ದೆಹಲಿ ಹೈಕೋರ್ಟ್ 
ದೇಶ

ಅಕ್ರಮವಾಗಿ ಬಂಧಿಸಿದ್ದ ವ್ಯಕ್ತಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

ಪೊಲೀಸರಿಂದ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ ನೀಡಿದೆ.

ನವದೆಹಲಿ: ಪೊಲೀಸರಿಂದ ಅಕ್ರಮವಾಗಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ ನೀಡಿದೆ. 

ವ್ಯಕ್ತಿಯೋರ್ವ ಅಕ್ರಮವಾಗಿ ಬಂಧನಕ್ಕೆ ಒಳಪಟ್ಟು ಅರ್ಧ ಗಂಟೆ ಲಾಕ್ ಅಪ್ ನಲ್ಲಿದ್ದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್, ಅಧಿಕಾರಿಗಳ ವರ್ತನೆ ಆತಂಕ ಮೂಡಿಸುತ್ತಿದ್ದು, ಅಧಿಕಾರಿಗಳು ಜನರನ್ನು ನಡೆಸಿಕೊಳ್ಳುವ ಬಗ್ಗೆ ಬೇಸರವಾಗುತ್ತಿದೆ ಎಂದು ಕೋರ್ಟ್ ಹೇಳಿದೆ.

ಸ್ಪಷ್ಟ ಸಂದೇಶ ರವಾನೆ ಮಾಡುವುದಕ್ಕಾಗಿ ನ್ಯಾ.ಸುಬ್ರಮಣ್ಯ ಪ್ರಸಾದ್, ಪರಿಹಾರ ಮೊತ್ತವನ್ನು ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವೇತನದಿಂದ ಕಡಿತಗೊಳಿಸಬೇಕು ಎಂದು ಆದೇಶಿಸಿದ್ದಾರೆ. 

ಅರ್ಜಿದಾರನ ಸ್ವಾತಂತ್ರ್ಯವನ್ನು ಗೌರವಿಸದೇ ಅಥವಾ ಯಾವುದೇ ಕಾರಣವನ್ನೂ ನೀಡದೇ, ಪಾಲಿಸಬೇಕಾದ ಪ್ರಕ್ರಿಯೆಗಳನ್ನು ಪಾಲಿಸದೇ ಲಾಕ್ ಅಪ್ ನಲ್ಲಿ ಬಂಧಿಸಿಟ್ಟು ಮನಸೋ ಇಚ್ಛೆ ವರ್ತಿಸಿದ್ದಾರೆ ಎಂದು ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

"ಅರ್ಜಿದಾರರು ಲಾಕ್-ಅಪ್‌ನಲ್ಲಿ ಕಳೆದ ಸಮಯ, ಸ್ವಲ್ಪ ಸಮಯವೇ ಆದರೂ ಕಾನೂನಿನಿಂದ ಸ್ಥಾಪಿಸಲಾದ ಕಾರ್ಯವಿಧಾನವನ್ನು ಅನುಸರಿಸದೆ ಅರ್ಜಿದಾರರ ಸ್ವಾತಂತ್ರ್ಯವನ್ನು ಕಸಿದುಕೊಂಡ ಪೊಲೀಸ್ ಅಧಿಕಾರಿಗಳನ್ನು ಮುಕ್ತಗೊಳಿಸಲು ಸಾಧ್ಯವಿಲ್ಲ" ಎಂದು ತನ್ನ ಆದೇಶದಲ್ಲಿ ನ್ಯಾಯಾಲಯ ಹೇಳಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!