ಪಟಾಕಿ ಗೋದಾಮಿನಲ್ಲಿ ಸ್ಫೋಟದ ಚಿತ್ರ 
ದೇಶ

ತಮಿಳುನಾಡು: ಪಟಾಕಿ ಗೋದಾಮಿನಲ್ಲಿ ಸ್ಫೋಟ, 11 ಜನರ ಸಾವು, 12 ಮಂದಿಗೆ ಗಾಯ; ಮಾಲೀಕ ಸೇರಿ ಇಬ್ಬರ ಬಂಧನ

ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಮಂಗಳವಾರ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ.

ಅರಿಯಲೂರು: ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಮಂಗಳವಾರ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ.
ಹೌದು. ಅರಿಯಲೂರು ಜಿಲ್ಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ.

ಆರಂಭದಲ್ಲಿ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಈಗ ಅದು ಹೆಚ್ಚಾಗಿದ್ದು, ಸಾವು ನೋವಿನ ಬಗ್ಗೆ ಜಿಲ್ಲಾಧಿಕಾರಿ ಖಚಿತ ಮಾಡಿದ್ದಾರೆ. ವೀರಗಳೂರು ಪಟ್ಟಣದಲ್ಲಿ ನಡೆದ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರಿಯಲೂರು ಜಿಲ್ಲಾಧಿಕಾರಿ ಅನ್ನೆ ಮೇರಿ ಸ್ವರ್ಣ ತಿಳಿಸಿದ್ದಾರೆ.

ಗಾಯಗೊಂಡ 12 ಜನರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪಟಾಕಿ ಗೋದಾಮಿನ ಮಾಲೀಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಸ್ವರ್ಣಾ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT