ಕೇಂದ್ರ ಸಚಿವ ಆರ್ ಕೆ ಸಿಂಗ್ ಅವರೊಂದಿಗೆ ಕೆಜೆ ಜಾರ್ಜ್ 
ದೇಶ

ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತ: ಕೇಂದ್ರ ಸಚಿವ ಆರ್ ಕೆ ಸಿಂಗ್ ಭೇಟಿಯಾದ ಕೆ.ಜೆ.ಜಾರ್ಜ್!

ರಾಜ್ಯದಲ್ಲಿ ಮಳೆ ಕೊರೆತೆಯಿಂದ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಬೆನ್ನಲ್ಲೇ, ಇಂಧನ ಸಚಿವ ಕೆ. ಜೆ. ಜಾರ್ಜ್ ಬುಧವಾರ ಸಂಜೆ ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ. ಸಿಂಗ್ ಅವರನ್ನು ಭೇಟಿಯಾಗಿ, ರಾಜ್ಯದ ಇಂಧನ ಪರಿಸ್ಥಿತಿ ಕುರಿತು ಮನವರಿಕೆ ಮಾಡಿಕೊಟ್ಟರು. 

ನವದೆಹಲಿ: ರಾಜ್ಯದಲ್ಲಿ ಮಳೆ ಕೊರೆತೆಯಿಂದ ವಿದ್ಯುತ್ ಉತ್ಪಾದನೆ ಕುಂಠಿತವಾಗಿರುವ ಬೆನ್ನಲ್ಲೇ, ಇಂಧನ ಸಚಿವ ಕೆ. ಜೆ. ಜಾರ್ಜ್ ಬುಧವಾರ ಸಂಜೆ ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಆರ್.ಕೆ. ಸಿಂಗ್ ಅವರನ್ನು ಭೇಟಿಯಾಗಿ, ರಾಜ್ಯದ ಇಂಧನ ಪರಿಸ್ಥಿತಿ ಕುರಿತು ಮನವರಿಕೆ ಮಾಡಿಕೊಟ್ಟರು. 

ವಿದ್ಯುತ್ ಬೇಡಿಕೆಯ ಹೆಚ್ಚಳದ ದೃಷ್ಟಿಯಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ತೆಗೆದುಕೊಂಡ ಕ್ರಮಗಳ ಬಗ್ಗೆ ವಿವರಿಸಿದರು. ಕೇಂದ್ರೀಯ ವಿದ್ಯುತ್ ಉತ್ಪಾದನಾ ಕೇಂದ್ರಗಳಲ್ಲಿ ಹೆಚ್ಚಿನ ಪಾಲು ನೀಡುವ ಮೂಲಕ ಕರ್ನಾಟಕದ ಹೆಚ್ಚುವರಿ ವಿದ್ಯುತ್ ಅಗತ್ಯವನ್ನು ಪೂರೈಸಲು ಬೆಂಬಲಿಸಬೇಕೆಂದು ಕೇಂದ್ರ ಸಚಿವರ ಬಳಿ ಮನವಿ ಮಾಡಿಕೊಂಡರು. 

ಕರ್ನಾಟಕ ಇಂಧನ ಸಚಿವಾಲಯದ ವಿವಿಧ ನವೀನ ಯೋಜನೆಗಳ ವಿವರಗಳನ್ನು ಕೇಂದ್ರ ಸಚಿವರೊಂದಿಗೆ ಹಂಚಿಕೊಂಡ ಕೆಜೆ ಜಾರ್ಜ್, ರಾಜ್ಯವು ವಾಯು ಮತ್ತು ಸೌರ ಶಕ್ತಿಯ ಮೂಲಗಳಿಂದ ಶಕ್ತಿ ಉತ್ಪಾದನೆಗೆ ಹೆಚ್ಚು ಒತ್ತು ನೀಡುತ್ತಿದ್ದು, ನವೀಕರಿಸಲಾಗದ ಇಂಧನ ಉತ್ಪಾದನೆಯ ಮೂಲಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿದೆ ಎಂದರು. 

ಶುದ್ಧ ಮತ್ತು ಸಮರ್ಥ ನವೀಕರಿಸಬಹುದಾದ ಇಂಧನ ಮೂಲಗಳತ್ತ ಸಾಗುತ್ತಿರುವ ಬಗ್ಗೆ ಸಚಿವರು ವಿವರಿಸಿದ್ದಾರೆ. ಈ ಸಂದರ್ಭದಲ್ಲಿ  ರಾಜ್ಯ ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT