ದೆಹಲಿ ಹೈಕೋರ್ಟ್ 
ದೇಶ

ಅಕ್ರಮವಾಗಿ ಬಂಧಿಸಿದ್ದ ವ್ಯಕ್ತಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ಪೊಲೀಸರಿಂದ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ ನೀಡಿದೆ.

ನವದೆಹಲಿ: ಪೊಲೀಸರಿಂದ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ ನೀಡಿದೆ. 

ವ್ಯಕ್ತಿಯೋರ್ವ ಅಕ್ರಮವಾಗಿ ಬಂಧನಕ್ಕೆ ಒಳಪಟ್ಟು ಅರ್ಧ ಗಂಟೆ ಲಾಕ್ ಅಪ್ ನಲ್ಲಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್, ಅಧಿಕಾರಿಗಳ ವರ್ತನೆ ಆತಂಕ ಮೂಡಿಸುತ್ತಿದ್ದು, ಅಧಿಕಾರಿಗಳು ಜನರನ್ನು ನಡೆಸಿಕೊಳ್ಳುವ ಬಗ್ಗೆ ಬೇಸರವಾಗುತ್ತಿದೆ ಎಂದು ಕೋರ್ಟ್ ಹೇಳಿದೆ.

ಸ್ಪಷ್ಟ ಸಂದೇಶ ರವಾನೆ ಮಾಡುವುದಕ್ಕಾಗಿ ನ್ಯಾ.ಸುಬ್ರಮಣ್ಯ ಪ್ರಸಾದ್, ಪರಿಹಾರ ಮೊತ್ತವನ್ನು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವೇತನದಿಂದ ಕಡಿತಗೊಳಿಸಬೇಕು ಎಂದು ಆದೇಶಿಸಿದ್ದಾರೆ. 

ಅರ್ಜಿದಾರನ ಸ್ವಾತಂತ್ರ್ಯವನ್ನು ಗೌರವಿಸದೇ ಅಥವಾ ಯಾವುದೇ ಕಾರಣವನ್ನೂ ನೀಡದೇ, ಪಾಲಿಸಬೇಕಾದ ಪ್ರಕ್ರಿಯೆಗಳನ್ನು ಪಾಲಿಸದೇ ಲಾಕ್ ಅಪ್ ನಲ್ಲಿ ಬಂಧಿಸಿಟ್ಟು ಮನಸೋ ಇಚ್ಛೆ ವರ್ತಿಸಿದ್ದಾರೆ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

"ಅರ್ಜಿದಾರರು ಲಾಕ್-ಅಪ್‌ನಲ್ಲಿ ಕಳೆದ ಸಮಯ, ಸ್ವಲ್ಪ ಸಮಯವೇ ಆದರೂ ಕಾನೂನಿನಿಂದ ಸ್ಥಾಪಿಸಲಾದ ಕಾರ್ಯವಿಧಾನವನ್ನು ಅನುಸರಿಸದೆ ಅರ್ಜಿದಾರರ ಸ್ವಾತಂತ್ರ್ಯವನ್ನು ಕಸಿದುಕೊಂಡ ಪೊಲೀಸ್ ಅಧಿಕಾರಿಗಳನ್ನು ಮುಕ್ತಗೊಳಿಸಲು ಸಾಧ್ಯವಿಲ್ಲ" ಎಂದು ತನ್ನ ಆದೇಶದಲ್ಲಿ ನ್ಯಾಯಾಲಯ ಹೇಳಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT