ಲತಾ ರಜನಿಕಾಂತ್ 
ದೇಶ

ಕೊಚ್ಚಾಡಿಯನ್ ವಂಚನೆ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ರಜನಿಕಾಂತ್ ಪತ್ನಿಗೆ ಹಿನ್ನಡೆ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ  ದೀಪಿಕಾ ಪಡುಕೋಣೆ ಅಭಿನಯದ ಕೊಚ್ಚಾಡಿಯನ್ ಚಿತ್ರಕ್ಕೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.

ನವದೆಹಲಿ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ  ದೀಪಿಕಾ ಪಡುಕೋಣೆ ಅಭಿನಯದ ಕೊಚ್ಚಾಡಿಯನ್ ಚಿತ್ರಕ್ಕೆ ಸಂಬಂಧಿಸಿದ ವಂಚನೆ ಪ್ರಕರಣದಲ್ಲಿ ಲತಾ ರಜನಿಕಾಂತ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ತೀವ್ರ ಹಿನ್ನಡೆಯಾಗಿದೆ.

ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಲತಾ ರಜನಿಕಾಂತ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠ, ವಂಚನೆ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

ತಮ್ಮ ವಿರುದ್ಧದ ವಂಚನೆ ಪ್ರಕರಣ ರದ್ದುಗೊಳಿಸುವಂತೆ ಲತಾ ರಜನಿಕಾಂತ್ ಅವರು ಮಾಡಿದ್ದ ಮನವಿಯನ್ನು ನ್ಯಾಯಮೂರ್ತಿಗಳಾದ ಎಎಸ್ ಬೋಪಣ್ಣ ಮತ್ತು ಎಂಎಂ ಸುಂದ್ರೇಶ್ ಅವರ ಪೀಠ ತಿರಸ್ಕರಿಸಿದೆ. ವಿಚಾರಣಾ ನ್ಯಾಯಾಲಯದಲ್ಲಿ ಪ್ರಕರಣ ರದ್ದು ಕೋರುವುದು ಅಥವಾ ವಿಚಾರಣೆ ಎದುರಿಸುವುದು ಲತಾ ರಜನಿಕಾಂತ್‌ಗೆ ಇರುವ ಏಕೈಕ ದಾರಿ ಎಂದು ಹೇಳಿದೆ.

ಲತಾ ರಜನಿಕಾಂತ್ ಅವರ ವಿರುದ್ಧದ ಆರೋಪಗಳನ್ನು ಮೌಲ್ಯಮಾಪನ ಮಾಡದೆ ಅವರ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಖಡಾಖಂಡಿತವಾಗಿ ಹೇಳಿದೆ.

ವಿಚಾರಣಾ ನ್ಯಾಯಾಲಯವು ಪ್ರಕರಣದ ಅರ್ಹತೆ ಮತ್ತು ಕಾನೂನಿನ ಪ್ರಕಾರ ಈ ಪ್ರಕರಣವನ್ನು ಪರಿಗಣಿಸಲು ನಿರ್ದೇಶಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ. ಆದರೆ, ನ್ಯಾಯಾಲಯ ನಿರ್ದೇಶನ ನೀಡದ ಹೊರತು ಲತಾ ರಜನಿಕಾಂತ್‌ ಅವರು ಬೆಂಗಳೂರಿನ ವಿಚಾರಣಾ ನ್ಯಾಯಾಲಯದ ಮುಂದೆ ಹಾಜರಾಗುವ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT