ವ್ಯಕ್ತಿಯ ಮೃತದೇಹ ಕಾಲುವೆಗೆ ಎಸೆದ ಪೊಲೀಸರು 
ದೇಶ

ಬಿಹಾರ: ಅಪಘಾತದಲ್ಲಿ ಛಿದ್ರಗೊಂಡಿದ್ದ ವ್ಯಕ್ತಿಯ ಮೃತದೇಹ ಕಾಲುವೆಗೆ ಎಸೆದ ಪೊಲೀಸರ ಅಮಾನತು

ಬಿಹಾರದ ಮುಜಫರ್‌ಪುರ ಜಿಲ್ಲೆಯ ಫಕುಲಿ ಔಟ್‌ಪೋಸ್ಟ್ ಪ್ರದೇಶದ ಧೋಧಿ ಕಾಲುವೆ ಸೇತುವೆಯ ಬಳಿ ಅಪಘಾತದಲ್ಲಿ ಛಿದ್ರಗೊಂಡಿದ್ದ ವ್ಯಕ್ತಿಯ ಮೃತದೇಹವನ್ನು ಕಾಲುವೆಗೆ ಎಸೆದ ಮೂವರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ...

ಮುಜಫರ್‌ಪುರ: ಬಿಹಾರದ ಮುಜಫರ್‌ಪುರ ಜಿಲ್ಲೆಯ ಫಕುಲಿ ಔಟ್‌ಪೋಸ್ಟ್ ಪ್ರದೇಶದ ಧೋಧಿ ಕಾಲುವೆ ಸೇತುವೆಯ ಬಳಿ ಅಪಘಾತದಲ್ಲಿ ಛಿದ್ರಗೊಂಡಿದ್ದ ವ್ಯಕ್ತಿಯ ಮೃತದೇಹವನ್ನು ಕಾಲುವೆಗೆ ಎಸೆದ ಮೂವರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ ಅಮಾನತುಗೊಳಿಸಲಾಗಿದೆ.

ಈ ಮೂವರು ಪೊಲೀಸ್ ಸಿಬ್ಬಂದಿ ಮೃತ ವ್ಯಕ್ತಿಯ ದೇಹವನ್ನು ರಸ್ತೆಯಿಂದ ಎಳೆದು ಕಾಲುವೆಗೆ ಎಸೆಯುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಮೃತ ವ್ಯಕ್ತಿಗೆ ಸೂಕ್ತ ಗೌರವ ನೀಡದೆ, ಅಮಾನವೀಯವಾಗಿ ನಡೆದುಕೊಂಡ ಪೊಲೀಸರ ಕೃತ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

"ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗಿದ್ದು, ಅದು ನಿಜವೆಂದು ತಿಳಿದುಬಂದಿದೆ. ಇದು ದುರದೃಷ್ಟಕರ ಘಟನೆ ಮತ್ತು ಅಲ್ಲಿದ್ದ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾಗಿದ್ದಾರೆ. ಹೀಗಾಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಮುಜಾಫರ್‌ಪುರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತ ದೇಹದ ಭಾಗಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ವ್ಯಕ್ತಿಯ ಗುರುತು ಖಚಿತಪಡಿಸಲು ಇಲ್ಲಿಯವರೆಗೆ ಸಾಧ್ಯವಾಗಿಲ್ಲ ಎಂದು ಪ್ರಕಟಣೆ ಹೇಳಿದೆ.

ವಿಡಿಯೋದಲ್ಲಿ ವ್ಯಕ್ತಿಯ ರಕ್ತಸಿಕ್ತ ದೇಹವನ್ನು ಇಬ್ಬರು ಪೊಲೀಸರು ರಸ್ತೆಯ ಮೇಲೆ ಎಳೆದುಕೊಂಡು ಹೋಗಿದ್ದಾರೆ. ಬಳಿಕ ಮತ್ತೊಬ್ಬ ಪೊಲೀಸ್ ಸಿಬ್ಬಂದಿ, ಶವವನ್ನು ಎತ್ತಿ ಕಾಲುವೆಗೆ ಎಸೆಯುವುದಕ್ಕೆ ಅವರಿಗೆ ಸಹಾಯ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT