ವ್ಯಕ್ತಿಯ ಮೃತದೇಹ ಕಾಲುವೆಗೆ ಎಸೆದ ಪೊಲೀಸರು 
ದೇಶ

ಬಿಹಾರ: ಅಪಘಾತದಲ್ಲಿ ಛಿದ್ರಗೊಂಡಿದ್ದ ವ್ಯಕ್ತಿಯ ಮೃತದೇಹ ಕಾಲುವೆಗೆ ಎಸೆದ ಪೊಲೀಸರ ಅಮಾನತು

ಬಿಹಾರದ ಮುಜಫರ್‌ಪುರ ಜಿಲ್ಲೆಯ ಫಕುಲಿ ಔಟ್‌ಪೋಸ್ಟ್ ಪ್ರದೇಶದ ಧೋಧಿ ಕಾಲುವೆ ಸೇತುವೆಯ ಬಳಿ ಅಪಘಾತದಲ್ಲಿ ಛಿದ್ರಗೊಂಡಿದ್ದ ವ್ಯಕ್ತಿಯ ಮೃತದೇಹವನ್ನು ಕಾಲುವೆಗೆ ಎಸೆದ ಮೂವರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ...

ಮುಜಫರ್‌ಪುರ: ಬಿಹಾರದ ಮುಜಫರ್‌ಪುರ ಜಿಲ್ಲೆಯ ಫಕುಲಿ ಔಟ್‌ಪೋಸ್ಟ್ ಪ್ರದೇಶದ ಧೋಧಿ ಕಾಲುವೆ ಸೇತುವೆಯ ಬಳಿ ಅಪಘಾತದಲ್ಲಿ ಛಿದ್ರಗೊಂಡಿದ್ದ ವ್ಯಕ್ತಿಯ ಮೃತದೇಹವನ್ನು ಕಾಲುವೆಗೆ ಎಸೆದ ಮೂವರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ ಅಮಾನತುಗೊಳಿಸಲಾಗಿದೆ.

ಈ ಮೂವರು ಪೊಲೀಸ್ ಸಿಬ್ಬಂದಿ ಮೃತ ವ್ಯಕ್ತಿಯ ದೇಹವನ್ನು ರಸ್ತೆಯಿಂದ ಎಳೆದು ಕಾಲುವೆಗೆ ಎಸೆಯುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಮೃತ ವ್ಯಕ್ತಿಗೆ ಸೂಕ್ತ ಗೌರವ ನೀಡದೆ, ಅಮಾನವೀಯವಾಗಿ ನಡೆದುಕೊಂಡ ಪೊಲೀಸರ ಕೃತ್ಯಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.

"ವೀಡಿಯೊದ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗಿದ್ದು, ಅದು ನಿಜವೆಂದು ತಿಳಿದುಬಂದಿದೆ. ಇದು ದುರದೃಷ್ಟಕರ ಘಟನೆ ಮತ್ತು ಅಲ್ಲಿದ್ದ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಲು ವಿಫಲರಾಗಿದ್ದಾರೆ. ಹೀಗಾಗಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಮುಜಾಫರ್‌ಪುರ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಮೃತ ದೇಹದ ಭಾಗಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮೃತ ವ್ಯಕ್ತಿಯ ಗುರುತು ಖಚಿತಪಡಿಸಲು ಇಲ್ಲಿಯವರೆಗೆ ಸಾಧ್ಯವಾಗಿಲ್ಲ ಎಂದು ಪ್ರಕಟಣೆ ಹೇಳಿದೆ.

ವಿಡಿಯೋದಲ್ಲಿ ವ್ಯಕ್ತಿಯ ರಕ್ತಸಿಕ್ತ ದೇಹವನ್ನು ಇಬ್ಬರು ಪೊಲೀಸರು ರಸ್ತೆಯ ಮೇಲೆ ಎಳೆದುಕೊಂಡು ಹೋಗಿದ್ದಾರೆ. ಬಳಿಕ ಮತ್ತೊಬ್ಬ ಪೊಲೀಸ್ ಸಿಬ್ಬಂದಿ, ಶವವನ್ನು ಎತ್ತಿ ಕಾಲುವೆಗೆ ಎಸೆಯುವುದಕ್ಕೆ ಅವರಿಗೆ ಸಹಾಯ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್