ಮಲ್ಲಿಕಾರ್ಜುನ ಖರ್ಗೆ 
ದೇಶ

ಬಿಜೆಪಿ, ಮಿತ್ರಪಕ್ಷಗಳ ವಿದಾಯಕ್ಕೆ ಮುಹೂರ್ತ ಫಿಕ್ಸ್: ಪಂಚ ರಾಜ್ಯಗಳ ಚುನಾವಣೆ ವೇಳಾಪಟ್ಟಿ ಘೋಷಣೆಗೆ ಮಲ್ಲಿಕಾರ್ಜುನ ಖರ್ಗೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷವು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಜನರ ಬಳಿಗೆ ಹೋಗುತ್ತದೆ ಮತ್ತು ಸಾರ್ವಜನಿಕ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಪ್ರಗತಿಪರ ಅಭಿವೃದ್ಧಿಯನ್ನು ಭರವಸೆಯಾಗಿ ನೀಡುತ್ತದೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತಿಳಿಸಿದ್ದಾರೆ.

ನವದೆಹಲಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ಚುನಾವಣಾ ಆಯೋಗವು ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಪಕ್ಷವು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಜನರ ಬಳಿಗೆ ಹೋಗುತ್ತದೆ ಮತ್ತು ಸಾರ್ವಜನಿಕ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಪ್ರಗತಿಪರ ಅಭಿವೃದ್ಧಿಯನ್ನು ಭರವಸೆಯಾಗಿ ನೀಡುತ್ತದೆ ಎಂದು ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ತಿಳಿಸಿದ್ದಾರೆ.

'5 ರಾಜ್ಯಗಳಲ್ಲಿ ಚುನಾವಣೆ ಘೋಷಣೆಯಾಗುವುದರೊಂದಿಗೆ ಬಿಜೆಪಿ ಮತ್ತು ಅದರ ಮಿತ್ರಪಕ್ಷಗಳ ವಿದಾಯವನ್ನೂ ಘೋಷಿಸಲಾಗಿದೆ' ಎಂದಿದ್ದಾರೆ.

ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಕಾಂಗ್ರೆಸ್ ಪಕ್ಷವು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಜನರ ಬಳಿಗೆ ಹೋಗಲಿದೆ. ಸಾರ್ವಜನಿಕ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಪ್ರಗತಿಪರ ಅಭಿವೃದ್ಧಿಯು ಕಾಂಗ್ರೆಸ್ ಪಕ್ಷದ ಭರವಸೆಗಳು ಎಂದು ಅವರು ಟ್ವೀಟ್ ಮಾಡಿದ್ದಾರೆ. 

ಐದು ರಾಜ್ಯಗಳಾದ ಮಿಜೋರಾಂ, ಛತ್ತೀಸ್‌ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣದಲ್ಲಿ ನವೆಂಬರ್ 7ರಿಂದ 30ರವರೆಗೆ ವಿವಿಧ ದಿನಗಳಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಸೋಮವಾರ ತಿಳಿಸಿದೆ. 2024ರ ಲೋಕಸಭೆ ಚುನಾವಣೆಗೂ ಮುನ್ನ ಇದು ಸೆಮಿಫೈನಲ್ ಎಂದೇ ಬಿಂಬಿಸಲಾಗುತ್ತಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT