ನು ರಕ್ಷಿಸಲಾಗಿದೆ, ಆದರೆ ಬುಧವಾರ ಸಂಭವಿಸಿದ ವಿಪತ್ತು 22,034 ಜನರ ಮೇಲೆ ಪರಿಣಾಮ ಬೀರಿದೆ ಎಂದು ಸಿಕ್ಕಿಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (SSDMA) ತನ್ನ ಇತ್ತೀಚಿನ ಬುಲೆಟಿನ್‌ನಲ್ಲಿ ತಿಳಿಸಿದೆ.

ರಾಜ್ಯ ಸರ್ಕಾರವು ನಾಲ್ಕು ಪೀಡಿತ ಜಿಲ್ಲೆಗಳಲ್ಲಿ 26 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ ಎಂದು ಅದು ಹೇಳಿದೆ. ಗ್ಯಾಂಗ್ಟಾಕ್ ಜಿಲ್ಲೆಯ ಎಂಟು ಪರಿಹಾರ ಶಿಬಿರಗಳಲ್ಲಿ ಒಟ್ಟು 1,025 ಜನರು ಆಶ್ರಯ ಪಡೆಯುತ್ತಿದ್ದಾರೆ.

ಪ್ರವಾಹದಿಂದಾಗಿ ರಾಜ್ಯದಲ್ಲಿ 11 ಸೇತುವೆಗಳು ನಾಶವಾಗಿದ್ದು, ಮಂಗನ್ ಜಿಲ್ಲೆಯೊಂದರಲ್ಲೇ ಎಂಟು ಸೇತುವೆಗಳು ಕೊಚ್ಚಿ ಹೋಗಿವೆ. ನಾಮ್ಚಿಯಲ್ಲಿ ಎರಡು ಸೇತುವೆಗಳು ಮತ್ತು ಗ್ಯಾಂಗ್‌ಟಾಕ್‌ನಲ್ಲಿ ಒಂದು ಸೇತುವೆಗಳು ನಾಶವಾಗಿವೆ. ನಾಲ್ಕು ಪೀಡಿತ ಜಿಲ್ಲೆಗಳಲ್ಲಿ ನೀರಿನ ಪೈಪ್‌ಲೈನ್‌ಗಳು, ಒಳಚರಂಡಿ ಮಾರ್ಗಗಳು ಮತ್ತು 277 ಮನೆಗಳು ಹಾನಿಗೊಳಗಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT