ಪಟಾಕಿ ಗೋದಾಮಿನಲ್ಲಿ ಸ್ಫೋಟದ ಚಿತ್ರ 
ದೇಶ

ತಮಿಳುನಾಡು: ಪಟಾಕಿ ಗೋದಾಮಿನಲ್ಲಿ ಸ್ಫೋಟ, 11 ಜನರ ಸಾವು, 12 ಮಂದಿಗೆ ಗಾಯ; ಮಾಲೀಕ ಸೇರಿ ಇಬ್ಬರ ಬಂಧನ

ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಮಂಗಳವಾರ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ.

ಅರಿಯಲೂರು: ಕರ್ನಾಟಕದ ಗಡಿ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸ್ಫೋಟ ಸಂಭವಿಸಿ 14 ಮಂದಿ ಕಾರ್ಮಿಕರು ಮೃತಪಟ್ಟ ಬೆನ್ನಲ್ಲೇ ತಮಿಳುನಾಡಿನಲ್ಲಿಯೂ ಮಂಗಳವಾರ ಅಂತಹುದೇ ಘಟನೆ ನಡೆದಿದ್ದು, 11 ಜನರು ದುರ್ಮರಣ ಹೊಂದಿದ್ದಾರೆ.
ಹೌದು. ಅರಿಯಲೂರು ಜಿಲ್ಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ 11 ಜನರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ.

ಆರಂಭದಲ್ಲಿ ಘಟನೆಯಲ್ಲಿ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿತ್ತು. ಆದರೆ, ಈಗ ಅದು ಹೆಚ್ಚಾಗಿದ್ದು, ಸಾವು ನೋವಿನ ಬಗ್ಗೆ ಜಿಲ್ಲಾಧಿಕಾರಿ ಖಚಿತ ಮಾಡಿದ್ದಾರೆ. ವೀರಗಳೂರು ಪಟ್ಟಣದಲ್ಲಿ ನಡೆದ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಅರಿಯಲೂರು ಜಿಲ್ಲಾಧಿಕಾರಿ ಅನ್ನೆ ಮೇರಿ ಸ್ವರ್ಣ ತಿಳಿಸಿದ್ದಾರೆ.

ಗಾಯಗೊಂಡ 12 ಜನರನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಪಟಾಕಿ ಗೋದಾಮಿನ ಮಾಲೀಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ಸ್ವರ್ಣಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

LS Debate: ಸರ್ಕಾರ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು, ತತ್ತರಿಸಿ ಹೋಗಿದೆ- ಅಖಿಲೇಶ್ ಯಾದವ್

LS Debate: ದೇಶದ ಯುವಶಕ್ತಿಗೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬೆಚ್ಚಿಬಿದ್ದಿದೆ: ಸಂಸದೆ ಪ್ರಿಯಾಂಕಾ ವಾದ್ರಾ

ಬರದ ನಡುವೆ ರಾಜ್ಯಕ್ಕೆ ಮತ್ತೊಂದು ಹೊರೆ: ತಮಿಳುನಾಡಿಗೆ ಪ್ರತಿದಿನ 3,500 ಕ್ಯೂಸೆಕ್ ನೀರು ಬಿಡಲು CWRC ಆದೇಶ!

5 ವಿಕೆಟ್‌, 0 ರನ್‌: ಜಸ್ಟಿನ್ ಗ್ರೀವ್ಸ್ ಮಾರಕ ದಾಳಿಗೆ ಪಾಕಿಸ್ತಾನ ತತ್ತರ; ಹೊಸ ವಿಶ್ವದಾಖಲೆ ಬರೆದ ವಿಂಡೀಸ್ ವೇಗಿ! Video

ಜಾತಿ ಆಧಾರಿತ ಮೀಸಲಾತಿ ಬೇಡ ಪೋಸ್ಟ್ ವೈರಲ್: ಈ ಕುರಿತು ನಟಿ ಶಿಲ್ಪಾ ಶೆಟ್ಟಿ ತೀಕ್ಷ್ಣ ಪ್ರತಿಕ್ರಿಯೆ!