ರಾಹುಲ್ ಗಾಂಧಿ 
ದೇಶ

ಇನ್ನೂ ಮದುವೆಯಾಗದಿರುವುದಕ್ಕೆ ಕಾರಣ ಬಹಿರಂಗಪಡಿಸಿದ ರಾಹುಲ್ ಗಾಂಧಿ! ವಿಡಿಯೋ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಮದುವೆಯಾಗದಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ, ವಯಸ್ಸು 53 ಆದರೂ ಇನ್ನು ಮದುವೆಯಾಗದೆ ಬ್ರಹ್ಮಚಾರಿಯಾಗಿ ಉಳಿದಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ.

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇನ್ನೂ ಮದುವೆಯಾಗದಿರುವುದಕ್ಕೆ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಜೈಪುರದ ಮಹಾರಾಣಿ ಕಾಲೇಜಿನ ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದಲ್ಲಿ, ವಯಸ್ಸು 53 ಆದರೂ ಇನ್ನು ಮದುವೆಯಾಗದೆ ಬ್ರಹ್ಮಚಾರಿಯಾಗಿ ಉಳಿದಿರುವುದಕ್ಕೆ ಕಾರಣವನ್ನು ತಿಳಿಸಿದ್ದಾರೆ. ಗಾಂಧಿಯವರ ಸಂವಾದದ ವೀಡಿಯೊವನ್ನು ಮಂಗಳವಾರ ಅವರ ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಲಾಗಿದೆ.

' ನೀವು ತುಂಬಾ ಸ್ಮಾರ್ಟ್ ಹಾಗೂ ಗುಡ್ ಲುಕಿಂಗ್' ಇದ್ದರೂ ಯಾಕೆ ಇನ್ನೂ ಮದುವೆ ಬಗ್ಗೆ ಯೋಚಿಸಿಲ್ಲ? ಅಂತಾ ಯುವತಿಯೊಬ್ಬಳು ಕೇಳುತ್ತಾಳೆ. ಆಗ ತಕ್ಷಣವೇ  ಉತ್ತರಿಸಿದ ರಾಹುಲ್ ಗಾಂಧಿ, ನನ್ನ ಕೆಲಸ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಸಂಪೂರ್ಣವಾಗಿ ಸಿಕ್ಕಿಹಾಕಿಕೊಂಡಿದ್ದೇನೆ. ಹಾಗಾಗಿ ಮದುವೆಯಾಗಿಲ್ಲ ಎನ್ನುತ್ತಾರೆ. 

 ರಾಹುಲ್ ಅವರ ನೆಚ್ಚಿನ ತಿನಿಸುಗಳ ಬಗ್ಗೆ ಕೇಳಿದಾಗ, ಹಾಗಲಕಾಯಿ, ಬಟಾಣಿ ಮತ್ತು ಪಾಲಕ್ ಹೊರತುಪಡಿಸಿ ಎಲ್ಲವನ್ನೂ ಚೆನ್ನಾಗಿ ತಿನ್ನುತ್ತೇನೆ. ನಾನು ಯಾವಾಗಲೂ ಹೊಸ ಸ್ಥಳಗಳನ್ನು ನೋಡಲು ಇಷ್ಟಪಡುತ್ತೇನೆ ಎಂದು ಪ್ರತ್ಯೇಕ ಪ್ರಶ್ನೆಗಳಿಗೆ ಉತ್ತರಿಸುತ್ತಾ ಹೋಗುತ್ತಾರೆ. ಮುಖದ ಸೌಂದರ್ಯ ಕಾಪಾಡಲು ಏನನ್ನು ಹಚ್ಚುತ್ತಿರಾ? ಎಂದು ಮತ್ತೊಬ್ಬರು ಕೇಳುತ್ತಾರೆ. ಅದಕ್ಕೆ  ಉತ್ತರಿಸಿದ ರಾಹುಲ್, ಯಾವುದೇ ಕ್ರಿಮ್ ಅಥವಾ ಸೋಪ್ ಬಳಸುವುದಿಲ್ಲ. ನೀರಿನಿಂದ ಮಾತ್ರ ತೊಳೆಯುತ್ತೇನೆ ಎಂದು ತಿಳಿಸಿದರು. 

ಹೀಗೆ ಸಮಾಜದಲ್ಲಿ ಮಹಿಳೆಯರ ವಿರುದ್ಧದ ತಾರತಮ್ಯ, ಆರ್ಥಿಕ ಸ್ವಾತಂತ್ರ್ಯ ಸೇರಿದಂತೆ ಹಲವು ಪ್ರಶ್ನೆಗಳು ರಾಹುಲ್ ಗಾಂಧಿ ಅವರಿಗೆ ಎದುರಾಗಿದ್ದು, ಎಲ್ಲಾ ಪ್ರಶ್ನೆಗಳಿಗೂ ಸಮಚಿತ್ತದಿಂದಲೇ ರಾಹುಲ್ ಗಾಂಧಿ ಉತ್ತರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT